ಚಾಮರಾಜನಗರ: ಕ್ರಿಮಿನಾಶಕ ಸೇವಿಸಿದ ಒಂದೇ ಕುಟುಂಬದ ನಾಲ್ವರು, ಮನೆ ಯಜಮಾನ ಸಾವು
ಚಾಮರಾಜನಗರ, ಜೂನ್, 08: ಮೊಮ್ಮಗಳ ಖಾಸಗಿ ವೀಡಿಯೋ ಹರಿ ಬಿಡುತ್ತೇನೆಂಬ ಯುವಕನ ಬ್ಲಾಕ್ ಮೇಲ್ಗೆ ಹೆದರಿದ ಕುಟುಂಬವೊಂದು ವಿಷ ಸೇವಿಸಿದ್ದು, ಈ ವೇಳೆ ಓರ್ವ ಮೃತಪಟ್ಟ ಧಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ಹೇಳಿ-ಕೇಳಿ ಇದು ಡಿಜಿಟ್ ಯುಗವಾಗಿದ್ದು, ಹಲವರು ಈ ಪ್ಲಾಟ್ಪಾರ್ಮ್ ಅನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಲೇ ಇವೆ. ಇನ್ನು ಅಪ್ರಾಪ್ತೆ ಜೊತೆ ಸಲುಗೆ ಬೆಳೆಸಿ ಆಕೆಯ ಖಾಸಗಿ ಕ್ಷಣ ಸೆರೆ ಹಿಡಿದ ಯುವಕನ ಕಾಮಚೇಷ್ಟೆಗೆ ಇಡೀ ಕುಟುಂಬವೇ ಈಗ ಕಣ್ಣೀರಲ್ಲಿ ಮುಳುಗಿದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಪಾಪಿಯ ಕೃತ್ಯಕ್ಕೆ ಹೆದರಿ ಕ್ರಿಮಿನಾಶಕ ಸೇವಿಸಿ ಕುಟುಂಬದ ಮೂವರು ನರಳಾಡುತ್ತಿದ್ದು, ಮನೆ ಯಜಮಾನ ಅಸುನೀಗಿದ್ದಾರೆ.

ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಮಹಾದೇವನಾಯಕ ಮೃತಪಟ್ಟರೆ, ಇವರ ಪತ್ನಿ, ಮಗಳು, ಮೊಮ್ಮಗಳು ಸಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಮಹದೇವನಾಯಕರ ಮೊಮ್ಮಗಳು ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದು, ಚೀರನಹಳ್ಳಿ ಗ್ರಾಮದ ಲೋಕೇಶ್ ಜೊತೆ ಸ್ನೇಹವಿತ್ತು. ಸ್ನೇಹವನ್ನೇ ಬಂಡವಾಳ ಮಾಡಿಕೊಂಡು ಸಲುಗೆ ಬೆಳೆಸಿಕೊಂಡ ಯುವಕ ಅಪ್ರಾಪ್ತೆಯನ್ನು ಚುಂಚನಕಟ್ಟೆಗೆ ಕರೆದೊಯ್ದು ಖಾಸಗಿ ವೀಡಿಯೋ ಸೆರೆ ಹಿಡಿದಿದ್ದ. ಬಳಿಕ, ತಾನು ಹೇಳದಿದ್ದನ್ನು ಕೇಳದಿದ್ದರೇ ವೀಡಿಯೋ ಹರಿ ಬಿಡುವುದಾಗಿ ಹುಡುಗಿ ಮನೆಗೇ ಬಂದು ಹೆದರಿಸಿದ್ದ.
ಯುವಕನ ಅಟಾಟೋಪಕ್ಕೆ ಬೇಸತ್ತ ಮಹಾದೇವನಾಯಕ ಕುಟುಂಬ ಕೆ.ಆರ್.ನಗರ ಪೊಲೀಸರಿಗೆ ದೂರು ಕೊಟ್ಟರೂ ಯಾವುದೇ ಕ್ರಮ ವಹಿಸದ ಆರೋಪ ಕೇಳಿಬಂದಿದೆ. ಪೊಲೀಸರು ಯಾವುದೇ ಕ್ರಮ ವಹಿಸದಿದ್ದದು, ವೀಡಿಯೋ ಹರಿಬಿಡುವ ಆತಂಕ ಎದುರಾಗಿ ಮಾನಕ್ಕೆ ಹೆದರಿದ ಕುಟುಂಬ ಶುಕ್ರವಾರ ಮಧ್ಯಾಹ್ನವೇ ಮಲೆ ಮಹದೇಶ್ವರ ಬೆಟ್ಟದತ್ತ ಬಂದಿದ್ದಾರೆ.
ಮಾದಪ್ಪನ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಕಾಡಿನಹಾದಿಯಲ್ಲಿ ನಾಲ್ವರು ಕ್ರಿಮಿನಾಶಕ ಸೇವಿಸಿ, ಈ ವೇಳೆ ಮಹಾದೇವನಾಯಕ ಮೃತಪಟ್ಟಿದ್ದು, ಇನ್ನು ಮೂವರ ಸ್ಥಿತಿ ಚಿಂತಾಜನಕವಾಗಿ ಸಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇನ್ನು ಯುವಕನ ಕಾಮಚೇಷ್ಠೆಗೆ ಈಗಲಾದರೂ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕುಟುಂಬಕ್ಕೆ ನ್ಯಾಯ ಕೊಡಿಸುತ್ತಾರಾ ಎಂದು ಕಾದುನೋಡಬೇಕಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications