ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ವಿರುದ್ಧ ಆದಿವಾಸಿಗಳಿಂದ ಪ್ರತಿಭಟನೆ
ಚಾಮರಾಜನಗರ, ಫೆಬ್ರವರಿ 22: ಜಿಲ್ಲೆಯ ಮಲೆ ಮಹದೇಶ್ವರ ವನ್ಯ ಜೀವಿಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ ಅಧಿಸೂಚನೆಯನ್ನು ಹೊರಡಿಸದಂತೆ ಗಿರಿಜನರು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಗುರುವಾರ ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ನೆರೆದ ನೂರಾರು ಮಂದಿ ಗಿರಿಜನರು, ಸೋಲಿಗರು ಮತ್ತು ಬುಡಕಟ್ಟು ಸಮುದಾಯದವರು ತಮ್ಮದೇ ಆದ ಉಡುಗೆಗಳನ್ನು ತೊಟ್ಟು, ಬಾಯಿಗೆ ಹಸಿರು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿ ಗಮನಸೆಳೆದರು.
ಜಿಲ್ಲೆಯ ಕೊಳ್ಳೇಗಾಲ ಮತ್ತು ಹನೂರು ತಾಲೂಕಿನಾದ್ಯಂತ ವಿಸ್ತಾರಗೊಂಡಿರುವ ಮಲೆ ಮಹದೇಶ್ವರ ವನ್ಯ ಜೀವಿಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲು ವನ್ಯ ಜೀವಿ ಮಂಡಳಿಯ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರದ ಆದೇಶಕ್ಕೆ ಕಳುಹಿಸಲಾಗಿದೆ.

ಆದರೆ ಮಲೆ ಮಹದೇಶ್ವರ ವನ್ಯ ಜೀವಿಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದಾದರೆ 3,500 ಗಿರಿಜನ ಬುಡಕಟ್ಟು ಕುಟುಂಬದವರ ಸ್ಥಿತಿ ಅತಂತ್ರವಾಗಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಆದಿವಾಸಿ, ಸೋಲಿಗ ಗಿರಿಜನರಾದ ನಾವು ಶತಶತ ಮಾನಗಳಿಂದಲೂ ಅರಣ್ಯದಲ್ಲಿ ವಾಸಮಾಡಿಕೊಂಡು ಬಂದಿದ್ದೇವೆ.
ಮಲೆಮಹದೇಶ್ವರ ಅರಣ್ಯದ ವ್ಯಾಪ್ತಿಯಲ್ಲಿ ಸುಮಾರು 3500 ಕುಟುಂಬಗಳು, 17,200 ಜನಸಂಖ್ಯೆ ಆದಿವಾಸಿಗಳು ವಾಸಮಾಡುತ್ತಿದ್ದು, 2006ರಡಿ ಮಲೆಮಹದೇಶ್ವರ ವನ್ಯಜೀವಿಧಾಮದ ಒಳಗೆ ವಾಸವಾಗಿರುವ ಸೋಲಿಗರಿಗೆ, ವೈಯಕ್ತಿಕ ಭೂಮಿ ಹಕ್ಕಿನಡಿ 563 ಕುಟುಂಬಗಳಿಗೆ 1143 ಎಕರೆ ಅರಣ್ಯ ಭೂಮಿಯ ಒಡೆತನ ಲಭ್ಯವಾಗಿದೆ, ಇಷ್ಟೆಲ್ಲ ಇದ್ದರೂ ಕೂಡ, ಮಲೆಮಹದೇಶ್ವರ ಅರಣ್ಯವನ್ನು ಹುಲಿ ಯೋಜನೆ ಮಾಡಲು, ಸರ್ಕಾರ ಹೊರಟಿರುವುದು ಖಂಡನೀಯವಾಗಿದ್ದು, ಯಾವುದೇ ಕಾರಣಕ್ಕೂ ತಾವುಗಳು ಅರಣ್ಯ ಪ್ರದೇಶದಿಂದ ಹೊರ ಹೋಗಲ್ಲ ಎಂದು ಪಟ್ಟು ಹಿಡಿಯುವುದಾಗಿ ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಡಾ.ಸಿಮಾದೇಗೌಡ, ಕೋಣೂರೇಗೌಡ ಸೇರಿದಂತೆ ವಿವಿಧ ಹಾಡಿ, ಪೋಡಿನಿಂದ ಬಂದ ನೂರಾರು ಮಂದಿ ಗಿರಿಜನರು ಮತ್ತು ಬುಡಕಟ್ಟು ಸಮೂದಾಯದವರು ಪಾಲ್ಗೊಂಡಿದ್ದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications