ಲಾಕ್ ಡೌನ್ ನಲ್ಲೂ ಜಿಂಕೆ ಬೇಟೆ; ಏಳು ಜನರ ಬಂಧನ
ಚಾಮರಾಜನಗರ, ಏಪ್ರಿಲ್ 17: ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಸರ್ಕಾರ ಲಾಕ್ ಡೌನ್ ಮಾಡಿದೆ. ಕೆಲವೆಡೆ ಸೀಲ್ ಡೌನ್ ಕೂಡ ಮಾಡಲಾಗಿದೆ. ಆದರೆ ಅರಣ್ಯ ಕಳ್ಳತನಕ್ಕೆ ಇದೇ ಸುಸಂದರ್ಭ ಎಂದು ಭಾವಿಸಿದ ಏಳು ಮಂದಿ ನಿನ್ನೆ ಬಂಡೀಪುರ ಹುಲಿ ರಕ್ಷಿತಾರಣ್ಯಕ್ಕೆ ಅಕ್ರಮವಾಗಿ ನುಸುಳಿ ಜಿಂಕೆಗಳನ್ನು ಬೇಟೆಯಾಡಿದ್ದಾರೆ. ಇದೇ ಸಂದರ್ಭ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಕೈಗೆ ಏಳು ಮಂದಿ ಸಿಕ್ಕಿಬಿದ್ದಿದ್ದು, ನಾಲ್ವರು ಪರಾರಿಯಾಗಿದ್ದಾರೆ.
ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಹಿಮವದ್ ಗೋಪಾಲಸ್ವಾಮಿ ಬೆಟ್ಟ ವಲಯದ ಹಿರಿಕೆರೆ ಅರಣ್ಯಪ್ರದೇಶದಲ್ಲಿ ಈ ಬೇಟೆಗಾರರು ಉರುಳು ಹಾಕಿ ಜಿಂಕೆಗಳನ್ನು ಬೇಟೆಯಾಡಿದ್ದಾರೆ. ಉರುಳಿಗೆ ಸಿಲುಕಿ ಸಾವನ್ನಪ್ಪಿದ ಜಿಂಕೆಗಳನ್ನು ಕತ್ತರಿಸಿ ಸಾಗಿಸುತ್ತಿದ್ದಾಗ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿಗೆ ಬೇಟೆಗಾರರು ಸಿಕ್ಕಿ ಬಿದ್ದಿದ್ದು, ಬಂಧಿತರಿಂದ ಜಿಂಕೆ ಮಾಂಸ, 15 ಕೇಬಲ್ ಉರುಳುಗಳು, ಒಂದು ಕತ್ತಿ ಹಾಗೂ ಒಂದು ಬಜಾಜ್ ಸಿಟಿ 100 ಬೈಕ್ ವಶಪಡಿಸಿಕೊಳ್ಳಲಾಗಿದೆ. ಇವರು ಹಿಂದಿನ ದಿನ ಸಂಜೆ ಅರಣ್ಯದೊಳಗೆ ಹೋಗಿ ಬೈಕ್ ಗಳ ಕೇಬಲ್ ಗಳನ್ನು ಉರುಳಾಗಿ ಕಟ್ಟಿ ಬರುತ್ತಿದ್ದರು. ರಾತ್ರಿ ಆಹಾರ ಹುಡುಕಿಕೊಂಡು ಬಂದ ಜಿಂಕೆಗಳು ಉರುಳಿನೊಳಗೆ ತಲೆ ಹಾಕಿದಾಗ ಉರುಳು ಬಿಗಿದು ಸಾವನ್ನಪ್ಪುತ್ತಿದ್ದವು.
ಲಾಕ್ ಡೌನ್ ಹಿನ್ನೆಲೆಯಲ್ಲಿ ಕುರಿ ಮಾಂಸಕ್ಕೆ ಬೇಡಿಕೆ ಹೆಚ್ಚಾಗಿದ್ದು, ಕೆಜಿಗೆ 700-800 ರೂಪಾಯಿ ತಲುಪಿದೆ. ಈ ಆರೋಪಿಗಳು ಜಿಂಕೆ ಮಾಂಸವನ್ನೇ ಕುರಿ ಮಾಂಸ ಎಂದು ಮಾರಾಟ ಮಾಡಲು ಯೋಜಿಸಿದ್ದರು ಎನ್ನಲಾಗಿದೆ. ಆದರೆ ಜಿಂಕೆಗಳನ್ನು ಬೇಟೆಯಾಡಿ ಬೈಕ್ ನಲ್ಲಿ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಯ ಪ್ರವೃತ್ತರಾದ ಅರಣ್ಯ ಸಿಬ್ಬಂದಿ ಹೊಸಹಳ್ಳಿ ಗುಡ್ಡದ ಬಳಿ ಹೊಂಚು ಹಾಕಿ ಬೇಟೆಗಾರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಂಸವನ್ನು ಮಾರಾಟ ಮಾಡುವ ಸಲುವಾಗಿ ಜಿಂಕೆಗಳನ್ನು ಬೇಟೆಯಾಡಿ ಅವುಗಳನ್ನು ಕತ್ತರಿಸಿ ಸಾಗಿಸುತ್ತಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಬಾಲಚಂದರ್ ತಿಳಿಸಿದ್ದಾರೆ. ಮೊಕದ್ದಮೆ ದಾಖಲಿಸಿಕೊಂಡಿರುವ ಅರಣ್ಯಾಧಿಕಾರಿಗಳು ಮುಂದಿನ ತನಿಖೆ ನಡೆಸುತಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications