ಚಾಮರಾಜನಗರ; ಶಾಸಕ ಮಹೇಶ್ ಬೆಂಗಲಿಗರಿಗೆ ಹೈಕೋರ್ಟ್ನಲ್ಲಿ ಹಿನ್ನಡೆ
ಚಾಮರಾಜನಗರ, ಜೂನ್ 14: ಬಹುಜನ ಸಮಾಜವಾದಿ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದ್ದ ಕೊಳ್ಳೇಗಾಲ ನಗರಸಭೆಯ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶವನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಎತ್ತಿ ಹಿಡಿದಿದೆ.
ತಮ್ಮನ್ನು ನಗರಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಬೇಕು ಎಂದು ಕೋರಿ ಕೊಳ್ಳೇಗಾಲ ನಗರಸಭೆ ಸದಸ್ಯರಾಗಿದ್ದ ಪವಿತ್ರ ಹಾಗೂ ಇತರ 6 ಮಂದಿ ರಿಟ್ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಜಿಲ್ಲಾಧಿಕಾರಿ ಆದೇಶ ಎತ್ತಿ ಹಿಡಿದಿದೆ. ಸುಧೀರ್ಘ ವಿಚಾರಣೆಯ ಬಳಿಕ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಏನಿದು ರಾಜಕೀಯ ಜಿದ್ದಾಜಿದ್ದಿ?; ಬಿಎಸ್ಪಿಯಿಂದ ಶಾಸಕ ಎನ್. ಮಹೇಶ್ ಉಚ್ಚಾಟನೆಗೊಂಡ ಬಳಿಕ ಕೊಳ್ಳೇಗಾಲ ನಗರಸಭೆ ಚುನಾವಣೆಯಲ್ಲಿ ಆನೆ ಗುರುತಿನಿಂದ ಗೆದ್ದಿದ್ದ 9 ಸದಸ್ಯರಲ್ಲಿ 7 ಮಂದಿ ಸದಸ್ಯರು ಶಾಸಕ ಮಹೇಶ್ ಬಣ ಸೇರಿಕೊಂಡಿದ್ದರು.
ಬಳಿಕ, 2020ರ ಅಕ್ಟೋಬರ್ 29ರಂದು ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು. ಇದನ್ನು ಉಲ್ಲಂಘಿಸಿದ ಮಹೇಶ್ ಬಣದ ಬಿಎಸ್ಪಿಯ 7 ಸದಸ್ಯರು ಬಿಜೆಪಿ ಪರ ಮತ ಚಲಾಯಿಸಿದ್ದರು. ಪಕ್ಷದ ವಿಪ್ ಉಲ್ಲಂಘಿಸಿದ್ದ ಸದಸ್ಯರನ್ನು ಹುದ್ದೆಯಿಂದ ಅನರ್ಹಗೊಳಿಸುವಂತೆ ಕೋರಿ ಬಿಎಸ್ಪಿ ನಗರಸಭೆ ಸದಸ್ಯೆ ಜಿ. ಜಯಮೇರಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ದೂರಿನ ವಿಚಾರಣೆ ನಡೆಸಿದ್ದ ಚಾಮರಾಜನಗರದ ಅಂದಿನ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ (ಪಕ್ಷಾಂತರ ನಿಷೇಧ) ಕಾಯ್ದೆ 1987ರ ಅಡಿ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿ ಕಳೆದ ಸೆಪ್ಟೆಂಬರ್ 6 ರಂದು ಆದೇಶ ಹೊರಡಿಸಿದ್ದರು.
ಜಿಲ್ಲಾಧಿಕಾರಿ ಆದೇಶದಿಂದ ನಗರಸಭೆ ಸದಸ್ಯ ಸ್ಥಾನ ಕಳೆದುಕೊಂಡ ಗಂಗಮ್ಮ, ನಾಗಮಣಿ, ನಾಗಸುಂದ್ರಮ್ಮ, ಪ್ರಕಾಶ್, ರಾಮಕೃಷ್ಣ, ನಾಸಿರ್ ಷರೀಫ್ ಹಾಗೂ ಪವಿತ್ರಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ನಲ್ಲೂ ಕೂಡ 2021 ರ ಸೆಪ್ಟೆಂಬರ್ 25 ರಂದು ಡಿಸಿ ನೀಡಿದ ಆದೇಶವನ್ನು ಎತ್ತಿ ಹಿಡಿಯಲಾಗಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು, ಈಗ ಮೇಲ್ಮನವಿಯಲ್ಲೂ ಹಿನ್ನಡೆ ಉಂಟಾಗಿದೆ.
ಚಾಮುಲ್ ಚುನಾವಣೆ ಫಲಿತಾಂಶ; ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಹಾಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್, ಚುಕ್ಕಾಣಿ ಹಿಡಿಯಬೇಕಿದ್ದ ಕಮಲ ಪಾಳೆಯಕ್ಕೆ ನಿರಾಸೆ ಫಲಿತಾಂಶ ಬಂದಿದೆ.
9 ನಿರ್ದೇಶಕ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನ, ಬಿಜೆಪಿಗೆ 2 , ಜೆಡಿಎಸ್ 1 ಸ್ಥಾನ ಗೆದ್ದಿದ್ದು ಇಬ್ಬರು ಪಕ್ಷೇತರರು ಗೆಲುವಿನ ನಗೆ ಬೀರಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಬಿ. ಕೆ. ರವಿಕುಮಾರ್, ಚಾಮುಲ್ ನ ಇಬ್ಬರು ಹಾಲಿ ನಿರ್ದೇಶಕರು ಸೋಲುಂಡಿದ್ದಾರೆ. ಇನ್ನು, ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಪುತ್ರಿ ಶೀಲಾ ಜಯ ಸಾಧಿಸುವ ಮೂಲಕ ಪುಟ್ಟರಂಗಶೆಟ್ಟಿ ವರ್ಚಸ್ಸು ಹೆಚ್ಚಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications