Elephant Census: ಗಡಿಜಿಲ್ಲೆಯಲ್ಲಿ ಮೂರನೇ ದಿನದ "ಗಜ"ಗಣತಿ-ಮಾಹಿತಿ
ಚಾಮರಾಜನಗರ, ಮೇ, 26: ಮೂರು ದಿನಗಳ ಕಾಲ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಗಜಗಣತಿ ಶನಿವಾರ (ಮೇ 25) ಅಂತ್ಯಗೊಂಡಿದ್ದು, ಕೊನೆಯ ದಿನ ಅಂದರೆ ಶನಿವಾರ ಜಲಮೂಲಗಳ ಬಳಿ ಬಂದ ಆನೆಗಳನ್ನು ಲೆಕ್ಕ ಹಾಕಲಾಗಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಒಟ್ಟು 13 ವಲಯದ 113 ಬೀಟ್ಗಳು, ಕಾವೇರಿ ವನ್ಯಜೀವಿಧಾಮದ 43 ಬೀಟ್ಗಳು, ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ 170 ಮಂದಿ ಹಾಗೂ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಗಣತಿ ಕಾರ್ಯ ನಡೆದಿದ್ದು, ಬೆಳಗ್ಗೆಯಿಂದ ಸಂಜೆವರೆಗೂ ಕೆರೆಗಳು, ಜಲಮೂಲಗಳ ಸಮೀಪ ಕುಳಿತು ಆನೆ ಲೆಕ್ಕಚಾರ ನಡೆಸಲಾಗಿದೆ.

ಮೊದಲ ದಿನ ಪ್ರತಿ ಬೀಟ್ನಲ್ಲಿ 15 ಕಿಲೋ ಮೀಟರ್ ನಡೆದು ಆನೆಗಳನ್ನು ಪ್ರತ್ಯಕ್ಷವಾಗಿ ಕಂಡು ದಾಖಲು ಮಾಡಿಕೊಂಡರೆ, ಎರಡನೇ ದಿನ ಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ 2 ಕಿಲೋ ಮೀಟರ್ ನಡೆದು ಲದ್ದಿ ನೋಡಿ ಆನೆ ಇರುವಿಕೆಯ ಬಗ್ಗೆ ತಿಳಿಯುವ ಕಾರ್ಯ ಕೈಗೊಂಡರು. ದು ಪರೋಕ್ಷವಾಗಿ ಆನೆ ಇರುವುದನ್ನು ಗುರುತಿಸುವ ಕಾರ್ಯವಾಗಿತ್ತು. ಇದರಿಂದ ಗಣತಿ ಪ್ರದೇಶದಲ್ಲಿ ಆನೆ ಇಲ್ಲದಿದ್ದರೂ, ಅವುಗಳ ಇರುವಿಕೆಯನ್ನು ನಿಯೋಜನೆಗೊಂಡ ನೌಕರರು ನೋಡಿದ ಲದ್ದಿ ಬಗ್ಗೆ ಪುಸ್ತಕದಲ್ಲಿ ಸ್ಪಷ್ಟವಾಗಿ ದಾಖಲಿಸುವ ಮೂಲಕ ಖಚಿತಪಡಿಸಿಕೊಂಡರು.
ಎರಡನೇ ದಿನ "ಗಜ"ಗಣತಿ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶ, ಮಲೆ ಮಹದೇಶ್ವರ ವನ್ಯಜೀವಿ ಧಾಮ, ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ಗಜ ಗಣತಿ ನಡೆದಿದೆ.
ಮೊದಲ ದಿನ 15 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಆನೆಗಳ ಗುಂಪು, ಒಂಟಿ ಆನೆಗಳನ್ನು ನೇರವಾಗಿ ಕಂಡು ಗಣತಿ ನಡೆದಿದ್ದು, ಎರಡನೇ ದಿನವಾದ ಶುಕ್ರವಾರ (ಮೇ 24) ಲದ್ದಿ ಮೂಲಕ ಆನೆ ಲೆಕ್ಕಾಚಾರ ಮಾಡಲಾಗಿದೆ.
ಮೊದಲ ದಿನ ಆನೆಗಳ ಲೆಕ್ಕ ಹಾಕಿದ ಸಿಬ್ಬಂದಿ: ಗುರುವಾರದುಂದ ಗಜ ಗಣತಿ ಆರಂಭವಾಗಿದ್ದು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಕಾವೇರಿ ವನ್ಯಜೀವಿಧಾಮದಲ್ಲಿ ಮೊದಲ ದಿನ ಸಿಬ್ಬಂದಿ ಗಣತಿ ಕಾರ್ಯ ನಡೆಸಿದ್ದರು.
ಗಜ ಗಣತಿಯು ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಸಂಜೆ 6 ತನಕ ನಡೆಯಲಿದ್ದು, ಮೊದಲ ದಿನವಾದ ಗುರುವಾರದಂದು 15 ಕಿಮೀ ನಡೆಸು ಆನೆ ಗುಂಪುಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಲೆಕ್ಕ ಹಾಕಿದ್ದಾರೆ. ಆನೆ ಗುಂಪಿನಲ್ಲಿ ಎಷ್ಟು ಹೆಣ್ಣಾನೆಗಳಿವೆ, ಎಷ್ಟು ಮರಿಗಳಿವೆ, ಗುಂಪಿನಲ್ಲಿ ಎಷ್ಟು ಆನೆಗಳಿವೆ ಎಂಬುದನ್ನು ಗುರುತು ಮಾಡಿಕೊಳ್ಳಲಾಗುತ್ತದೆ. ಪ್ರತಿ ಬೀಟ್ನಲ್ಲೂ ಮೂವರು ಸಿಬ್ಬಂದಿ ನಡೆದುಕೊಂಡು ಆನೆ ಗುಂಪುಗಳನ್ನು ಕಂಡು ಈ ಲೆಕ್ಕ ಹಾಕಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications