ಬಂಡೀಪುರದಲ್ಲಿ 10 ವರ್ಷ ವಯಸ್ಸಿನ ಹೆಣ್ಣು ಹುಲಿ ಸಾವು
ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹೆಡಿಯಾಲ ವನ್ಯಜೀವಿ ವಲಯದ ಕೋಡಹಳ್ಳ ಸಮೀಪದ ಬಳ್ಳೂರು ಹುಂಡಿ ಪ್ರದೇಶದಲ್ಲಿ ಹೆಣ್ಣು ಹುಲಿಯ ಮೃತದೇಹ ಪತ್ತೆಯಾಗಿದ್ದು, ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಎಚ್.ಡಿ.ಕೋಟೆ, ಫೆಬ್ರವರಿ 11: ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹೆಡಿಯಾಲ ವನ್ಯಜೀವಿ ವಲಯದ ಕೋಡಹಳ್ಳ ಸಮೀಪದ ಬಳ್ಳೂರು ಹುಂಡಿ ಪ್ರದೇಶದಲ್ಲಿ ಹೆಣ್ಣು ಹುಲಿಯ ಮೃತದೇಹ ಶನಿವಾರ ಪತ್ತೆಯಾಗಿದೆ. ಕಾದಾಟದಲ್ಲಿ ಮೃತಪಟ್ಟಿರಬಹುದೆಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಹುಲಿಗೆ ಅಂದಾಜು ಹತ್ತು ವರ್ಷ ಪ್ರಾಯವಿದ್ದು, ಕಳೆದ ಮೂರು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಹುಲಿಯ ಕುತ್ತಿಗೆ ಮತ್ತು ಭುಜದ ಭಾಗದಲ್ಲಿ ಗಾಯಗಳಾಗಿದ್ದು, ಇದು ಕಾದಾಟದ ವೇಳೆ ಇನ್ನೊಂದು ಹುಲಿ ದಾಳಿ ಮಾಡಿ ಹೊಡೆದ್ದರಿಂದ ಆದ ಗಾಯವಾಗಿದ್ದು, ಹೊಡೆತದಿಂದ ಮೂಳೆ ಮುರಿದಿರುವುದು ಕಂಡು ಬಂದಿದೆ. ಕಾದಾಟದ ವೇಳೆ ಆದ ಗಾಯದಿಂದ ತೀವ್ರ ರಕ್ತಸ್ರಾವವಾಗಿ ಹುಲಿಯು ಮೃತಪಟ್ಟಿದೆ ಎನ್ನಲಾಗಿದೆ.

ಹುಲಿ ಸಾವನ್ನಪ್ಪಿ ಮೂರು ದಿನವಾಗಿದ್ದರೂ ಬೆಳಕಿಗೆ ಬಂದಿರಲಿಲ್ಲ. ಶನಿವಾರದಂದು ಅರಣ್ಯ ಸಿಬ್ಬಂದಿಗಳು ಗಸ್ತಿನಲ್ಲಿ ಇದ್ದಾಗ ದುರ್ವಾಸನೆ ಬಂದಿದ್ದು, ಅದರಂತೆ ಶೋಧ ಕಾರ್ಯ ಕೈಗೊಂಡಾಗ ಹುಲಿಯ ಮತದೇಹ ಪತ್ತೆಯಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಎಸಿಎಫ್ ಕೆ.ಪರಮೇಶ್, ಅರಣ್ಯ ಇಲಾಖೆಯ ಪಶುವೈದ್ಯ ಡಾ.ನಾಗರಾಜ್ ಮತ್ತು ಸಿಬ್ಬಂದಿ ತೆರಳಿ ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಒಂದಲ್ಲ ಒಂದು ಕಾರಣಕ್ಕೆ ಹುಲಿ, ಚಿರತೆ, ಆನೆಗಳು ಸಾವನ್ನಪ್ಪುತ್ತಿದ್ದು ಆತಂಕ ಸೃಷ್ಠಿಯಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications