ಕೊಳ್ಳೇಗಾಲ: ತಾಳಿ ಕಟ್ಟಿಸಿಕೊಂಡ ತಕ್ಷಣವೇ ಪರೀಕ್ಷೆಗೆ ಹಾಜರಾದ ವಧು
ಚಾಮರಾಜನಗರ, ಮೇ, 22: ತಾಳಿ ಕಟ್ಟಿದ ಮರುಕ್ಷಣವವೇ ವಧು ಪರೀಕ್ಷೆಗೆ ಹಾಜರಾದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಇಂದು (ಮೇ 22) ನಡೆದಿದೆ.
ಕೊಳ್ಳೇಗಾಲದ ವಾಸವಿ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಆಗಿರುವ ಆರ್. ಸಂಗೀತಾ ಅವರು ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಯುವಕನ ಜೊತೆ ಇಂದು ಸಪ್ತಪದಿ ತುಳಿದರು. ಕೊಳ್ಳೇಗಾಲ ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ವಿವಾಹ ಮಹೋತ್ಸವ ನಡೆದಿದ್ದು, ತಾಳಿ ಕಟ್ಟಿಸಿಕೊಂಡ ತಕ್ಷಣವೇ ಸಂಗೀತಾ ವಧುವಿನ ಧಿರಿಸಿನಲ್ಲೇ ಪರೀಕ್ಷೆಗೆ ಹಾಜರಾದ ಘಟನೆ ನಡೆದಿದೆ.

ಕೊಳ್ಳೇಗಾಲದ ಲಿಂಗಣಾಪುರ ಬಡಾವಣೆಯ ರಾಜಪ್ಪ ಮತ್ತು ಅನುಸೂಯ ಎಂಬುವರ ಪುತ್ರಿ ವಾಸವಿ ಸಂಯುಕ್ತ ಕಾಲೇಜಿನ ಬಿ.ಕಾಂ ತೃತೀಯ ವರ್ಷದ ವಿದ್ಯಾರ್ಥಿನಿ ಆರ್. ಸಂಗೀತಾಗೆ ನಂಜನಗೂಡು ತಾಲೂಕಿನ ಸಿಂಧುವಳ್ಳಿಯ ಯೋಗೇಶ್ ಎಂಬುವರ ಜೊತೆ ಮೂರ್ನಾಲ್ಕು ತಿಂಗಳ ಹಿಂದೆಯೇ ವಿವಾಹ ದಿನ ನಿಶ್ಚಯವಾಗಿತ್ತು. ಅದರಂತಯೇ ಮೇ 22ರಂದು ಯೋಗೇಶ್ ಅವರಿಂದ ತಾಳಿ ಕಟ್ಟಿಸಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಳಿಕ ವಧು ವಸ್ತ್ರ ಅಲಂಕಾರದಲ್ಲೇ ತಮ್ಮ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ಪರೀಕ್ಷೆ ಬರೆದು ಗಮನ ಸೆಳೆದರು.
ಈ ಬಗ್ಗೆ ಆರ್. ಸಂಗೀತಾ ಅವರ ತಂದೆ ರಾಜಪ್ಪ ಮಾತನಾಡಿ, ನನ್ನ ಮಗಳ ಮದುವೆ ಮೂರ್ನಾಲ್ಕು ತಿಂಗಳ ಹಿಂದೆಯೇ ನಿಶ್ಚಯ ಆಗಿತ್ತು. ಈ ನಡುವೆಯೇ ಕಳೆದ ವಾರದ ಹಿಂದೆಯಷ್ಟೇ ಆಕೆಯ ಅಂತಿಮ ವರ್ಷದ ಬಿ.ಕಾಂ ಪರೀಕ್ಷೆ ನಿಗದಿಯಾಗಿತ್ತು. ಈ ಹಿನ್ನೆಲೆ ವಿವಾಹದಷ್ಟೇ ಶೈಕ್ಷಣಿಕ ಬದುಕಿಗೂ ಪ್ರಾಮುಖ್ಯತೆ ಇರುವುದರಿಂದ ನಮ್ಮ ಮನೆಯವರೆಲ್ಲ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡೆವು. ಬಳಿಕ ಮಗಳು ಮದುವೆ ಸಂಭ್ರಮದಲ್ಲಿ ಭಾಗವಹಿಸಿ ಗುರು-ಹಿರಿಯರ ಆಶೀರ್ವಾದ ಪಡೆದಳು ಎಂದು ಹೇಳಿದರು.
-
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
SSLC ಪರೀಕ್ಷೆ 2026: ಪರೀಕ್ಷಾ ಹಾಲ್ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ -
CBSE 12ನೇ ತರಗತಿಯ ಹಿಂದಿ ಪರೀಕ್ಷೆ: ಪ್ರಶ್ನೆಪತ್ರಿಕೆ ಸುಲಭ, ನಿಗದಿತ ಸಮಯದಲ್ಲೇ ಪರೀಕ್ಷೆ ಬರೆದು ನಿರಾಳರಾದ ವಿದ್ಯಾರ್ಥಿಗಳು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು












Click it and Unblock the Notifications