ಬಂಡೀಪುರದಲ್ಲಿ ಚಿತ್ರೀಕರಿಸಿದ್ದ ಅಕ್ಷಯ್ ಕುಮಾರ್ ಕಾರ್ಯಕ್ರಮ ಪ್ರಸಾರಕ್ಕೆ ಕೂಡಿ ಬಂತು ಕಾಲ
ಚಾಮರಾಜನಗರ, ಸೆಪ್ಟೆಂಬರ್ 02: ಬಂಡೀಪುರ ಅರಣ್ಯದಲ್ಲಿ ಚಿತ್ರೀಕರಿಸಲಾದ, ಖ್ಯಾತ ನಟ ಅಕ್ಷಯ್ ಕುಮಾರ್ ಅಭಿನಯದ "ಇನ್ ಟು ದಿ ವೈಲ್ಡ್ ವಿತ್ ಬೇರ್ ಗ್ರಿಲ್ಸ್" ಕಾರ್ಯಕ್ರಮ ಇದೇ ಸೆ.11ರಂದು ಡಿಸ್ಕವರಿ ಪ್ಲಸ್ ಅಪ್ಲಿಕೇಶನ್ ನಲ್ಲಿ ಮತ್ತು ಸೆ.14ರಂದು ಡಿಸ್ಕವರಿ ಚಾನೆಲ್ ನಲ್ಲಿ ಪ್ರಸಾರವಾಗುತ್ತಿದೆ.
Recommended Video
ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಅಕ್ಷಯ್ ಕುಮಾರ್ ಮತ್ತು ರಜನಿಕಾಂತ್ ಅವರ ಕಾರ್ಯಕ್ರಮವನ್ನು ಕಳೆದ ಜನವರಿಯಲ್ಲಿಯೇ ಚಿತ್ರೀಕರಣ ಮಾಡಲಾಗಿತ್ತು. ಆದರೆ ಅಕ್ಷಯ್ ಕುಮಾರ್ ಕಾರ್ಯಕ್ರಮ ಪ್ರಸಾರಕ್ಕೆ ಕಾಲ ಕೂಡಿ ಬಂದಿರಲಿಲ್ಲ. ಆದರೆ ಇದೀಗ ಪ್ರಸಾರವಾಗುತ್ತಿರುವ ವಿಷಯ ತಿಳಿಯುತ್ತಿದ್ದಂತೆಯೇ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಈ ಸಾಕ್ಷ್ಯ ಚಿತ್ರದಲ್ಲಿ ಅಕ್ಷಯ್ ಕುಮಾರ್ ಮಿಲಿಟರಿ ಬಟ್ಟೆ ಧರಿಸಿ, ವೈಲ್ಡ್ ಲೈಫ್ ಕಾರ್ಯಕ್ರಮದ ನಿರೂಪಕ ಬೇರ್ ಗ್ರಿಲ್ಸ್ ಜೊತೆ ಸಾಹಸ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸ್ವತಃ ಅಕ್ಷಯ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಟೀಸರ್ ಅನ್ನು ಹಂಚಿಕೊಂಡಿದ್ದಾರೆ. ಬೇರ್ ಗ್ರಿಲ್ಸ್ ಒಬ್ಬ ನಿಜವಾದ ನಾಯಕ ಎಂದು ಅಕ್ಷಯ್ ಕುಮಾರ್ ಬಣ್ಣಿಸಿದ್ದಾರೆ.

"ಇನ್ಟು ದಿ ವೈಲ್ಡ್ ಗೆ ಮುಂಚಿತವಾಗಿ ನಾನು ಕಠಿಣ ಸವಾಲುಗಳನ್ನು ದೃಶ್ಯೀಕರಿಸಿದ್ದೇನೆ. ಆದರೆ ಬೇರ್ ಗ್ರಿಲ್ಸ್ ಆನೆ ಲದ್ದಿ ಚಹಾದೊಂದಿಗೆ ನನ್ನನ್ನು ಸಂಪೂರ್ಣವಾಗಿ ಆಶ್ಚರ್ಯಗೊಳಿಸಿದರು" ಎಂದು ಹೇಳಿಕೊಂಡಿದ್ದಾರೆ. ಒಟ್ಟಾರೆಯಾಗಿ ಇನ್ ಟು ದಿ ವೈಲ್ಡ್ ವಿತ್ ಬೇರ್ ಗ್ರಿಲ್ಸ್ ಹೇಗಿರಲಿದೆ ಎಂಬ ಕುತೂಹಲವಂತೂ ಎಲ್ಲರಲ್ಲೂ ಇದ್ದೇ ಇದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications