ಯಳಂದೂರಿನ ಅಗರ ಕೆರೆಯೀಗ ಸಮಸ್ಯೆಗಳ ಆಗರ!
ಚಾಮರಾಜನಗರ, ಆಗಸ್ಟ್ 30: ಸುಮಾರು ಹತ್ತು ಸಾವಿರ ಎಕರೆ ಪ್ರದೇಶಕ್ಕೆ ನೀರುಣಿಸುತ್ತಿದ್ದ ಚಾಮರಾಜ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಗ್ರಾಮದ ಕೆರೆಯೊಂದು ಇದೀಗ ಗಿಡಗಂಟಿಗಳಿಂದ ಕೂಡಿ ಅವಸಾನದ ಅಂಚಿಗೆ ತಲುಪುತ್ತಿದ್ದರೂ ಇದರ ಅಭಿವೃದ್ಧಿಗೆ ಮುಂದಾಗದಿರುವುದು ಎದ್ದು ಕಾಣುತ್ತಿದೆ.
ಕೆರೆಗಳ ಹೂಳು ತೆಗೆದು ಅಭಿವೃದ್ಧಿ ಮಾಡದ ಕಾರಣದಿಂದಾಗಿ ಇವತ್ತು ಹಲವಾರು ಕೆರೆಗಳು ತಮ್ಮ ಅಸ್ತಿತ್ವ ಕಳೆದುಕೊಂಡು ಒತ್ತುವರಿಯಾಗಿವೆ. ಹೀಗಿರುವಾಗ ಇರುವ ಕೆರೆಯನ್ನು ಅಭಿವೃದ್ಧಿ ಪಡಿಸದೆ ಗಿಡಗಂಟಿಗಳನ್ನು ಬೆಳೆಯಲು ಬಿಟ್ಟಿರುವುದು ಸ್ಥಳೀಯ ಗ್ರಾಮದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕೆರೆ ನೀರು ಬಳಕೆದಾರರ ಸಂಘ ಮಾಡಿಕೊಂಡಿದ್ದರೂ ಈ ಸಂಘದ ಮಾತಿಗೆ ಕಿಮ್ಮತ್ತು ಇಲ್ಲದಾಗಿದೆ.

ಅಗರ ಗ್ರಾಮದ ಕೆರೆಯನ್ನು ದುರಸ್ತಿಪಡಿಸಿ ಎಂದು ಶಾಸಕ ಎಸ್.ಜಯಣ್ಣ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಾಗಲೇ ಅವರು ಸಭೆ ಸಮಾರಂಭಗಳಲ್ಲಿ ಕೆರೆ ಅಭಿವೃದ್ಧಿಗೆ ಲಕ್ಷಾಂತರ ರೂ. ಖರ್ಚು ಮಾಡಿದ್ದಾಗಿ ಭಾಷಣ ಬಿಗಿಯುತ್ತಾರೆ. ಆದರೆ ನಮ್ಮ ಊರಿನ ಕೆರೆಯ ಬಗ್ಗೆ ಯಾವುದೇ ರೀತಿಯ ಕಾಳಜಿ ವಹಿಸಿಲ್ಲ ಎಂದು ಕರ್ನಾಟಕ ರೈತ ಸಂಘದ ಮುಖಂಡ ಹಾಗೂ ಅಗರ ಕೆರೆ ನೀರು ಬಳಕೆದಾರರ ಸಂಘದ ಉಪಾಧ್ಯಕ್ಷ ಕಿನಕಹಳ್ಳಿ ಬಸವಣ್ಣ ದೂರಿದ್ದಾರೆ.
ಅವರು ಹೇಳುವಂತೆ ಅಗರ ಗ್ರಾಮದ ಕೆರೆ 999 ಎಕರೆ ವಿಸ್ತೀರ್ಣ ಹೊಂದಿದ್ದು, ಕೆರೆ ನೀರು ತುಂಬಿದರೆ 10 ರಿಂದ 12 ಸಾವಿರ ಎಕರೆ ಪ್ರದೇಶಕ್ಕೆ ನೀರು ದೊರೆಯಲಿದೆಯಂತೆ. ಕೆರೆಯ ನಾಲ್ಕು ದಿಕ್ಕುಗಳಲ್ಲಿ ಜಮೀನುಗಳಿಗೆ ನೀರು ಪೂರೈಕೆ ಮಾಡುವ ತೂಬುಗಳಿವೆ. ಇನ್ನು ಕೆರೆಯಿಂದ ನೀರು ಪೂರೈಕೆ ಮಾಡುವ ರಾಜ ಕಾಲುವೆಗಳು ಒತ್ತುವರಿಯಾಗಿ ಮುಚ್ಚಿ ಹೋಗಿದೆ. ಕಬಿನಿ ನಾಲೆಯಿಂದ ಇತರೆ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆಯಾದರೂ ಅಗರ ಕೆರೆಗೆ ನೀರು ತುಂಬಿಸಿಲ್ಲ ಎಂದು ಆರೋಪಿಸುತ್ತಿದ್ದಾರೆ.

ಹೊಮ್ಮ ಗ್ರಾಮದ ಕಬಿನಿ ಪಿಕಪ್ ನಾಲೆಯಿಂದ ಸುವರ್ಣಾವತಿ ನದಿ ಮೂಲಕ ಕಟ್ಟೆಗಣಿಗನೂರು ಗ್ರಾಮದ ಬಳಿ ತಡೆಗೋಡೆ ನಿರ್ಮಿಸಿ ಅಗರ ಕೆರೆಗೆ ನೀರು ಪೂರೈಸುವ ಪಿಕಪ್ ಕಾಲುವೆ ಇದೆ. ಆದರೂ ಕೂಡ ಅಧಿಕಾರಿಗಳು ಮಾತ್ರ ಕಾಲುವೆಗಳನ್ನು ಹೂಳು ತೆಗೆಸಿ ಕೆರೆಗೆ ನೀರು ತುಂಬಿಸುವಲ್ಲಿ ವಿಫಲರಾಗಿರುವುದು ಕಂಡು ಬಂದಿದೆ.
ಅಗರ ಗ್ರಾಮದ ಕೆರೆಯನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಾಂಬಳ್ಳಿ ನಂಜುಂಡಸ್ವಾಮಿರವರು ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿ.ಸೋಮಣ್ಣ ಮತ್ತು ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿರನ್ನು ಕರೆದುಕೊಂಡು ಅಗರ ಕೆರೆ ಪರಿಶೀಲನೆ ನಡೆಸಿ ಕೆರೆ ಅಭಿವೃದ್ಧಿಗೆ ಬೇಕಾದ ಅಗತ್ಯ ಅನುದಾನವನ್ನು ಮಂಜೂರಾತಿ ಮಾಡಿ 3.37 ಕೋಟಿ ರೂ ವೆಚ್ಚದಲ್ಲಿ ಅಂದಾಜು ಪಟ್ಟಿ ತಯಾರಿಸಿ ಕಾಮಗಾರಿ ಪ್ರಾರಂಭಿಸಲು ಟೆಂಡರ್ ಕರೆಯಲಾಗಿತ್ತು. ಆದರೆ ಆ ವೇಳೆಗೆ ಚುನಾವಣೆ ಬಂದಿದ್ದರಿಂದ ಅದು ನೆನೆಗುದಿಗೆ ಬಿದ್ದಿದೆ. ಪರಿಣಾಮ ಈಗ ಅಗರ ಕೆರೆ ಗಿಡಗಂಟಿ ಬೆಳೆದು ಸಮಸ್ಯೆಗಳ ಆಗರವಾಗಿ ಮಾರ್ಪಟ್ಟಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications