ಬಿಳಿಗಿರಿರಂಗನ ಬೆಟ್ಟದಲ್ಲಿ ಹುಂಡಿ ಎಣಿಕೆ: 35 ಲಕ್ಷ ಸಂಗ್ರಹ, ಹುಂಡಿಯಲ್ಲಿ ಡಾಲರ್!
ಚಾಮರಾಜನಗರ, ಜೂ28: ಯಳಂದೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟದ ದೇವಾಲಯ ಹುಂಡಿ ಎಣಿಕೆ ನಡೆದಿದ್ದು, 35 ಲಕ್ಷ ರೂ. ಹಣ ಸಂಗ್ರಹವಾಗಿದೆ. 3 ತಿಂಗಳು 8 ದಿನದ ಬಳಿಕ ನಡೆದ ಹುಂಡಿ ಎಣಿಕೆಯಲ್ಲಿ 35,59,990 ರೂ. ಹಣ ಸಂಗ್ರಹವಾಗಿದ್ದು 3 ಅಮೆರಿಕನ್ ಡಾಲರ್ ಕೂಡ ಕೆಲ ಭಕ್ತರು ಅರ್ಪಿಸಿದ್ದಾರೆ. ಚಿನ್ನ-ಬೆಳ್ಳಿ ತೂಕವನ್ನು ಮಾಡದೇ ಮರಳಿ ಹುಂಡಿಗೇ ಹಾಕಲಾಗಿದ್ದು, ಮುಂದಿನ ಬಾರಿ ಮಾಡಲಾಗುತ್ತದೆ ಎಂದು ಬಿಳಿಗಿರಿರಂಗನ ಬೆಟ್ಟದ ಇಒ ಮೋಹನ್ ಮಾಹಿತಿ ನೀಡಿದ್ದಾರೆ.
ಬೆಟ್ಟ ನವೀಕರಣಗೊಂಡ ನಂತರ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಬಿಳಿಗಿರಿರಂಗನ ಬೆಟ್ಟ ನವೀಕರಣಗೊಂಡ ಬಳಿಕ ಭಕ್ತರು, ಪ್ರವಾಸಿಗರ ಸಂಖ್ಯೆ ದ್ವಿಗುಣಗೊಂಡಿದ್ದು ವಾರಾಂತ್ಯದಲ್ಲಿ ಪ್ರಕೃತಿ ಚೆಲುವು ಕಣ್ತುಂಬಿಕೊಳ್ಳಲು ಜನ ಕಿಕ್ಕಿರಿದು ಸೇರುತ್ತಿದ್ದಾರೆ. ಬಿಳಿಗಿರಿರಂಗನ ಬೆಟ್ಟ ಶ್ರೇಣಿಯು ಮೂಲವಾಗಿ ಚಾಮರಾಜನಗರ ಜಿಲ್ಲೆಯ ಯಳಂದೂರು ಮತ್ತು ಕೊಳ್ಳೆಗಾಲ ತಾಲೂಕಿನಲ್ಲಿ ಚಾಚಿವೆ. ಅಲ್ಲದೆ ಸತ್ಯಮಂಗಲಂ ಅಭಯಾರಣ್ಯ ಹಾಗೂ ತಮಿಳುನಾಡಿನ ಈರೋಡ್ ಜಿಲ್ಲೆಗೆ ಹತ್ತಿರವಾಗಿವೆ. ಪಶ್ಚಿಮ ಘಟ್ಟದ ಪೂರ್ವ ತುದಿಯಲ್ಲಿ ನೆಲೆಸಿರುವ ಈ ಬೆಟ್ಟ ಶ್ರೇಣಿಯು ವೈವಿಧ್ಯಮಯ ಪ್ರಾಣಿ ಸಂಪತ್ತು ಹಾಗೂ ಸಸ್ಯ ಸಂಪತ್ತಿನಿಂದ ಕೂಡಿದ್ದು, ದಟ್ಟವಾದ ಗಿಡ ಮರಗಳು ಪ್ರದೇಶಕ್ಕೆ ಹಸಿರು ಹಾಸಿಗೆಯನ್ನು ಹೊದಿಸಿದ ಹಾಗೆ ಮಾಡಿವೆ.

ಸೋಲಿಗರ ಪಾಲಿಗೆ ಅತ್ಯಂತ ಪವಿತ್ರವಾದ ದೊಡ್ಡಸಂಪಿಗೆ ಮರ
ವಿಷ್ಣುವಿನ ಅವತಾರವಾದ ಶ್ರೀ ರಂಗನಾಥ ಸ್ವಾಮಿಯು ಇಲ್ಲಿ ನೆಲೆಸಿರುವುದರಿಂದ ಇದಕ್ಕೆ ಬಿಳಿಗಿರಿ ರಂಗನ ಬೆಟ್ಟ ಎಂಬ ಹೆಸರು ಬಂದಿತೆಂದು ಹೇಳಲಾಗಿದೆ. ಪ್ರತಿ ವರ್ಷ ವೈಶಾಖ ಮಾಸ ಅಂದರೆ ಏಪ್ರಿಲ್ ಸಮಯದಲ್ಲಿ ಇಲ್ಲಿ ರಥೋತ್ಸವವನ್ನು ಅತಿ ವಿಜೃಂಭಣೆಯಿಂದ ನೆರವೇರಿಸಲಾಗುತ್ತದೆ. ಸ್ಥಳಿಯ ಸೋಲಿಗ ಸಮುದಾಯದವರು ಶ್ರೀರಂಗನಾಥನಿಗೆ ಎರಡು ವರ್ಷಕ್ಕೊಮ್ಮೆ ಒಂದು ಅಡಿ ಒಂಭತ್ತು ಅಂಗುಲಗಳಷ್ಟು ಆಕಾರದ ಚರ್ಮದ ಪಾದರಕ್ಷೆಗಳನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ.

ಸ್ಥಳೀಯ ಸೋಲಿಗರ ಪಾಲಿಗೆ ಅತ್ಯಂತ ಪವಿತ್ರವಾದ ದೊಡ್ಡಸಂಪಿಗೆ ಮರವನ್ನು ಇಲ್ಲಿ ಕಾಣಬಹುದು. ಅಲ್ಲದೆ ಸಾಕಷ್ಟು ಸಂಪಿಗೆ ಮರಗಳು ಇಲ್ಲಿ ಕಂಡುಬರುತ್ತವೆ. ಕಾವೇರಿಯ ಉಪನದಿಯಾದ ಭಾರ್ಗವಿ ನದಿಯ ದಡದ ಮೇಲೆ ಸುಮಾರು 2000 ವರ್ಷಗಳಷ್ಟು ಹಳೆಯದಾದ ಸುಮಾರು 40 ಮೀ ಗಳಷ್ಟು ಎತ್ತರದ ದೊಡ್ಡ ಸಂಪಿಗೆ ಮರವೊಂದನ್ನು ಇಂದಿಗೂ ಕಾಣಬಹುದಾಗಿದೆ. ಸೋಲಿಗರಿಂದ ಇದು ಪೂಜಿಸಲ್ಪಡುತ್ತದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ












Click it and Unblock the Notifications