ಎಲುಬಿನ ಹಂದರದಂತಾಗಿದ್ದ ಬಂಡೀಪುರದ ಆನೆ, ನಿಶ್ಶಕ್ತಿಯಿಂದ ಸಾವು
ಅಸ್ವಸ್ಥಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಆನೆಯೊಂದು ಮೃತಪಟ್ಟಿರುವ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನದ ಮೂಲೆಹೊಳೆಯಲ್ಲಿ ನಡೆದಿದೆ.
ಚಾಮರಾಜನಗರ, ಮೇ 29: ಅಸ್ವಸ್ಥಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಆನೆಯೊಂದು ಮೃತಪಟ್ಟಿರುವ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನದ ಮೂಲೆಹೊಳೆಯಲ್ಲಿ ನಡೆದಿದೆ.
ಈ ಆನೆಯ ಸಾವಿಗೆ ಮೇವು ಹಾಗೂ ನೀರಿನ ಕೊರತೆಯೇ ಕಾರಣ ಎನ್ನಲಾಗಿದೆ. ಸುಮಾರು 30 ವರ್ಷದ ಹೆಣ್ಣಾನೆ ಮೇ.27ರಂದು ಮೂಲೆಹೊಳೆ ವಲಯದಲ್ಲಿ ಅಸ್ವಸ್ಥಗೊಂಡು ಮೇಲೇಳಲಾಗದೆ ಮಲಗಿತ್ತು. ಕಳೆದ ಮೂರು ದಿನಗಳಿಂದ ಯಾವುದೇ ಆಹಾರ ಸೇವಿಸದ ಕಾರಣ ಸಂಪೂರ್ಣ ನಿತ್ರಾಣವಾಗಿತ್ತು.[ಬಂಡೀಪುರದಲ್ಲಿ ಆನೆ ಗಣತಿಗೆ ಸ್ವಯಂಸೇವಕರ ಸಾಥ್]

ಹೊಟ್ಟೆಯಲ್ಲಿ ಉಂಟಾಗಿರುವ ಹುಣ್ಣಿನಿಂದ ಆನೆಯು ಆಹಾರ ಸೇವಿಸಲಾಗದೆ ಅಸ್ವಸ್ಥವಾಗಿತ್ತು ಎನ್ನಲಾಗಿದೆ. ಹೀಗಾಗಿ ನಂತರ ರಾಂಪುರ ಆನೆಶಿಬಿರದಿಂದ ಸಾಕಾನೆಗಳನ್ನು ಕರೆಸಿ ಇವುಗಳ ನೆರವಿನಿಂದ ಆನೆಯನ್ನು ಮೇಲೆತ್ತಲು ಪ್ರಯತ್ನಿಸಿದರೂ ಯಾವುದೇ ಫಲಕಾರಿಯಾಗಲಿಲ್ಲ.
ಇದಕ್ಕೆ ಶಕ್ತಿ ಬರಲು ವೈದ್ಯರಾದ ಡಾ.ನಾಗರಾಜು ಅವರು ಗ್ಲೂಕೋಸ್ ಕಟ್ಟಿ ಕಬ್ಬು, ಬೆಲ್ಲ ಹಾಗೂ ಪೌಷ್ಟಿಕ ಆಹಾರವನ್ನು ನೀಡಿದ್ದರು. ಇದರಿಂದ ಚೇತರಿಸಿದಂತೆ ಕಂಡು ಬಂದಿದ್ದ ಆನೆ ಮೇಲೇಳಲು ಪ್ರಯತ್ನಿಸಿತಾದರೂ ಸಾಧ್ಯವಾಗಿರಲಿಲ್ಲ. ಈ ನಡುವೆ ಚೇತರಿಸಿಕೊಳ್ಳುತ್ತದೆ ಎಂದು ನಂಬಿದ್ದ ಅಧಿಕಾರಿಗಳಿಗೆ, ಆನೆ ಮತ್ತಷ್ಟು ಅಸ್ವಸ್ಥಗೊಂಡಿರುವುದು ಆತಂಕ ತಂದಿಟ್ಟಿದೆ. ಈ ನಡುವೆ ವೈದ್ಯರು ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಮೇ.29ರಂದು ಬೆಳಿಗ್ಗೆ ಸಾವನ್ನಪ್ಪಿದೆ.

ವಿಷಯ ತಿಳಿದು ಸ್ಥಳಕ್ಕೆ ಬಂಡೀಪುರ ಉಪವಿಭಾಗದ ಎಸಿಎಫ್ ಅಂಥೋನಿ ಮರಿಯಪ್ಪ ಹಾಗೂ ಹೆಡಿಯಾಲ ವಿಭಾಗದ ಎಸಿಎಫ್ ಕೆ.ಪರಮೇಶ್ ತೆರಳಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications