ಚಾಮರಾಜನಗರದಲ್ಲಿ ಮಳೆ ಆರ್ಭಟಕ್ಕೆ 47 ಗ್ರಾಮಗಳು ತತ್ತರ; ಆದರೂ 19 ಕೆರೆಗಳು ಖಾಲಿ-ಖಾಲಿ!
ಚಾಮರಾಜನಗರ, ಆಗಸ್ಟ್, 04: ಕಳೆದ ಒಂದು ವಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದಿದೆ. ಜಿಲ್ಲೆಯ ಕೆಲವು ಭಾಗಗಳಲ್ಲಿ ಅತಿವೃಷ್ಟಿ ಸಂಭವಿಸಿದರೆ, ಮತ್ತೊಂದೆಡೆ ಅನಾವೃಷ್ಟಿಯ ರೀತಿಯಲ್ಲಿ ಕೆರೆಗಳು ಖಾಲಿ-ಖಾಲಿ ಹೊಡೆಯುತ್ತಿವೆ.
ಆ. 25ರಿಂದ ಸೆಪ್ಟೆಂಬರ್ 1ರವರೆಗೆ ಮಳೆ ಹಾನಿ
ಚಾಮರಾಜನಗರ ಜಿಲ್ಲಾದ್ಯಂತ ಆಗಸ್ಟ್ 25ರಿಂದ ಸೆಪ್ಟೆಂಬರ್ 1ರವರೆಗೆ ಸುರಿದ ಮಳೆಯಿಂದ ಯಳಂದೂರು, ಕೊಳ್ಳೇಗಾಲ ತಾಲ್ಲೂಕುಗಳ 47 ಗ್ರಾಮಗಳು ನಲುಗಿ ಹೋಗಿವೆ. ಆಗಸ್ಟ್ 25ರಿಂದ ಸೆಪ್ಟೆಂಬರ್ 1ರ ನಡುವಿನ ಅವಧಿಯಲ್ಲಿ ಜಿಲ್ಲೆಯಲ್ಲಿ 1.9 ಸೆ.ಮೀ. ವಾಡಿಕೆ ಮಳೆ ಆಗಿದ್ದು, ಈ ವರ್ಷ ಒಟ್ಟು 11.4 ಸೆ.ಮೀಟರ್ನಷ್ಟು ಮಳೆ ದಾಖಲಾಗಿದೆ.
ಮಳೆರಾಯನ ಆರ್ಭಟಕ್ಕೆ ಜನರು ತತ್ತರ
ಏಳು ದಿನಗಳ ಅವಧಿಯಲ್ಲಿ 346 ಮನೆಗಳು ಭಾಗಶಃ ಹಾನಿಗೀಡಾಗಿವೆ. ಐದು ಮನೆಗಳು ಸಂಪೂರ್ಣವಾಗಿ ನಾಶ ಆಗಿವೆ. 9 ಜಾನುವಾರುಗಳು ಮೃತ ಪಟ್ಟಿವೆ. ಇನ್ನು ಗುಂಡ್ಲುಪೇಟೆ ತಾಲೂಕಿನಲ್ಲಿ 1,300 ಕೋಳಿ ಮರಿಗಳು ಅಸುನೀಗಿವೆ. ಮಳೆ ಹಾಗೂ ನೆರೆಯಿಂದಾಗಿ 143 ಕಿಲೋ ಮೀಟರ್ನಷ್ಟು ರಸ್ತೆ ಹಾಳಾಗಿದೆ. ಈಗಾಗಲೇ ಗ್ರಾಮೀಣ ರಸ್ತೆಗಳ ವಿವರವನ್ನು ಕಲೆ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ. 1,731 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ಜಲಾವೃತವಾಗಿವೆ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.

ತೋಟಗಾರಿಕೆ ಬೆಳೆಗಳು ಜಲಾವೃತ
350 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ತೋಟಗಾರಿಕಾ ಬೆಳೆಗಳು ಜಲಾವೃತವಾಗಿದ್ದು, 126 ಹೆಕ್ಟೇರ್ನಷ್ಟು ಬೆಳೆಗಳು ನಷ್ಟವಾಗಿದೆ. 16 ಸೇತುವೆ ಮತ್ತು ಮೋರಿಗಳು ಕುಸಿದಿವೆ. 35 ಅಂಗನವಾಡಿ ಕಟ್ಟಡಗಳು, 77 ಶಾಲೆಗಳು, 11 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾನಿಗೀಡಾಗಿವೆ. 31 ವಿದ್ಯುತ್ ಕಂಬಗಳು ಮುರಿದಿವೆ. ಎರಡು ವಿದ್ಯುತ್ ಪರಿವರ್ತಕಗಳು ಹಾಳಾಗಿವೆ. ಲೋಕೋಪಯೋಗಿ ಇಲಾಖೆಗೆ ಸೇರಿದ ಆರು ಕಟ್ಟಡಗಳು ಭಾಗಶಃ ಹಾನಿಗೀಡಾಗಿವೆ. ಯಳಂದೂರು ತಾಲೂಕಿನ ಕೆಸ್ತೂರು, ಗುಂಬಳ್ಳಿ, ಗಣಿಗನೂರು, ಯರಗಂಬಳ್ಳಿ ಕೆರೆಗಳು ಹಾಗೂ ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮದ ಯಡಿಯೂರು ಹೊಸ ಕೆರೆಗೆ ಹಾನಿ ಆಗಿದೆ.
ಮಳೆ ಬಂದರೂ ಬತ್ತಿಹೋದ 19 ಕೆರೆಗಳು
ಮಳೆಯಿಂದಾಗಿರುವ ಹಾನಿಯ ಬಗ್ಗೆ ಪ್ರಾಥಮಿಕ ಅಂದಾಜು ಮಾಡಲಾಗಿದ್ದು, ನಿಖರ ಮಾಹಿತಿಗಾಗಿ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.
ಕೆಲವು ಕಡೆ 20 ವರ್ಷಗಳ ಕೆರೆಕಟ್ಟೆಗಳ ಕೋಡಿ ಬಿದ್ದಿವೆ. ಮತ್ತೊಂದೆಡೆ 30 ವರ್ಷಗಳ ಬಳಿಕ ಕೆರೆಕಟ್ಟೆಗಳ ಕೋಡಿ ಬಿದ್ದಿವೆ. ಆದರೆ ಇನ್ನು ಕೂಡ ಜಿಲ್ಲೆಯ 19 ಕೆರೆಗಳು ಒಣಗಿವೆ ಎಂದು ಸಣ್ಣ ನೀರಾವರಿ ಇಲಾಖೆಯು ಮಾಹಿತಿ ನೀಡಿದೆ. ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಒಳಪಡುವ ಜಿಲ್ಲೆಯ 64 ಕೆರೆಗಳಲ್ಲಿ 27 ಕೆರೆಗಳು ಪೂರ್ಣವಾಗಿ ತುಂಬಿವೆ.

ಶೇಕಡಾ 30ರಷ್ಟು 6 ಕೆರೆಗಳು, ಶೇಕಡಾ 50ರಷ್ಟು 1 ಕೆರೆ, ಶೇಕಡಾ 50-99ರಷ್ಟು 11 ಕೆರೆಗಳು ಭರ್ತಿಯಾಗಿದ್ದು, 19 ಕೆರೆಗಳು ಹನಿ ನೀರಿಲ್ಲದೇ ಒಣಗಿವೆ. 19 ಕೆರೆಗಳಲ್ಲಿ ಗುಂಡ್ಲುಪೇಟೆ ತಾಲೂಕಿನಲ್ಲಿ 11, ಚಾಮರಾಜನಗರ, ಯಳಂದೂರಿನಲ್ಲಿ ತಲಾ 1 ಮತ್ತು ಹನೂರು ತಾಲೂಕಿನಲ್ಲಿ 6 ಕೆರೆಗಳು ಖಾಲಿ ಆಗಿವೆ ಎಂದು ನೀರಾವರಿ ಇಲಾಖೆ ಮಾಹಿತಿ ನೀಡಿದೆ.
ಅಧಿಕಾರಿಗಳಿಗೆ ಸಚಿವ ಸೋವಣ್ಣ ಹೇಳಿದ್ದೇನು?
ಜಿಲ್ಲೆಯಲ್ಲಿ ಮಳೆ ಹಾಗೂ ಪ್ರವಾಹದಿಂದ ಉಂಟಾದ ಹಾನಿಗೆ ಪರಿಹಾರ ಕ್ರಮ ಹಾಗೂ ಪುನರ್ವಸತಿ ಒದಸುವ ಕಾರ್ಯ ಆಗಬೇಕು ಎಂದು ಅಧಿಕಾರಿಗಳಿಗೆ ವಸತಿ ಸಚಿವ ವಿ. ಸೋಮಣ್ಣ ಸೂಚಿಸಿದರು. ಮಳೆಹಾನಿ ಹಾಗೂ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಂಡ ಹಾಗೂ ಕೈಗೊಳ್ಳಬೇಕಿರುವ ಪರಿಹಾರ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಿದೆ. ಪ್ರವಾಹ, ಪ್ರಕೃತಿ ವಿಕೋಪಗಳಿಂದ ಜನರು ಸಂಕಷ್ಟದಲ್ಲಿದ್ದಾರೆ. ರೈತರಿಗೆ ಸಾಕಷ್ಟು ತೊಂದರೆ ಆಗಿದೆ. ಬೆಳೆ, ಮನೆಗಳಿಗೆ ಸಾಕಷ್ಟು ಹಾನಿಯಾಗಿ ಜನರು ಆತಂಕದಲ್ಲಿದ್ದಾರೆ. ಶಾಲೆ, ರಸ್ತೆ ಮೂಲ ಸೌಕರ್ಯಗಳಿಗೂ ಧಕ್ಕೆ ಆಗಿದೆ. ನಷ್ಟದ ಕುರಿತು ವ್ಯಾಪಕವಾಗಿ ಸಮೀಕ್ಷೆ ಕೈಗೊಂಡು ನಿಖರ ಅಂಕಿ ಅಂಶಗಳನ್ನು ಒದಗಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಾನಿಗೀಡಾದ ಮನೆಗಳಿಗೆ, ಬೆಳೆಗಳನ್ನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಒದಗಿಸುವಾಗ ಮಾನವೀಯ ನೆಲೆಯಲ್ಲಿ ನೋಡಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಆಯಾ ಭಾಗದಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಹೆಚ್ಚು ಮಾಹಿತಿ ಇರುತ್ತದೆ. ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕಾರ ಸಮನ್ವಯದಿಂದ ಸಮಗ್ರ ಮಾಹಿತಿ ಸಂಗ್ರಹಿಸಬೇಕು. ಹಾಗೂ ಖುದ್ದು ಪರಿಶೀಲಿಸಿ ಅರ್ಹರೆಲ್ಲರಿಗೂ ಪರಿಹಾರ ತಲುಪಿಸಬೇಕು ಎಂದು ಅಧಿಕಾರಿಗಳನ್ನು ಎಚ್ಚರಿಸಿದರು.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications