ನಕಲಿ ಅಂಕಪಟ್ಟಿ ಸಲ್ಲಿಸಿ ಗ್ರಾಮ ಲೆಕ್ಕಿಗ ಉದ್ಯೋಗ ಗಿಟ್ಟಿಸಿಕೊಂಡ 8 ಮಂದಿ ಪಾಡೇನಾಯ್ತು ಗೊತ್ತಾ?
ಚಾಮರಾಜನಗರ, ಜನವರಿ, 07: ನಕಲಿ ಅಂಕಪಟ್ಟಿಗಳನ್ನು ಸಲ್ಲಿಸಿ ಗ್ರಾಮ ಲೆಕ್ಕಿಗರ ಉದ್ಯೋಗ ಗಿಟ್ಟಿಸಿದ 8 ಮಂದಿ ಆರೋಪ ಸಾಬೀತಾಗಿದ್ದು, ಚಾಮರಾಜನಗರ ನ್ಯಾಯಾಲಯ 2 ವರ್ಷ ಶಿಕ್ಷೆ ವಿಧಿಸಿದೆ.
ಕೋಲಾರ ತಾಲೂಕಿನ ಸುನೀಲ್ ಕುಮಾರ್(25), ಅರಸಿಕೆರೆ ತಾಲೂಕಿನ ಸಂತೋಷ್ ಕುಮಾರ್(29, ಹಾಸನ ತಾಲೂಕಿನ ಎ.ಬಿ.ಶಂಕರ್ (39), ಮುಳಬಾಗಿಲು ತಾಲೂಕಿನ ಎಂ.ಷಣ್ಮುಗ (25), ನಾರಾಯಣಸ್ವಾಮಿ(25), ದೇವನಹಳ್ಳಿ ತಾಲೂಕಿನ ಶ್ರೀರಾಂ(27) ದೊಡ್ಡಬಳ್ಳಾಪುರ ತಾಲೂಕಿನ ಮುನಿರಾಜು(25), ಹೊಸಕೋಟೆ ತಾಲೂಕಿನ ಎಸ್.ಬಿ.ಸಿದ್ದಲಿಂಗಯ್ಯ(24) ಶಿಕ್ಷೆಗೊಳಗಾದ ಅಪರಾಧಿಗಳು.

ನಕಲಿ ಅಂಕಪಟ್ಟಿ ಮೂಲಕ ಗ್ರಾಮ ಲೆಕ್ಕಿಗ ಹುದ್ದೆ: 2012ರಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇದ್ದ 46 ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿತ್ತು. ಆ ವೇಳೆ, 8 ಮಂದಿ ಅಪರಾಧಿಗಳು ನವದೆಹಲಿ ಪಿಯು ಬೋರ್ಡ್ ಹಾಗೂ ಕರ್ನಾಟಕ ಶಿಕ್ಷಣ ಇಲಾಖೆಯ ನಕಲಿ ಅಂಕಪಟ್ಟಿಗಳನ್ನು ಸಲ್ಲಿಸಿ ಉದ್ಯೋಗ ಪಡೆದಿದ್ದರು.
2013ರಲ್ಲಿ ಅಂಕಪಟ್ಟಿಗಳ ನೈಜತೆ ಪರಿಶೀಲಿಸಿದ ವೇಳೆ ನಕಲಿ ಎಂದು ತಿಳಿದುಬಂದು ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಚಾಮರಾಜನಗರ ಸಿಜೆಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಪ್ರಕರಣ ದಾಖಲಾದ ಹೊತ್ತಲ್ಲೇ 8 ಮಂದಿಯನ್ನು ಸೇವೆಯಿಂದ ತೆಗೆದು ಹಾಕಲಾಗಿತ್ತು.
ವಿಚಾರಣೆ ಪೂರ್ಣಗೊಂಡು ನಕಲಿ ಅಂಕಪಟ್ಟಿ ಕೊಟ್ಟು ವಂಚಿಸಿದ್ದು, ಸಾಬೀತಾದ ಹಿನ್ನೆಲೆ ಹಿರಿಯ ಸಿವಿಲ್ ನ್ಯಾ.ಹೊನ್ನುಸ್ವಾಮಿ 8 ಮಂದಿಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಎ.ಸಿ.ಮಹೇಶ್ ವಾದ ಮಂಡಿಸಿದ್ದರು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications