ಚಾಮರಾಜನಗರದ ಬೇಗೂರಲ್ಲಿ ಪೊಲೀಸ್ ಪೇದೆ ನೇಣಿಗೆ ಶರಣು
ಸೋಮವಾರ ಬೆಳಿಗ್ಗೆ 6 ಘಂಟೆ ಸಮಯದಲ್ಲಿ ಪೊಲೀಸ್ ಠಾಣೆಯ ಮುಂಭಾಗದಿಂದ ಪೊಲೀಸ್ ವಸತಿ ಗೃಹದವರೆಗೂ ಅಳುತ್ತಾ ತೆರಳಿದ್ದನ್ನು ನೋಡಿದವರಿದ್ದಾರೆ. ಏನಾಯಿತೆಂದು ವಿಚಾರಿಸುವ ಹೊತ್ತಿಗೇ ಆತ ನೇಣಿಗೆ ಶರಣಾಗಿದ್ದ.
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರಿನ ಪೊಲೀಸ್ ಪೇದೆಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೊಲೀಸ್ ಇಲಾಖೆಯಲ್ಲಿ ಇಂಥ ಪ್ರಕರಣ ಹೆಚ್ಚಾಗಿದ್ದು, ಇದಕ್ಕೆ ಕಾರಣ ಮೇಲಧಿಕಾರಿಗಳ ಕಿರುಕುಳ ಎನ್ನಲಾಗುತ್ತಿದೆ.
ಮೂಲತಃ ತಾಲೂಕಿನ ಕಬ್ಬಹಳ್ಳಿ ಗ್ರಾಮದ ನಿವಾಸಿ ಪೇದೆ ಪ್ರಸಾದ್ (31) ನೇಣಿಗೆ ಶರಣಾದ ದುರ್ದೈವಿ. 2008ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿ ಯಳಂದೂರು ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ ನಂತರ ಇತ್ತೀಚೆಗೆ ಬೇಗೂರು ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ 3 ತಿಂಗಳಿನಿಂದ ಬೇಗೂರು ಠಾಣೆಯಲ್ಲಿ ವಿಶೇಷ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರಿಗೆ ಒಬ್ಬ ಪುಟ್ಟ ಮಗಳಿದ್ದಾಳೆ.

ಭಾನುವಾರ ಸಂಜೆವರೆಗೂ ಎಲ್ಲರ ಜೊತೆ ಚೆನ್ನಾಗಿ ಮಾತನಾಡಿದ್ದ ಪ್ರಸಾದ್ ರಾತ್ರಿ ಫೋನ್ ಸ್ವಿಚ್ಆಫ್ ಮಾಡಿಕೊಂಡಿದ್ದ ಎನ್ನಲಾಗಿದೆ. ಸೋಮವಾರ ಬೆಳಿಗ್ಗೆ 6 ಘಂಟೆ ಸಮಯದಲ್ಲಿ ಪೊಲೀಸ್ ಠಾಣೆಯ ಮುಂಭಾಗದಿಂದ ಪೊಲೀಸ್ ವಸತಿ ಗೃಹದವರೆಗೂ ಅಳುತ್ತಾ ತೆರಳಿದ್ದನ್ನು ನೋಡಿದವರಿದ್ದಾರೆ. ಏನಾಯಿತೆಂದು ವಿಚಾರಿಸುವ ಹೊತ್ತಿಗೇ ಆತ ನೇಣಿಗೆ ಶರಣಾಗಿದ್ದ.
ಪ್ರಸಾದ್ ಸಾವಿಗೆ ಮೇಲಾಧಿಕಾರಿಗಳ ಕಿರುಕುಳವೇ ಕಾರಣ ಎನ್ನುವುದು ಸಂಬಂಧಿಕರ ಆರೋಪ. ಆತನ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಸ್ತೆ ತಡೆ ಮತ್ತು ಪೊಲೀಸ್ ಠಾಣೆಯ ಆವರಣದಲ್ಲಿ ಶವವನ್ನಿಟ್ಟು ಪ್ರತಿಭಟನೆ ನಡೆಸಲಾಗಿದೆ.

ಕಳ್ಳಸಾಗಣೆ ತಡೆದಿದ್ದೇ ಜೀವಕ್ಕೆ ಮುಳುವಾಯ್ತಾ?
ಕಳೆದ ಸೋಮವಾರ ಕಸಾಯಿಖಾನೆಗೆ ಸಾಗಿಸುತ್ತಿದ್ದ 7 ಕರುಗಳನ್ನು ಪ್ರಸಾದ್ ಆಟೋ ಸಮೇತ ವಶಕ್ಕೆ ಪಡೆದು ಪ್ರಕರಣ ದಾಖಲಾಗಲು ಕಾರಣರಾಗಿದ್ದರು. ಈ ದಂಧೆಯಲ್ಲಿ ತೊಡಗಿರುವ ಕೆಲವರು ಪ್ರಸಾದ್ ಗೆ ದೂರವಾಣಿ ಮೂಲಕ ಧಮ್ಕಿ ಹಾಕಿದ್ದರು ಎನ್ನಲಾಗಿದೆ. ಮೇಲಧಿಕಾರಿಗಳ ಮೂಲಕ ಪ್ರಭಾವ ಬೀರಿ ಪ್ರಸಾದ್ ರನ್ನು ಹೆದರಿಸಲಾಗಿತ್ತಾ? ಇದೇ ಅವರ ಜೀವಕ್ಕೆ ಮುಳುವಾಯ್ತಾ ಎಂಬೆಲ್ಲ ಅನುಮಾನಗಳು ಅವರ ಸಅವಿನ ಸುತ್ತ ಎದ್ದಿವೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications