ಚಾಮರಾಜನಗರ: "ಹಣ್ಣುಗಳ ರಾಜ"ನ ಮೇಲೆ ಕಣ್ಣಾಕಿದ ಸಲಗ-ವಿಡಿಯೋ ವೈರಲ್
ಚಾಮರಾಜನಗರ, ಜೂನ್, 01: ಮಾವಿನ ಸೀಸನ್ ಬಂತೆಂದರೆ ಸಾಕು ಎಂತಹವರ ಬಾಯಲ್ಲೂ ನೀರು ಬರುವುದರುವುದ ಸಾಮಾನ್ಯ. ಅದರಲ್ಲೂ, ಈ ಹಣ್ಣಿನ ರಾಜನನ್ನು ಕಂಡರೇ ನನಗೂ ಇಷ್ಟ ಎಂಬಂತೆ ಆನೆಯೊಂದು ಮರ ಹತ್ತಿ ಮಾವು ಸವಿದ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ ತಾಳವಾಡಿಯಲ್ಲಿ ಮುಂಜಾನೆ ನಡೆದಿದ್ದಿ, ಈ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ.
ನಟರಾಜು ಎಂಬವವರ ತೋಟಕ್ಕೆ ಆಗಮಸಿದ ಆನೆಯೊಂದು ಎರಡು ಕಾಲು ಮೇಲಕ್ಕೆತ್ತಿ ಮಾವಿನ ಗೊಂಚಲನ್ನು ಬೀಳಿಸಿ ಬಳಿಕ, ಒಂದಾದ ಮೇಲೆ ಒಂದರಂತೆ ಮಾವು ತಿಂದಿದೆ. ಇನ್ನು, ಆನೆ ಮಾವು ತಿನ್ನುವುದನ್ನು ಕಂಡ ಹೌಹಾರಿದ ಕುಟುಂಬ ಶಬ್ಧ ಮಾಡಿ ಆನೆಯನ್ನು ಓಡಿಸಿದ್ದಾರೆ.

ಒಟ್ಟಿನಲ್ಲಿ ಮಾವಿನ ಹಣ್ಣಿನ ಆಸೆ ಗಜರಾಜನಿಗೂ ಬಂದಿದ್ದು, ಇದರಿಂದ ತೋಟದ ಮಾಲೀಕರಿಗೆ ಬೆಳೆಹಾನಿ ನಷ್ಟದ ಬೀತಿ ಉಂಟಾಗಿದೆ.
ರಿಲ್ಯಾಕ್ಸ್ ಮೂಡ್ಗೆ ಜಾರಿದ "ವ್ಯಾಘ್ರ" ಫ್ಯಾಮಿಲಿ: ದೇಶದ ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಕ್ಯಾಮರಾಗೆ ಹುಲಿ ಕುಟುಂಬ ರಿಲ್ಯಾಕ್ಸ್ ಮೂಡ್ಗೆ ಜಾರಿರುವ ದೃಶ್ಯ ಸೆರೆಯಾಗಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಬಂಡೀಪುರದ ಸಫಾರಿ ಜೋನಿನ ಬಾರ್ಡರ್ ರೋಡ್ ಎಂಬಲ್ಲಿ ತೊರೆ ಸಮೀಪ ಹುಲಿ ಕುಟುಂಬ ಜಾಲಿ ನಿದ್ರೆಗೆ ಜಾರಿದ ವೀಡಿಯೋವನ್ನು ಪ್ರವಾಸಿಗರು ಸೆರೆ ಹಿಡಿದಿದ್ದು, ಈ ದೃಶ್ಯಗಳು ಭಾರೀ ವೈರಲ್ ಆಗುತ್ತಿವೆ.
ತಾಯಿ ಹುಲಿ ಹಾಗೂ ಎರಡು ಮರಿ ಹುಲಿಗಳು ಮಲಗಿ ನಿದ್ರಿಸುತ್ತಿದ್ದರೆ, ಗಂಡು ಹುಲಿ ಎಚ್ಚರವಾಗಿ ಅತ್ತಿತ್ತ ಕಣ್ಣಾಡಿಸುವುದು ಸೆರೆಯಾಗಿದೆ. ಒಟ್ಟಿನಲ್ಲಿ ಟೈಗರ್ ಫ್ಯಾಮಿಲಿಯನ್ನು ಕಣ್ಣಾರೆ ಕಂಡ ಪ್ರವಾಸಿಗರು ರೋಮಾಂಚಿತರಾಗಿದ್ದಾರೆ. ಮತ್ತ ಕೆಲವರು ಭಯಗೊಂಡ ಘಟನೆಯೂ ನಡೆದಿದೆ.
ಅಮ್ಮನಿಗಾಗಿ ಹಾತೊರೆಯುತ್ತಿದೆ ಚಿರತೆ ಮರಿ: ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬವರ ಕಬ್ಬಿನ ಗದ್ದೆಯಲ್ಲಿ ತನ್ನ ಮರಿ ಬಿಟ್ಟು ಚಿರತೆ ಓಡಿ ಹೋಗಿದ್ದು, ಎರಡನೇ ದಿನವೂ ತಾಯಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರೆದಿದೆ.
ಗುರುವಾರ (ಮೇ 30) ಮಧ್ಯಾಹ್ನ ಮರಿ ಚಿರತೆಯು ತಾಯಿಗಾಗಿ ಹಾತೊರೆಯುತ್ತಿದ್ದ ದೃಶ್ಯ ಕಂಡುಬಂದಿತು. ಬೇಟೆ ಹುಡುಕಿಕೊಂಡು ತಾಯಿ ಚಿರತೆ ತೆರಳಿರುವ ಸಾಧ್ಯತೆಯಿದ್ದು, ಮರಿಗಾಗಿ ವಾಪಾಸ್ ಬರಲಿದೆ ಎಂಬ ಖಚಿತತೆಯೊಂದಿಗೆ ಅರಣ್ಯ ಇಲಾಖೆ ಬೋನಿರಿಸಿದೆ. ಇನ್ನು, ಚಿರತೆ ಮರಿ ಪತ್ತೆಯಾಗಿರುವುದರಿಂದ ಜಮೀನುಗಳಿಗೆ ರೈತರು ತೆರಳು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications