ಹನೂರು: ಬಾಗಿಲು ಮುರಿದು ಶಾಲೆಯೊಳಗೆ ನುಗ್ಗಿದ ಜಾಂಬವಂತ, ಮುಂದಾಗಿದ್ದೇನು ಗೊತ್ತಾ?
ಚಾಮರಾಜನಗರ, ಡಿಸೆಂಬರ್, 15: ಹನೂರು ತಾಲೂಕಿನಲ್ಲಿ ಈಗ ಕರಡಿ ಉಪಟಳ ಜೋರಾಗಿದ್ದು, ಅಜ್ಜಿಪುರದಲ್ಲಿ ಕರಡಿ ಸೆರೆ ಹಿಡಿದ ಬಳಿಕ ಈಗ ಸಂದನಪಾಳ್ಯದ ಶಾಲೆಯೊಂದಕ್ಕೆ ಕರಡಿ ನುಗ್ಗಿ ದಾಂಧಲೆ ಮಾಡಿರುವ ಘಟನೆ ನಡೆದಿದೆ.
ಹನೂರು ತಾಲೂಕಿನ ಸಂದನಪಾಳ್ಯ ಸಂತ ಅಂಥೋಣಿ ಗ್ರಾಮಾಂತರ ಪ್ರೌಢಶಾಲೆಗೆ ಗುರುವಾರ (ಡಿಸೆಂಬರ್ 14) ಮಧ್ಯರಾತ್ರಿ ಕರಡಿಯೊಂದು ನುಗ್ಗಿ ಆಹಾರ ಪದಾರ್ಥಗಳನ್ನು ತಿನ್ನುವುದರ ಜೊತೆಗೆ ಪೀಠೋಪಕರಗಳನ್ನು ಮುರಿದು ಹಾಕಿ ದಾಂಧಲೆ ಮಾಡಿದೆ. ರಾತ್ರಿ 1 ಗಂಟೆ ಸಮಯದಲ್ಲಿ ಶಿಕ್ಷಕರ ವಿಶ್ರಾಂತಿ ಕೊಠಡಿಯ ಬಾಗಿಲನ್ನು ಮುರಿದು ಒಳನುಗ್ಗಿರುವ ಕರಡಿ ಬೀರುಬಾಗಿಲನ್ನು ಮುರಿದು ಅದರೊಳಗಿದ್ದ ಅಡುಗೆ ಎಣ್ಣೆ, ಬೆಲ್ಲ ಮುಂತಾದ ಪದಾರ್ಥಗಳನ್ನು ತಿಂದಿದೆ.

ಕರಡಿ ಬಾಗಿಲು ಮುರಿದು ಒಳನುಗ್ಗುತ್ತಿರುವ ದೃಶ್ಯ ಶಾಲಾ ಆವರಣದಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂದು ಬೆಳಗ್ಗೆ ಮುಖ್ಯಶಿಕ್ಷಕ ಲೂಯಿಸ್ ನೇಸನ್ ಶಾಲೆಗೆ ಬರುತ್ತಿದ್ದಂತೆ ಶಿಕ್ಷಕರ ಕೊಠಡಿ ಬಾಗಿಲು ಮುರಿದಿರುವುದು ಕಂಡುಬಂದಿದೆ. ಬಳಿಕ ಒಳಗೆ ಹೋಗಿ ಪರಿಶೀಲಿಸಿದಾಗ ಪುಸ್ತಕ, ಆಹಾರ ಸಾಮಗ್ರಿಗಳೆಲ್ಲ ಚೆಲ್ಲಾಪಿಲ್ಲಿಯಾಗಿರುವುದನ್ನು ಕಂಡು ಸಿಸಿ ಕ್ಯಾಮೆರಾ ನೋಡಿದಾಗ ಕರಡಿ ಒಳನುಗ್ಗಿರುವುದು ಗೊತ್ತಾಗಿದೆ. ಸದ್ಯ ಇದೀಗ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಜನರ ನಿದ್ದೆಗೆಡಿಸಿದ್ದ ಜಾಂಬವಂತ ಕೊನೆಗೂ ಸೆರೆ
ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕರಡಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿ ಬಿದ್ದಿರುವ ಘಟನೆ ಹನೂರು ತಾಲೂಕಿನ ಅಜ್ಜಿಪುರ ಗ್ರಾಮದಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಕಳೆದ ಶನಿವಾರ ಅಜ್ಜಿಪುರ ಗ್ರಾಮದ ಪೆಟ್ಟಿಗೆ ಅಂಗಡಿಗಳ ಮೇಲೆ ಈ ಕರಡಿ ಆಹಾರ ಅರಸಿ ಬಂದು ಮೊಟ್ಟೆ, ಹಣ್ಣು ತಿಂದು, ಧ್ವಂಸ ಮಾಡಿ ಹೋಗಿತ್ತು. ಅದರ, ದಾಂಧಲೆ ವಿಡಿಯೋ ಸಿಸಿಟಿವಿಯಲ್ಲೂ ಸೆರೆಯಾಗಿತ್ತು. ಕಳೆದ ನಾಲ್ಕು ದಿನಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳು ಕರಡಿ ಹಿಡಿಯಲು ಅಜ್ಜಿಪುರ ಗ್ರಾಮದ ಹೊರವಲಯದಲ್ಲಿ ಬೋನನ್ನು ಇಟ್ಟು ಕರಡಿ ಸೆರೆಗೆ ಸತತ ಪ್ರಯತ್ನಪಟ್ಟಿದ್ದು, ಕೊನೆಗೂ ಇಂದು (ಡಿಸೆಂಬರ್ 14) ಆಹಾರ ಅರಸಿ ಬಂದ ಜಾಂಬವಂತ ಬೋನಿನಲ್ಲಿ ಸೆರೆಯಾಗಿತ್ತು.
ನಿಟ್ಟಿಸಿರು ಬಿಟ್ಟ ಗ್ರಾಮಸ್ಥರು
ಕಳೆದ ಶನಿವಾರ ರಾತ್ರಿ ಕರಡಿಯು ಗ್ರಾಮದ ಪೆಟ್ಟಿಗೆ ಅಂಗಡಿಗಳಿಗೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ನಾಶಗೊಳಿಸಿ, ಭಯದ ವಾತಾವರಣವನ್ನು ಉಂಟು ಮಾಡಿತ್ತು. ಕರಡಿ ಗ್ರಾಮಕ್ಕೆ ಬಂದು ಪೆಟ್ಟಿಗೆ ಅಂಗಡಿಗಳ ಮೇಲೆ ದಾಳಿ ನಡೆಸುವ ಚಿತ್ರಣ ಸಿಸಿಟಿವಿಯಲ್ಲಿ ಸೆರೆಯಾದ ಚಿತ್ರಣವನ್ನು ನೋಡಿ ರಾತ್ರಿ ವೇಳೆ ಗ್ರಾಮಸ್ಥರು ಓಡಾಡುವುದಕ್ಕೂ ಭಯಪಟ್ಟಿದ್ದರು. ಈಗ ಕರಡಿ ಬೋನಿಗೆ ಬಿದ್ದ ಹಿನ್ನೆಲೆಯಲ್ಲಿ ಭಯದ ವಾತಾವರಣದಲ್ಲಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಸೆರೆಯಾದ ಕರಡಿಯನ್ನು ಸುರಕ್ಷಿತವಾಗಿ ಮತ್ತೇ ಕಾಡಿಗೆ ಬಿಡಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications