ಆಧಾರ್ ನೋಂದಣಿ: ಮುಂಚೂಣಿಯಲ್ಲಿ ಚಾಮರಾಜನಗರ!
ಚಾಮರಾಜನಗರ ಮಾರ್ಚ್, 20: ಚಾಮರಾಜನಗರ ಶೇ.96 ರಷ್ಟು ಆಧಾರ್ ಸಂಖ್ಯೆ ಹೊಂದಿದ ಜಿಲ್ಲೆಯಾಗಿ ರಾಜ್ಯದಲ್ಲಿ ದಾಖಲೆ ಬರೆದಿದೆ. ಆಧಾರ್ ಸೇವಾ ಕೇಂದ್ರಗಳ ಮೂಲಕವಲ್ಲದೆ, ಮೊಬೈಲ್ ತಂಡಗಳ ಮೂಲಕ ಆದಿವಾಸಿಗಳ ಹಾಡಿಗಳಿಗೆ ತೆರಳಿ ಪ್ರತಿ ಮನೆಯ ವ್ಯಕ್ತಿಗೂ ಆಧಾರ್ ಕಾರ್ಡ್ ನೀಡುವ ಮಾದರಿ ಕೆಲಸ ಇಲ್ಲಿ ನಡೆಯುತ್ತಿದೆ.
2011ರ ಜನಗಣತಿ ಪ್ರಕಾರ ಚಾಮರಾಜನಗರದಲ್ಲಿ 10,20,000 ಜನಸಂಖ್ಯೆಯಿದೆ. ಈ ಪೈಕಿ ಇದೀಗ 9,77,094ಕ್ಕಿಂತಲೂ ಹೆಚ್ಚು ಜನರು ಆಧಾರ್ ಸಂಖ್ಯೆ ಹೊಂದಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.
ಈಗ ಪ್ರತಿಯೊಂದಕ್ಕೂ ಆಧಾರ್ ಕಾರ್ಡ್ ಅಗತ್ಯವಾಗಿರುವ ಕಾರಣದಿಂದಾಗಿ ಜನರಿಗೆ ಆಧಾರ್ ನೀಡುವ ಪ್ರಯತ್ನ ಮಾಡಲಾಗುತ್ತಿದೆ. ಪಟ್ಟಣದಲ್ಲಿ ಆಧಾರ್ ಸೇವಾ ಕೇಂದ್ರ ತೆರೆಯಲಾಗಿದೆಯಾದರೂ ಹಾಡಿಯಲ್ಲಿ ವಾಸಿಸುವ ಹೆಚ್ಚಿನ ಜನಕ್ಕೆ ಇದರ ಬಗ್ಗೆ ಅರಿವಿಲ್ಲದ ಕಾರಣದಿಂದಾಗಿ ಮೊಬೈಲ್ ತಂಡಗಳು ಪ್ರತಿ ಹಾಡಿಗೆ ತೆರಳಿ ಅಲ್ಲಿಯೇ ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಹೆಸರು ನೋಂದಣಿ ಮಾಡುವ ಕಾರ್ಯವನ್ನು ಮಾಡುತ್ತಿದ್ದಾರೆ.[ಎಲ್ಲ ಮೊಬೈಲ್ ಸಂಖ್ಯೆಯೂ ವರ್ಷದೊಳಗೆ ಆಧಾರ್ ಜತೆಗೆ ಲಿಂಕ್ ಆಗಿರ್ಬೇಕು: ಸುಪ್ರೀಂ]

ಅಂಗನವಾಡಿ ಮಕ್ಕಳ ಆಧಾರ್ ನೋಂದಣಿಯು ಜಿಲ್ಲೆಯಲ್ಲಿ ಪ್ರಗತಿಯಲ್ಲಿದ್ದು ಜಿಲ್ಲೆಯ ಅಂಗನವಾಡಿ ಮೇಲ್ವಿಚಾರಕಿಯರಿಗೆ ಅಕ್ಟೋಬರ್ 2016ರಲ್ಲಿ ಆಧಾರ್ ನೋಂದಣಿ ತರಬೇತಿ ನೀಡಿ. ಅಂಗನವಾಡಿ ಮಕ್ಕಳ ಆಧಾರ್ ನೋಂದಣಿಯನ್ನು ಪ್ರಾರಂಭಿಸಲಾಗಿದೆ. ಜಿಲ್ಲೆಯ 0-5 ವರ್ಷದ ಒಳಗಿನ ಮಕ್ಕಳು 75422 ಇದ್ದು, 41855 ಮಕ್ಕಳು ಈಗಾಗಲೇ ಆಧಾರ್ ಸಂಖ್ಯೆ ಹೊಂದಿದ್ದಾರೆ. ಉಳಿದ ಮಕ್ಕಳ ಆಧಾರ್ ನೋಂದಣಿಯನ್ನು ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸುವ ಗುರಿ ಹೊಂದಿದೆ. ಇನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ನವಜಾತ ಶಿಶುವಿನ ಆಧಾರ್ ನೋಂದಣಿಯನ್ನು ಪ್ರಾರಂಭಿಸಲಾಗಿದೆ.[ಆಧಾರ್ ಕಾರ್ಡ್ ಮಾಡಿಸುವುದು ಹೇಗೆ?]

ಇದಲ್ಲದೆ ಆಧಾರ್ ಸೇವಾ ಕೇಂದ್ರಗಳಿಗೆ ತೆರಳಲು ಸಾಧ್ಯವಾಗದ ವೃದ್ಧರು, ನಿರ್ಗತಿಕರು, ವಿಕಲಚೇತನರನ್ನು ಗುರುತಿಸಿ ಅವರು ಇರುವ ಸ್ಥಳಕ್ಕೆ ತೆರಳಿ ಅಲ್ಲಿಯೇ ನೋಂದಣಿ ಕಾರ್ಯ ಮಾಡಲಾಗುತ್ತಿದೆ.
ಒಟ್ಟಾರೆ ಆಧಾರ್ ನೋಂದಣಿ ಕಾರ್ಯದಲ್ಲಿ ಚಾಮರಾಜನಗರ ಮುಂಚೂಣಿಯಲ್ಲಿರುವುದು ಹೆಮ್ಮೆಯ ವಿಚಾರ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications