ಬಿಳಿಗಿರಿರಂಗನ ಬೆಟ್ಟದಲ್ಲಿ ಹುಂಡಿ ಎಣಿಕೆ: 35 ಲಕ್ಷ ಸಂಗ್ರಹ, ಹುಂಡಿಯಲ್ಲಿ ಡಾಲರ್!
ಚಾಮರಾಜನಗರ, ಜೂ28: ಯಳಂದೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದ ದೇವಾಲಯ ಹುಂಡಿ ಎಣಿಕೆ ನಡೆದಿದ್ದು, 35 ಲಕ್ಷ ರೂ. ಹಣ ಸಂಗ್ರಹವಾಗಿದೆ. 3 ತಿಂಗಳು 8 ದಿನದ ಬಳಿಕ ನಡೆದ ಹುಂಡಿ ಎಣಿಕೆಯಲ್ಲಿ 35,59,990 ರೂ. ಹಣ ಸಂಗ್ರಹವಾಗಿದ್ದು 3 ಅಮೆರಿಕನ್ ಡಾಲರ್ ಕೂಡ ಕೆಲ ಭಕ್ತರು ಅರ್ಪಿಸಿದ್ದಾರೆ. ಚಿನ್ನ-ಬೆಳ್ಳಿ ತೂಕವನ್ನು ಮಾಡದೇ ಮರಳಿ ಹುಂಡಿಗೇ ಹಾಕಲಾಗಿದ್ದು, ಮುಂದಿನ ಬಾರಿ ಮಾಡಲಾಗುತ್ತದೆ ಎಂದು ಬಿಳಿಗಿರಿರಂಗನ ಬೆಟ್ಟದ ಇಒ ಮೋಹನ್ ಮಾಹಿತಿ ನೀಡಿದ್ದಾರೆ.
ಬೆಟ್ಟ ನವೀಕರಣಗೊಂಡ ನಂತರ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಬಿಳಿಗಿರಿರಂಗನ ಬೆಟ್ಟ ನವೀಕರಣಗೊಂಡ ಬಳಿಕ ಭಕ್ತರು, ಪ್ರವಾಸಿಗರ ಸಂಖ್ಯೆ ದ್ವಿಗುಣಗೊಂಡಿದ್ದು ವಾರಾಂತ್ಯದಲ್ಲಿ ಪ್ರಕೃತಿ ಚೆಲುವು ಕಣ್ತುಂಬಿಕೊಳ್ಳಲು ಜನ ಕಿಕ್ಕಿರಿದು ಸೇರುತ್ತಿದ್ದಾರೆ. ಬಿಳಿಗಿರಿರಂಗನ ಬೆಟ್ಟ ಶ್ರೇಣಿಯು ಮೂಲವಾಗಿ ಚಾಮರಾಜನಗರ ಜಿಲ್ಲೆಯ ಯಳಂದೂರು ಮತ್ತು ಕೊಳ್ಳೆಗಾಲ ತಾಲೂಕಿನಲ್ಲಿ ಚಾಚಿವೆ. ಅಲ್ಲದೆ ಸತ್ಯಮಂಗಲಂ ಅಭಯಾರಣ್ಯ ಹಾಗೂ ತಮಿಳುನಾಡಿನ ಈರೋಡ್ ಜಿಲ್ಲೆಗೆ ಹತ್ತಿರವಾಗಿವೆ. ಪಶ್ಚಿಮ ಘಟ್ಟದ ಪೂರ್ವ ತುದಿಯಲ್ಲಿ ನೆಲೆಸಿರುವ ಈ ಬೆಟ್ಟ ಶ್ರೇಣಿಯು ವೈವಿಧ್ಯಮಯ ಪ್ರಾಣಿ ಸಂಪತ್ತು ಹಾಗೂ ಸಸ್ಯ ಸಂಪತ್ತಿನಿಂದ ಕೂಡಿದ್ದು, ದಟ್ಟವಾದ ಗಿಡ ಮರಗಳು ಪ್ರದೇಶಕ್ಕೆ ಹಸಿರು ಹಾಸಿಗೆಯನ್ನು ಹೊದಿಸಿದ ಹಾಗೆ ಮಾಡಿವೆ.

ಸೋಲಿಗರ ಪಾಲಿಗೆ ಅತ್ಯಂತ ಪವಿತ್ರವಾದ ದೊಡ್ಡಸಂಪಿಗೆ ಮರ
ವಿಷ್ಣುವಿನ ಅವತಾರವಾದ ಶ್ರೀ ರಂಗನಾಥ ಸ್ವಾಮಿಯು ಇಲ್ಲಿ ನೆಲೆಸಿರುವುದರಿಂದ ಇದಕ್ಕೆ ಬಿಳಿಗಿರಿ ರಂಗನ ಬೆಟ್ಟ ಎಂಬ ಹೆಸರು ಬಂದಿತೆಂದು ಹೇಳಲಾಗಿದೆ. ಪ್ರತಿ ವರ್ಷ ವೈಶಾಖ ಮಾಸ ಅಂದರೆ ಏಪ್ರಿಲ್ ಸಮಯದಲ್ಲಿ ಇಲ್ಲಿ ರಥೋತ್ಸವವನ್ನು ಅತಿ ವಿಜೃಂಭಣೆಯಿಂದ ನೆರವೇರಿಸಲಾಗುತ್ತದೆ. ಸ್ಥಳಿಯ ಸೋಲಿಗ ಸಮುದಾಯದವರು ಶ್ರೀರಂಗನಾಥನಿಗೆ ಎರಡು ವರ್ಷಕ್ಕೊಮ್ಮೆ ಒಂದು ಅಡಿ ಒಂಭತ್ತು ಅಂಗುಲಗಳಷ್ಟು ಆಕಾರದ ಚರ್ಮದ ಪಾದರಕ್ಷೆಗಳನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ.

ಸ್ಥಳೀಯ ಸೋಲಿಗರ ಪಾಲಿಗೆ ಅತ್ಯಂತ ಪವಿತ್ರವಾದ ದೊಡ್ಡಸಂಪಿಗೆ ಮರವನ್ನು ಇಲ್ಲಿ ಕಾಣಬಹುದು. ಅಲ್ಲದೆ ಸಾಕಷ್ಟು ಸಂಪಿಗೆ ಮರಗಳು ಇಲ್ಲಿ ಕಂಡುಬರುತ್ತವೆ. ಕಾವೇರಿಯ ಉಪನದಿಯಾದ ಭಾರ್ಗವಿ ನದಿಯ ದಡದ ಮೇಲೆ ಸುಮಾರು 2000 ವರ್ಷಗಳಷ್ಟು ಹಳೆಯದಾದ ಸುಮಾರು 40 ಮೀ ಗಳಷ್ಟು ಎತ್ತರದ ದೊಡ್ಡ ಸಂಪಿಗೆ ಮರವೊಂದನ್ನು ಇಂದಿಗೂ ಕಾಣಬಹುದಾಗಿದೆ. ಸೋಲಿಗರಿಂದ ಇದು ಪೂಜಿಸಲ್ಪಡುತ್ತದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications