ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ ಗಡಿ ಭಾಗದಲ್ಲಿ ಆತಂಕ ಸೃಷ್ಟಿಸಿದ ಹುಲಿ

|
Google Oneindia Kannada News

ಚಾಮರಾಜನಗರ, ಅಕ್ಟೋಬರ್.01: ಹುಲಿ ಸಂರಕ್ಷಿತ ಪ್ರದೇಶದಲ್ಲಿರಬೇಕಾದ ಹುಲಿಯೊಂದು ಇದ್ದಕ್ಕಿದ್ದಂತೆ ಕಾಡಂಚಿನ ಗ್ರಾಮದೊಳಕ್ಕೆ ಬಂದು ಎಲ್ಲೆಂದರಲ್ಲಿ ಓಡಾಡಿದ ಪರಿಣಾಮ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಂತಿರುವ ತಮಿಳುನಾಡು ಗಡಿಭಾಗದ ಮೆಟ್ಟಲವಾಡಿ ಗ್ರಾಮದಲ್ಲಿ ನಡೆದಿದೆ.

ಸೆರೆ ಹಿಡಿಯಲು ಹುಲಿ ಸಿಗುತ್ತಿಲ್ಲ...ಜನರಿಗೆ ನೆಮ್ಮದಿಯೂ ಇಲ್ಲಸೆರೆ ಹಿಡಿಯಲು ಹುಲಿ ಸಿಗುತ್ತಿಲ್ಲ...ಜನರಿಗೆ ನೆಮ್ಮದಿಯೂ ಇಲ್ಲ

ಮೆಟ್ಟಲವಾಡಿ ಗ್ರಾಮಕ್ಕೆ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದಿಂದ ಬಂದ ಹುಲಿಯೊಂದು ತೋಟದೊಳಗೆ ಹೊಕ್ಕು ಸಂಜೆಯ ತನಕ ಅಲ್ಲೇ ಬಿಡಾರ ಹೂಡಿ ಗ್ರಾಮಸ್ಥರನ್ನು ಭಯಭೀತರನ್ನಾಗಿಸಿತು. ಗ್ರಾಮದೊಳಕ್ಕೆ ನುಗ್ಗಿದ ಹುಲಿಯನ್ನು ನೋಡಿದ ಸುತ್ತಮುತ್ತಲಿನ ನಿವಾಸಿಗಳು ಆತಂಕಗೊಂಡು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

 ನಾಗರಹೊಳೆಯ ಕಾಡಂಚಿನ ಜನರ ನಿದ್ದೆಗೆಡಿಸಿದ ವ್ಯಾಘ್ರ ನಾಗರಹೊಳೆಯ ಕಾಡಂಚಿನ ಜನರ ನಿದ್ದೆಗೆಡಿಸಿದ ವ್ಯಾಘ್ರ

ವಿಷಯ ತಿಳಿದ ತಮಿಳುನಾಡಿನ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಂಜೆಯ ವೇಳೆಗೆ ತೋಟದಲ್ಲಿ ಇದ್ದ ಹುಲಿಯನ್ನು ಕಾಡಿಗೆ ಅಟ್ಟುವ ಯತ್ನದಲ್ಲಿ ಸಫಲರಾದರು.

A tiger came from the forest to the village garden

ಗ್ರಾಮದೊಳಗೆ ಬಂದ ಹುಲಿ ಮತ್ತೆ ಬರುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳ ಗಸ್ತು ಹೆಚ್ಚಿಸಲಾಗಿದ್ದು, ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಕಾಡಂಚಿನ ಗ್ರಾಮಗಳಲ್ಲಿ ಹೆಚ್ಚಿನ ನಿಗಾವಹಿಸುವ ಕಾರ್ಯ ಮುಂದುವರೆದಿದೆ.

 ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ಹುಲಿ ಪ್ರತ್ಯಕ್ಷ ? ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ಹುಲಿ ಪ್ರತ್ಯಕ್ಷ ?

ಅರಣ್ಯದಿಂದ ಗ್ರಾಮದೊಳಕ್ಕೆ ಬಂದಿರುವ ಹುಲಿಯನ್ನು ಕಾಡಿಗೆ ಅಟ್ಟಿದ್ದರೂ ಮತ್ತೆ ಅದು ಎಲ್ಲಿ ಗ್ರಾಮದೊಳಕ್ಕೆ ಬಂದು ಬಿಡುತ್ತೋ ಎಂಬ ಭಯ ಕಾಡುತ್ತಿದೆ. ಹೀಗಾಗಿ ಎಲ್ಲರೂ ಎಚ್ಚರಿಕೆ ವಹಿಸಿದ್ದಾರೆ.

English summary
A tiger came from the forest to the village garden and stay from morning to till evening. Incident took place in the Mettalavadi village of Tamil Nadu border.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X