ಬರಡಾದ ಬಂಡೀಪುರ ಅರಣ್ಯ;ಎಲ್ಲೆಲ್ಲೂ ಬೆಂಕಿಯಲ್ಲಿ ಬೆಂದ ಪ್ರಾಣಿಗಳ ದರ್ಶನ
ಬಂಡೀಪುರ, ಫೆಬ್ರವರಿ 25: ಬೇಸಿಗೆ ಸಮಯ ಆರಂಭದ ದಿನಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚಿನಿಂದ 20 ಸಾವಿರಕ್ಕೂ ಹೆಚ್ಚು ಅರಣ್ಯ ಪ್ರದೇಶ ಭಸ್ಮವಾಗಿದ್ದು, ಭಾನುವಾರ (ಫೆ.24) ಕೂಡ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.
ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಸಂಪರ್ಕ ಹೊಂದಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಇದೀಗ ಬೆಂಕಿಯ ನರ್ತನ ಅಧಿಕವಾಗಿದೆ. ಕಳೆದ ಮೂರು ದಿನಗಳಿಂದ ನಿರಂತವಾಗಿ ಬೆಂಕಿಯ ಜ್ವಾಲೆ ಹೆಚ್ಚಾಗುತ್ತಲೇ ಇದ್ದು, ಸುಮಾರು 20 ಸಾವಿರಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ.
ಬೆಂಕಿಯ ಜ್ವಾಲೆಗೆ ಹೆದರಿದ ಬಂಡೀಪುರದ ವನ್ಯ ಜೀವಿಗಳು ಇದೀಗ ಕಾಡು ತೊರೆದು ಪ್ರಾಣ ಉಳಿಸಿಕೊಳ್ಳುವತ್ತ ಮುಖಮಾಡಿವೆ. ಪ್ರಸ್ತುತ ಬಂಡೀಪುರದಲ್ಲಿ ಶುಕ್ರವಾರ ಕಾಣಿಸಿಕೊಂಡ ಕಾಡ್ಗಿಚ್ಚು, ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಲಕ್ಕಿ ಗುಡ್ಡ, ಬೋಳಗುಡ್ಡ ಹೀಗೆ ಹಲವಾರು ಕಡೆ ವ್ಯಾಪ್ತಿಸಿಕೊಂಡು ಇಡೀ ಕಾಡನ್ನೇ ಬರಿದಾಗಿಸುತ್ತಿದೆ.
ಹೊತ್ತಿ ಉರಿದ ಬಂಡೀಪುರ: ಬೆಂಕಿಯಲ್ಲಿ ಬೆಂದ ಪ್ರಾಣಿಗಳು, 2500 ಎಕರೆ ಅರಣ್ಯ ಪ್ರದೇಶ ನಾಶ
ಅಭಯರಾಣ್ಯವಾಗಿರುವ ಬಂಡೀಪುರದಲ್ಲಿ ಕಾಡಿಗೆ ಬೆಂಕೆ ಕಾಣಿಸಿಕೊಂಡರೆ ಅದನ್ನು ನಿಯಂತ್ರಣ ಮಾಡಲು ಸಾಧ್ಯವಾಗದ ಮಾತಾಗಿದೆ. ಅಗ್ನಿ ಶಾಮಕ ದಳದ ದೊಡ್ಡ ವಾಹನಗಳು ಕಾಡಿನಲ್ಲಿ ಸಂಚಾರ ಮಾಡಲಾಗದ ಸ್ಥಿತಿಯಲ್ಲಿದ್ದರೂ ಸಹ, ಚಿಕ್ಕ ವಾಹನದಲ್ಲಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಪ್ರಾಣಿಗಳು ಸಾವನ್ನಪ್ಪಿದ ದರ್ಶನ
ಈ ನಡುವೆ ಅರಣ್ಯ ಇಲಾಖೆಯವರು ತಮ್ಮಲ್ಲಿರುವ ಹಳೇ ಮಾದರಿಯ ಸಾಧನವನ್ನೇ ಬೆಂಕಿ ನಂದಿಸಲು ಯತ್ನಿಸಿದ್ದರೂ ಕೂಡ ಸುಮಾರು 20 ಸಾವಿರಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಇದೀಗ ಬರಡಾಗಿದೆ. ಎಲ್ಲಿ ನೋಡಿದರೂ ಬೆಂಕಿಯಲ್ಲಿ ಬೆಂದ ಮರಗಳು, ಬೆಂಕಿಯಕಾವಿಗೆ ಸಾವನ್ನಪ್ಪಿದ ಹೆಬ್ಬಾವು, ಹೀಗೆ ಅನೇಕ ಸಣ್ಣ ಪುಟ್ಟ ಪ್ರಾಣಿಗಳು ಸಾವನ್ನಪ್ಪಿದ ದರ್ಶನವಾಗುತ್ತಿದೆ.

ಅನೇಕ ಕಡೆಗಳಲ್ಲಿ ಕಾಡ್ಗಿಚ್ಚು
ಬಂಡೀಪುರದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚು ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೂ ಕಾಣಿಸಿಕೊಂಡು, ಮಸಣಗುಡಿ, ತೆಪ್ಪಕಾಡು ಸೇರಿದಂತೆ ಅನೇಕ ಕಡೆಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಬಂಡೀಪುರದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿನ ಪ್ರಮಾಣ ಮತ್ತು ಸಮಸ್ಯೆಗಳನ್ನು ಆಲಿಸಲು ಪಿಸಿಸಿಎಫ್ ಪುನಾತಿ ಶ್ರೀಧರ್ ಅವರು ಖುದ್ದಾಗಿ ಆಗಮಿಸಿ ಸ್ಥಳ ಪರಿಶೀಲಿಸಿದರು.

ಕಾಡು ಅಕ್ಷರಶಃ ಬರಿದಾಗಿದೆ
ಬಂಡೀಪುರ ರಾಷ್ಟ್ರೀಯ ಉದ್ಯಾನವನ ಅಕ್ಷರಶಃ ಬೆಂಕಿಯ ಕೆನ್ನಾಲಿಗೆ ಸಿಲುಕಿ ಬರಡಾಗಿದೆ. ಅರಣ್ಯ ಇಲಾಖೆಯವರು ಅರಣ್ಯವನ್ನು ಯಥಾ ಸ್ಥಿತಿಗೆ ತರಲು ಹಲವಾರು ವರ್ಷಗಳೇ ಶ್ರಮ ವಹಿಸಬೇಕಾಗಿದೆ.

ಸತೀಶ ಜಾರಕಿಹೊಳಿ ಭೇಟಿ
ಬೆಂಕಿ ಅನಾಹುತ ಸಂಭವಿಸಿದ ಬೆನ್ನಲ್ಲೇ ಬಂಡೀಪುರಕ್ಕೆ ಭೇಟಿ ನೀಡಿದ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರು, ಬಂಡೀಪುರದ ಟೈಗರ್ ರಸ್ತೆ ಬೋಳುಗುಡ್ಡ, ಕುಳ್ಳನಬೆಟ್ಟದಲ್ಲಿ ಬೆಂಕಿ ನಂದಿಸುವ ಕಾರ್ಯ ವೀಕ್ಷಿಸಿದರು. ಅವರೊಂದಿಗೆ ಶಾಸಕ ಸಿ.ಎಸ್.ನಿರಂಜನಕುಮಾರ್, ಪಿಸಿಸಿಎಫ್ ಪುನತಿಶ್ರೀಧರ್, ಎಸಿಸಿಎಫ್ ಜಯರಾಂ, ಸಿಸಿಎಫ್ ಅಂಬಾಡಿಮಾದವ್ ಹಾಗೂ ಅರಣ್ಯಾಧಿಕಾರಿಗಳು ಇದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications