ಬಂಡೀಪುರದಲ್ಲಿ 10 ವರ್ಷ ವಯಸ್ಸಿನ ಹೆಣ್ಣು ಹುಲಿ ಸಾವು
ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹೆಡಿಯಾಲ ವನ್ಯಜೀವಿ ವಲಯದ ಕೋಡಹಳ್ಳ ಸಮೀಪದ ಬಳ್ಳೂರು ಹುಂಡಿ ಪ್ರದೇಶದಲ್ಲಿ ಹೆಣ್ಣು ಹುಲಿಯ ಮೃತದೇಹ ಪತ್ತೆಯಾಗಿದ್ದು, ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಎಚ್.ಡಿ.ಕೋಟೆ, ಫೆಬ್ರವರಿ 11: ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹೆಡಿಯಾಲ ವನ್ಯಜೀವಿ ವಲಯದ ಕೋಡಹಳ್ಳ ಸಮೀಪದ ಬಳ್ಳೂರು ಹುಂಡಿ ಪ್ರದೇಶದಲ್ಲಿ ಹೆಣ್ಣು ಹುಲಿಯ ಮೃತದೇಹ ಶನಿವಾರ ಪತ್ತೆಯಾಗಿದೆ. ಕಾದಾಟದಲ್ಲಿ ಮೃತಪಟ್ಟಿರಬಹುದೆಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಹುಲಿಗೆ ಅಂದಾಜು ಹತ್ತು ವರ್ಷ ಪ್ರಾಯವಿದ್ದು, ಕಳೆದ ಮೂರು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಹುಲಿಯ ಕುತ್ತಿಗೆ ಮತ್ತು ಭುಜದ ಭಾಗದಲ್ಲಿ ಗಾಯಗಳಾಗಿದ್ದು, ಇದು ಕಾದಾಟದ ವೇಳೆ ಇನ್ನೊಂದು ಹುಲಿ ದಾಳಿ ಮಾಡಿ ಹೊಡೆದ್ದರಿಂದ ಆದ ಗಾಯವಾಗಿದ್ದು, ಹೊಡೆತದಿಂದ ಮೂಳೆ ಮುರಿದಿರುವುದು ಕಂಡು ಬಂದಿದೆ. ಕಾದಾಟದ ವೇಳೆ ಆದ ಗಾಯದಿಂದ ತೀವ್ರ ರಕ್ತಸ್ರಾವವಾಗಿ ಹುಲಿಯು ಮೃತಪಟ್ಟಿದೆ ಎನ್ನಲಾಗಿದೆ.

ಹುಲಿ ಸಾವನ್ನಪ್ಪಿ ಮೂರು ದಿನವಾಗಿದ್ದರೂ ಬೆಳಕಿಗೆ ಬಂದಿರಲಿಲ್ಲ. ಶನಿವಾರದಂದು ಅರಣ್ಯ ಸಿಬ್ಬಂದಿಗಳು ಗಸ್ತಿನಲ್ಲಿ ಇದ್ದಾಗ ದುರ್ವಾಸನೆ ಬಂದಿದ್ದು, ಅದರಂತೆ ಶೋಧ ಕಾರ್ಯ ಕೈಗೊಂಡಾಗ ಹುಲಿಯ ಮತದೇಹ ಪತ್ತೆಯಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಎಸಿಎಫ್ ಕೆ.ಪರಮೇಶ್, ಅರಣ್ಯ ಇಲಾಖೆಯ ಪಶುವೈದ್ಯ ಡಾ.ನಾಗರಾಜ್ ಮತ್ತು ಸಿಬ್ಬಂದಿ ತೆರಳಿ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಒಂದಲ್ಲ ಒಂದು ಕಾರಣಕ್ಕೆ ಹುಲಿ, ಚಿರತೆ, ಆನೆಗಳು ಸಾವನ್ನಪ್ಪುತ್ತಿದ್ದು ಆತಂಕ ಸೃಷ್ಠಿಯಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications