ಬಂಡೀಪುರದಲ್ಲಿ ಪ್ರವಾಸಿಗರ ಮುಂದೆ ಮರಿಗೆ ಜನ್ಮ ನೀಡಿದ ಆನೆ
ಚಾಮರಾಜನಗರ, ಜೂನ್, 02: ದೇಶದ ಜನಪ್ರಿಯ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ವ್ಯಾಪ್ತಿಯಲ್ಲಿ ಆಗಾಗ ಪ್ರಾಣಿಗಳ ಚಲನವಲನಗಳ ದೃಶ್ಯಗಳನ್ನು ಪ್ರವಾಸಿಗರು ಕ್ಯಾಮೆರಾದಲ್ಲಿ ಸೆರೆಹಿಡುತ್ತಲೇ ಇರುತ್ತಾರೆ. ಹಾಗೆಯೇ ಇದೀಗ ಮತ್ತೆ ಬಂಡೀಪುರದಲ್ಲಿ ಅಪರೂಪದ ಕ್ಷಣವನ್ನು ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ.
ಬಂಡೀಪುರ ಸಫಾರಿ ಜೋನ್ನಲ್ಲಿ ಪ್ರವಾಸಿಗರಿಗೆ ತಾಯಿ ಹುಲಿ ಜೊತೆ ಮೂರು ಹುಲಿ ಮರಿ ಕಾಣಿಸಿಕೊಂಡಿದ್ದವು. ಈಗ ಸಫಾರಿ ಜೋನ್ನಲ್ಲಿ ಆನೆಯೊಂದು ಮರಿಗೆ ಜನ್ಮನೀಡಿರುವ ಘಟನೆ ನಡೆದಿದ್ದು, ಪ್ರವಾಸಿಗರು ಗಜ ಪ್ರಸವ ಕಂಡು ಸಂತಸದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

ಬಂಡೀಪುರದ ಸಫಾರಿ ಝೋನಿನ ಸಫಾರಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಪ್ರವಾಸಿಗರ ಸಫಾರಿ ವಾಹನ ನಿಂತು ನೋಡುತ್ತಿದ್ದ ವೇಳೆ ಕಾಡಾನೆಯೊಂದು ಒಂದು ಸುತ್ತು ಹಾಕಿ ಮರಿಗೆ ಜನ್ಮ ಕೊಟ್ಟಿದೆ. ಇನ್ನು ಈ ಘಟನೆ ಶುಕ್ರವಾರದ ಸಫಾರಿಯಲ್ಲಿ ನಡೆದಿದ್ದು, ಇದು ತಡವಾಗಿ ಬೆಳಕಿಗೆ ಬಂದಿದೆ.
ಮಾವಿನ ಹಣ್ಣಿನ ಮರದ ಮೇಲೆ ಹತ್ತಿದ ಆನೆ: ಮಾವಿನ ಸೀಸನ್ ಬಂತೆಂದರೆ ಸಾಕು ಎಂತಹವರ ಬಾಯಲ್ಲೂ ನೀರು ಬರುವುದರುವುದ ಸಾಮಾನ್ಯ. ಅದರಲ್ಲೂ, ಈ ಹಣ್ಣಿನ ರಾಜನನ್ನು ಕಂಡರೇ ನನಗೂ ಇಷ್ಟ ಎಂಬಂತೆ ಆನೆಯೊಂದು ಮರ ಹತ್ತಿ ಮಾವು ಸವಿದ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ತಾಳವಾಡಿಯಲ್ಲಿ ಮುಂಜಾನೆ ನಡೆದಿದ್ದಿ, ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ.
ನಟರಾಜು ಎಂಬವವರ ತೋಟಕ್ಕೆ ಆಗಮಸಿದ ಆನೆಯೊಂದು ಎರಡು ಕಾಲು ಮೇಲಕ್ಕೆತ್ತಿ ಮಾವಿನ ಗೊಂಚಲನ್ನು ಬೀಳಿಸಿ ಬಳಿಕ, ಒಂದಾದ ಮೇಲೆ ಒಂದರಂತೆ ಮಾವು ತಿಂದಿದೆ. ಇನ್ನು, ಆನೆ ಮಾವು ತಿನ್ನುವುದನ್ನು ಕಂಡ ಹೌಹಾರಿದ ಕುಟುಂಬ ಶಬ್ಧ ಮಾಡಿ ಆನೆಯನ್ನು ಓಡಿಸಿದ್ದಾರೆ.
ಒಟ್ಟಿನಲ್ಲಿ ಮಾವಿನ ಹಣ್ಣಿನ ಆಸೆ ಗಜರಾಜನಿಗೂ ಬಂದಿದ್ದು, ಇದರಿಂದ ತೋಟದ ಮಾಲೀಕರಿಗೆ ಬೆಳೆಹಾನಿ ನಷ್ಟದ ಬೀತಿ ಉಂಟಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications