ಚಾಮರಾಜನಗರ: ನೆಚ್ಚಿನ ಶಿಕ್ಷಕಿ ಕುರಿತು 16 ಕೃತಿಗಳನ್ನು ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ವಿದ್ಯಾರ್ಥಿನಿ
ಚಾಮರಾಜನಗರ, ಮಾರ್ಚ್, 08: ಸಾಮಾನ್ಯರು ತನ್ನ ನೆಚ್ಚಿನ ಶಿಕ್ಷಕಿಯನ್ನು ನೆನೆಯುತ್ತಿದ್ದರೆ, ಈ ವಿಭಿನ್ನ ವಿದ್ಯಾರ್ಥಿನಿ ತನ್ನ ಗುರುವಿನ ಕುರಿತು ಪುಸ್ತಕ ಬರೆದು 'ಇಂಡಿಯಾ ಬುಕ್ ಆಫ್ ರೆಕಾರ್ಡ್'ನಲ್ಲಿ ದಾಖಲೆ ಮಾಡಿದ್ದಾಳೆ.
ಚಾಮರಾಜನಗರ ತಾಲೂಕಿನ ದೊಡ್ಡಮೋಳೆಯ ಗ್ರಾಮ ಪಂಚಾಯಿತಿ ಸದಸ್ಯೆ ಮಂಜುಳಾ ಮತ್ತು ಗಣೇಶ್ ಪುತ್ರಿ, ಚಾಮರಾಜನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಬಿ.ಕಾಂ ತೃತೀಯ ವರ್ಷದ ವಿದ್ಯಾರ್ಥಿನಿ ಜಿ.ಅಮೃತಾ ಈ ಸಾಧನೆ ಮಾಡಿದ್ದಾಳೆ.

ಈಕೆ ತನ್ನ ಊರಿನ ಸರ್ಕಾರಿ ಶಾಲೆಯಲ್ಲಿ 1ರಿಂದ 8ನೇ ತರಗತಿವರೆಗೆ ವ್ಯಾಸಂಗ ಮಾಡಿದ್ದಾಳೆ. 6ನೇ ತರಗತಿ ಓದುವಾಗ ಸುಷ್ಮಾ ಎನ್ನುವವರು ಸಮಾಜ-ವಿಜ್ಞಾನ ಶಿಕ್ಷಕಿಯಾಗಿ ಶಾಲೆಗ ಬಂದರು. ಪ್ರಸ್ತುತ ಇವರು ನಂಜನಗೂಡಿನ ಬಿದರಗೂಡಿನ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಶಿಕ್ಷಕಿಯ ಬಳಿ 8ನೇ ತರಗತಿವರೆಗೆ ಪಾಠ ಕೇಳಿದ್ದ ಜಿ.ಅಮೃತಾ ಅತೀವ ಗೌರವ, ಪ್ರೀತಿಯ ಒಡನಾಟವನ್ನು ಬೆಳೆಸಿಕೊಂಡಳು.
ಇದು ಎಷ್ಟರ ಮಟ್ಟಿಗೆ ಎಂದರೆ ಶಿಕ್ಷಣ ಮುಂದುವರೆಸಿ ಬಿ.ಕಾಂ ಪದವಿ ತರಗತಿಗೆ ಸೇರಿದರೂ ನೆಚ್ಚಿನ ಶಿಕ್ಷಕಿ ಸುಷ್ಮಾ ಮೇಲಿನ ಅಭಿಮಾನ ಕಡಿಮೆಯಾಗಲೇ ಇಲ್ಲ. ಕೋವಿಡ್ ಸಂದರ್ಭದಲ್ಲಿ ಲಾಕ್ಡೌನ್ ಆದಾಗ ಮನೆಯಲ್ಲೇ ಇದ್ದ ಜಿ.ಅಮೃತಾ ತನ್ನ ನೆಚ್ಚಿನ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದ ಸುಷ್ಮಾ ಕುರಿತು 'ನನ್ನ ಗುರುವೆಂಬ ಸುಗಮ'ಪುಸ್ತಕ ಬರೆಯಲಾರಂಭಿಸಿದಳು. ಶಿಕ್ಷಕಿಯ ಗುಣ, ಇಬ್ಬರ ನಡುವಿನ ಒಡನಾಟವನ್ನು ಬರಹಕ್ಕಿಳಿಸಿದಳು. 'ನನ್ನ ಗುರುವೆಂಬ ಸುಗಮ' ಶೀರ್ಷಿಕೆಯಡಿ 16 ಕವಿತೆಗಳನ್ನು ರಚಿಸಿದಳು.
ಒಂದು ವರ್ಷಗಳ ಕಾಲ ಸಿದ್ಧ ಪಡಿಸಿರುವ ಈ ಪುಸ್ತಕವನ್ನು ಕಳೆದ ವರ್ಷ ಸಂವನ್ ಪಬ್ಲಿಕೇಷನ್ ಪ್ರಕಟಿಸಿದ್ದು, 2024ರ ಫೆಬ್ರವರಿ 27ರಂದು ಕೃತಿ ಬರೆದಿದ್ದ ಅಮೃತಾ ಇಂಡಿಯಾ ಬುಕ್ ಆಫ್ ರೆಕಾರ್ಡ್ನ ಗರಿಮೆಗೆ ಪಾತ್ರವಾಗಿದ್ದಾರೆ.
16 ಕವಿತೆಗಳಲ್ಲೇನಿದೆ?: 'ನನ್ನ ಗುರುವೆಂಬ ಸುಗಮ' ಶೀರ್ಷಿಕೆ ಗುರವಿನ ಸನಿಹ ನನ್ನ ಧ್ಯಾನ ಎಂಬ ಅಡಿಬರಹದ 67 ಪುಟಗಳ ಕೃತಿಯಲ್ಲಿ 16 ಕವಿತೆಗಳನ್ನು ಜಿ.ಅಮೃತಾ ತನ್ನ ನೆಚ್ಚಿನ ಶಿಕ್ಷಕಿ ಸುಷ್ಮಾ ಕುರಿತು ಬರೆದಿದ್ದಾರೆ. ಗುರುವೆಂದರೆ ಯಾರು?, ಗುರುವಿಗೆ ಹೃದಯ ಪೂರ್ವಕ ನಮನ, ಎತ್ತಲೋ ಸಾಗುತ್ತಿದ್ದ ಈ ಜೀವನದ ಹಾದಿಯಲಿ, ದಡ ಸೇರಿಸಲು ನಾವಿಕರಾಗಿ, ಇಲ್ಲದೇ ನಿಮ್ಮ ಮಾರ್ಗದರ್ಶನ, ಅದೇ ಮೊಗವು.. ಅದೇ ನಗುವು, ನೀವು ಹೇಳಿಕೊಟ್ಟ ನೈತಿಕತೆ ನೀತಿ, ದೇವತೆಯ ಆಗಮನ ಎಂಬಿತ್ಯಾದಿ ಮೊದಲ ಸಾಲುಗಳ ಕವಿತೆಗಳು ಪುಸ್ತಕದಲ್ಲಿವೆ.
ನನಗೆ ಸಣ್ಣಪುಟ್ಟ ಕವಿತೆಗಳನ್ನು ಬರೆಯುವ ಹವ್ಯಾಸ ಇತ್ತು. ಕೋವಿಡ್ ಸಂದರ್ಭದಲ್ಲಿ ನನ್ನ ನೆಚ್ಚಿನ ಶಿಕ್ಷಕಿ ಸುಷ್ಮಾ ಅವರ ಕುರಿತು ಕೃತಿ ರಚನೆ ಮಾಡಿದೆ. ಶಿಕ್ಷಕಿ ತಾಯಿ ಇದ್ದಂತೆ. ಇದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಆಗುತ್ತದೆ ಎಂದು ಗೊತ್ತಿರಲಿಲ್ಲ. ಕೃತಿ ಬರೆದ ಬಳಿಕ ಸಾಹಿತ್ಯದತ್ತ ಮತ್ತಷ್ಟು ಆಸಕ್ತಿ ಬೆಳೆಸಿಕೊಂಡಿದ್ದೇನೆ ಎಂದು ಅಮೃತಾ ಹೇಳುತ್ತಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications