ಬಾವಿಕೆರೆ ಹಾಡಿ ಯುವಕರ ಮೇಲೆ ಅರಣ್ಯ ಸಿಬ್ಬಂದಿ ಹಲ್ಲೆ ಆರೋಪ
ಚಾಮರಾಜನಗರ, ಸೆಪ್ಟೆಂಬರ್ 28; ಅರಣ್ಯದಲ್ಲಿ ಜೇನು ಕೀಳಲು ಹೋದ ಹಾಡಿ ಯುವಕರ ಮೇಲೆ ಅರಣ್ಯ ಸಿಬ್ಬಂದಿ ಅಮಾನುಷವಾಗಿ ಹಲ್ಲೆ ಮಾಡಿರುವ ಆರೋಪ ಎಚ್.ಡಿ.ಕೋಟೆ ತಾಲೂಕಿನ ಹೆಡಿಯಾಲ ಅರಣ್ಯ ಪ್ರದೇಶದ ಬಾವಿಕೆರೆ ಹಾಡಿಯಲ್ಲಿ ಕೇಳಿ ಬಂದಿದೆ.
ಶುಕ್ರವಾರ ಸಂಜೆ ಹೆಡಿಯಾಲ ಅರಣ್ಯ ಪ್ರದೇಶದ ಬಾವಿಕೆರೆ ಹಾಡಿಯ ಜೇನು ಕುರುಬ ಜನಾಂಗದ 8 ಜನ ಯುವಕರು ಜೇನು ಕೀಳಲು ಅರಣ್ಯಕ್ಕೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಜೇನು ಕೀಳುವಾಗ ಬೆಂಕಿ ಹಾಕಿದ್ದು, ಈ ಹೊಗೆಯನ್ನು ಕಂಡ ಅರಣ್ಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಬಂದಿದ್ದಾರೆ. ಆಗ ಅಧಿಕಾರಿಗಳನ್ನು ಕಂಡ ಯುವಕರು ಕಾಡಿನಲ್ಲಿ ಅವಿತುಕೊಂಡಿದ್ದರಿಂದ ಅವರ ಮೂರು ಬೈಕ್ಗಳನ್ನು ವಶಕ್ಕೆ ಪಡೆದ ಅರಣ್ಯ ಸಿಬ್ಬಂದಿ ಇಲಾಖೆಗೆ ಮರಳಿದ್ದಾರೆ.
ಆದರೆ, ತಮ್ಮ ಬೈಕ್ ಹಿಂಪಡೆಯಲು ಅರಣ್ಯ ಇಲಾಖೆಗೆ ಹೋದ ಕುಮಾರ, ಸುರೇಶ, ರಾಮ, ಮಾದ, ಗಣೇಶ, ಕುಮಾರ ಹಾಗೂ ಇಬ್ಬರು ಅಪ್ರಾಪ್ತರನ್ನು ಇಲಾಖೆಯ ಸಿಬ್ಬಂದಿ ಅಮಾನುಷವಾಗಿ ಥಳಿಸಿದ್ದು, ಅದರಲ್ಲಿ 4 ಜನರನ್ನು ತಮ್ಮ ವಶದಲ್ಲೇ ಉಳಿಸಿಕೊಂಡು ಉಳಿದ 4 ಜನರನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಎಸ್ಪಿ ಭೇಟಿಯಾದ ನೊಂದವರು: ಹೀಗೆ ಅರಣ್ಯ ಸಿಬ್ಬಂದಿಯಿಂದ ಅಮಾನುಷವಾಗಿ ಹಲ್ಲೆಗೊಳಗಾದ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿ ನಂತರ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರನ್ನು ಭೇಟಿ ಮಾಡಿ ಘಟನೆಯನ್ನು ವಿವರಿಸಿದ್ದಾರೆ. ಇಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಎಸ್ಪಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಹಲ್ಲೆಗೊಳಗಾದ ರಾಜು ಹೇಳಿದ್ದೇನು?: ನಾವು ರಾತ್ರಿ ಸಮಯ ಅರಣ್ಯಕ್ಕೆ ಜೇನು ಕೀಳಲು ಹೋದಾಗ, ಅರಣ್ಯ ಇಲಾಖೆ ಅಧಿಕಾರಿಗಳು ಬಂದು ನಮ್ಮ ಬೈಕ್ಗಳನ್ನು ಕಿತ್ತುಕೊಂಡು ಹೋದರು. ಬೆಳಗ್ಗೆ ಬೈಕ್ ತೆಗೆದುಕೊಳ್ಳಲು ಹೋದಾಗ ನಮ್ಮನ್ನು ಮನಸೋ ಇಚ್ಛೆ ಥಳಿಸಿದರು. ಗಂಧ ಕದಿಯಲು ಬಂದಿರುವುದಾಗಿ ಒಪ್ಪಿಕೊಳ್ಳುವಂತೆ ಕಿರುಕುಳ ನೀಡಿದರು ಎಂದು ಆರೋಪಿಸಿದ್ದಾನೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications