ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ; ಶಾಸಕ ಮಹೇಶ್ ಬೆಂಗಲಿಗರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆ

By ಚಾಮನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜೂನ್ 14: ಬಹುಜನ ಸಮಾಜವಾದಿ ಪಕ್ಷದ ವಿಪ್ ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದ್ದ ಕೊಳ್ಳೇಗಾಲ ನಗರಸಭೆಯ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶವನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಎತ್ತಿ ಹಿಡಿದಿದೆ.

ತಮ್ಮನ್ನು ನಗರಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಬೇಕು ಎಂದು ಕೋರಿ ಕೊಳ್ಳೇಗಾಲ ನಗರಸಭೆ ಸದಸ್ಯರಾಗಿದ್ದ ಪವಿತ್ರ ಹಾಗೂ ಇತರ 6 ಮಂದಿ ರಿಟ್ ಅರ್ಜಿ ಸಲ್ಲಿಸಿದ್ದರು.

ಫೇಸ್ಬುಕ್ ಸ್ನೇಹಿತರಿಂದ ಈ ಸರಕಾರಿ ಶಾಲೆಗೆ ಬಂತು 22 ಸಾವಿರ ಮೌಲ್ಯದ ಚಾಕೋಲೆಟ್ ಫೇಸ್ಬುಕ್ ಸ್ನೇಹಿತರಿಂದ ಈ ಸರಕಾರಿ ಶಾಲೆಗೆ ಬಂತು 22 ಸಾವಿರ ಮೌಲ್ಯದ ಚಾಕೋಲೆಟ್

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಜಿಲ್ಲಾಧಿಕಾರಿ ಆದೇಶ ಎತ್ತಿ ಹಿಡಿದಿದೆ. ಸುಧೀರ್ಘ ವಿಚಾರಣೆಯ ಬಳಿಕ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ನೀಡಿದೆ.

7 BSP Councillors disqualified for violated the whip In Kollegal CMC

ಏನಿದು ರಾಜಕೀಯ ಜಿದ್ದಾಜಿದ್ದಿ?; ಬಿಎಸ್ಪಿಯಿಂದ ಶಾಸಕ ಎನ್. ಮಹೇಶ್ ಉಚ್ಚಾಟನೆಗೊಂಡ ಬಳಿಕ ಕೊಳ್ಳೇಗಾಲ ನಗರಸಭೆ ಚುನಾವಣೆಯಲ್ಲಿ ಆನೆ ಗುರುತಿನಿಂದ ಗೆದ್ದಿದ್ದ 9 ಸದಸ್ಯರಲ್ಲಿ 7 ಮಂದಿ ಸದಸ್ಯರು ಶಾಸಕ ಮಹೇಶ್ ಬಣ ಸೇರಿಕೊಂಡಿದ್ದರು.

ಜಾಹೀರಾತು; ಇಬ್ಬರು ಪರಿಷತ್‌ ಅಭ್ಯರ್ಥಿಗಳ ವಿರುದ್ಧ ಎಫ್ಐಆರ್ ಜಾಹೀರಾತು; ಇಬ್ಬರು ಪರಿಷತ್‌ ಅಭ್ಯರ್ಥಿಗಳ ವಿರುದ್ಧ ಎಫ್ಐಆರ್

ಬಳಿಕ, 2020ರ ಅಕ್ಟೋಬರ್ 29ರಂದು ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು. ಇದನ್ನು ಉಲ್ಲಂಘಿಸಿದ ಮಹೇಶ್ ಬಣದ ಬಿಎಸ್​​​ಪಿ​ಯ 7 ಸದಸ್ಯರು ಬಿಜೆಪಿ ಪರ ಮತ ಚಲಾಯಿಸಿದ್ದರು. ಪಕ್ಷದ ವಿಪ್ ಉಲ್ಲಂಘಿಸಿದ್ದ ಸದಸ್ಯರನ್ನು ಹುದ್ದೆಯಿಂದ ಅನರ್ಹಗೊಳಿಸುವಂತೆ ಕೋರಿ ಬಿಎಸ್​​​​ಪಿ ನಗರಸಭೆ ಸದಸ್ಯೆ ಜಿ. ಜಯಮೇರಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

7 BSP Councillors disqualified for violated the whip In Kollegal CMC

ದೂರಿನ ವಿಚಾರಣೆ ನಡೆಸಿದ್ದ ಚಾಮರಾಜನಗರದ ಅಂದಿನ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ (ಪಕ್ಷಾಂತರ ನಿಷೇಧ) ಕಾಯ್ದೆ 1987ರ ಅಡಿ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿ ಕಳೆದ ಸೆಪ್ಟೆಂಬರ್ 6 ರಂದು ಆದೇಶ ಹೊರಡಿಸಿದ್ದರು.

ಜಿಲ್ಲಾಧಿಕಾರಿ ಆದೇಶದಿಂದ ನಗರಸಭೆ ಸದಸ್ಯ ಸ್ಥಾನ ಕಳೆದುಕೊಂಡ ಗಂಗಮ್ಮ, ನಾಗಮಣಿ, ನಾಗಸುಂದ್ರಮ್ಮ, ಪ್ರಕಾಶ್, ರಾಮಕೃಷ್ಣ, ನಾಸಿರ್ ಷರೀಫ್ ಹಾಗೂ ಪವಿತ್ರಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್‌ನಲ್ಲೂ ಕೂಡ 2021 ರ ಸೆಪ್ಟೆಂಬರ್ 25 ರಂದು ಡಿಸಿ ನೀಡಿದ ಆದೇಶವನ್ನು ಎತ್ತಿ ಹಿಡಿಯಲಾಗಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು, ಈಗ ಮೇಲ್ಮನವಿಯಲ್ಲೂ ಹಿನ್ನಡೆ ಉಂಟಾಗಿದೆ.

ಚಾಮುಲ್ ಚುನಾವಣೆ ಫಲಿತಾಂಶ; ಚಾಮರಾಜನಗರ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಹಾಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್, ಚುಕ್ಕಾಣಿ ಹಿಡಿಯಬೇಕಿದ್ದ ಕಮಲ ಪಾಳೆಯಕ್ಕೆ ನಿರಾಸೆ ಫಲಿತಾಂಶ ಬಂದಿದೆ.

9 ನಿರ್ದೇಶಕ ಸ್ಥಾನಗಳಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಾಲ್ಕು ಸ್ಥಾನ, ಬಿಜೆಪಿಗೆ 2 , ಜೆಡಿಎಸ್ 1 ಸ್ಥಾನ ಗೆದ್ದಿದ್ದು ಇಬ್ಬರು ಪಕ್ಷೇತರರು ಗೆಲುವಿನ ನಗೆ ಬೀರಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಬಿ. ಕೆ. ರವಿಕುಮಾರ್, ಚಾಮುಲ್ ನ ಇಬ್ಬರು ಹಾಲಿ ನಿರ್ದೇಶಕರು ಸೋಲುಂಡಿದ್ದಾರೆ. ಇನ್ನು, ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ ಪುತ್ರಿ ಶೀಲಾ ಜಯ ಸಾಧಿಸುವ ಮೂಲಕ ಪುಟ್ಟರಂಗಶೆಟ್ಟಿ ವರ್ಚಸ್ಸು ಹೆಚ್ಚಿಸಿದ್ದಾರೆ.

English summary
The Karnataka high court divisional dench has upheld the Chamarajanagar district collector's order disqualifying 7 members of the Kollegal City Municipal Council BSP members for violated the whip.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X