ಕೊನೆಗೂ ಕಾಡಂಚಿನ ಜನರ ತುರ್ತು ಸೇವೆಗೆ ಬಂದ್ವು ಆ್ಯಂಬುಲೆನ್ಸ್, ಎಷ್ಟು ಗೊತ್ತಾ?
ಚಾಮರಾಜನಗರ, ಜನವರಿ, 07: ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕಾಡಂಚಿನ ಜನರು ಇನ್ಮುಂದೆ ಅರಣ್ಯ ಇಲಾಖೆಯ ಆ್ಯಂಬುಲೆನ್ಸ್ ನೆರವು ಪಡೆಯಬಹುದಾಗಿದ್ದು, ಜನಸ್ನೇಹಿ ಇಲಾಖೆಯಾಗುವತ್ತ ಅರಣ್ಯಾಧಿಕಾರಿ ಹೆಜ್ಜೆ ಇಟ್ಟಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಗೆ ಒಳಪಡುವ ಬಂಡೀಪುರ, ಎಲಚೆಟ್ಟಿ, ಜಕ್ಕಹಳ್ಳಿ, ಮಂಗಲ ಸೇರಿದಂತೆ ಇನ್ನಿತರ ಹಲವು ಗ್ರಾಮದ ಹಾಗೂ ಗಿರಿಜನ ಹಾಡಿಗಳಿಗೆ ಸಮರ್ಪಕವಾಗಿ ಬಸ್ ವ್ಯವಸ್ಥೆ ಇಲ್ಲದ ಕಾರಣ ಜ್ವರ, ನೆಗಡಿ ಸೇರಿದಂತೆ ಇನ್ನಿತರ ಖಾಯಿಲೆಗಳು ಕಾಣಿಸಿಕೊಂಡರೆ ಜನರು ಪಟ್ಟಣದ ಆಸ್ಪತ್ರೆಗಳಿಗೆ ತೆರಳಲು ಹರಸಾಹಸ ಪಡಬೇಕಾಗಿತ್ತು.

ಜೊತೆಗೆ ರಾತ್ರಿ ವೇಳೆ ವಾಹನ ಸಂಪರ್ಕವಿಲ್ಲದೆ ತೀವ್ರ ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ಇತ್ತು. ಇದನ್ನು ಮನಗಂಡ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶಕುಮಾರ್ ವಿಶೇಷ ಕಾಳಜಿ ವಹಿಸಿ, ಹುಲಿ ಸಂರಕ್ಷಣಾ ಪ್ರತಿಷ್ಠಾನದ ವತಿಯಿಂದ ಎರಡು ಮಾರುತಿ ಓಮಿನಿ ಕಾರುಗಳನ್ನು ಬಾಡಿಗೆಗೆ ಪಡೆದು ಕಾಡಂಚಿನ ಜನರಿಗೆ ಆರೋಗ್ಯ ಸೇವೆ ನೀಡಲು ಯೋಜನೆ ರೂಪಿಸಿದ್ದಾರೆ.
ಹುಲಿ ಸಂರಕ್ಷಣಾ ಪ್ರತಿಷ್ಠಾನ ಕೊಡುಗೆಯಾಗಿ ನೀಡಿರುವ ಆ್ಯಂಬುಲೆನ್ಸ್ ದಿನದ 24 ಗಂಟೆಗಳ ಕಾಲ ಸೇವೆಗೆ ಸಿದ್ಧವಿದ್ದು, ಆರೋಗ್ಯ ಸಮಸ್ಯೆ ಕಂಡು ಬಂದ ಕಾಡಂಚಿನ ಗ್ರಾಮಸ್ಥರು ಇಲಾಖೆಗೆ ದೂರವಾಣಿ ಮೂಲಕ ಮಾಹಿತಿ ನೀಡಿದ ಕೂಡಲೇ ಆ್ಯಂಬುಲೆನ್ಸ್ ಸ್ಥಳಕ್ಕೆ ಆಗಮಿಸಿ, ಅಗತ್ಯವಿರುವ ಪ್ರಾಥಮಿಕ ಅಥವಾ ತಾಲೂಕು ಆಸ್ಪತ್ರೆಗೆ ರೋಗಿಯನ್ನು ಕರೆದೊಯ್ಯುತ್ತದೆ. ಹೆಚ್ಚಿನ ತುರ್ತು ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೂ ಕೂಡ ತೆರಳಲಿದೆ.
ಜನರ ಮನವಿಗೆ ಸ್ಪಂದಿಸಿದ ಅರಣ್ಯಾಧಿಕಾರಿ: ರಾತ್ರಿ ವೇಳೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೆ ಬಂಡೀಪುರದಿಂದ ಪಟ್ಟಣದ ಆಸ್ಪತ್ರೆಗಳಿಗೆ ತೆರಳಲು ವಾಹನಗಳ ವ್ಯವಸ್ಥೆ ಇಲ್ಲದೆ ಜನರು ಹಲವು ವರ್ಷಗಳಿಂದಲೂ ಪರದಾಡುತ್ತಿದ್ದರು. ಈ ಮಧ್ಯೆ ದ್ವಿಚಕ್ರ ವಾಹನಗಳಲ್ಲಿ ಕಾಡುಪ್ರಾಣಿಗಳ ಭಯದಲ್ಲಿ ಆಸ್ಪತ್ರೆಗಳಿಗೆ ಹೋಗಬೇಕಾದ ಪರಿಸ್ಥಿತಿ ಇತ್ತು. ಈ ಕುರಿತು ಸ್ಥಳೀಯರು ಅರಣ್ಯಾಧಿಕಾರಿಗಳ ಮುಂದೆ ಸಮಸ್ಯೆ ಚಿಚ್ಚಿಟ್ಟಿದ್ದರು. ಇದನ್ನು ಮನಗಂಡ ಅರಣ್ಯ ಇಲಾಖೆ ಇದೀಗ ಜನರ ಮನವಿ ಮೇರೆಗೆ ಕಾಡಂಚಿನ ಗ್ರಾಮಸ್ಥರಿಗೆ ಉತ್ತಮ ಆರೋಗ್ಯ ಸೇವೆ ದೊರಕಬೇಕು ಎಂಬ ಉದ್ದೇಶದಿಂದ ಎರಡು ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿದೆ.
ಶೀಘ್ರದಲ್ಲೆ ಚಾಲನೆ:ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ವಿಶೇಷ ಕಾಳಜಿ ಹಾಗೂ ಹುಲಿ ಸಂರಕ್ಷಣಾ ಪ್ರತಿಷ್ಠಾನ ಕೊಡುಗೆಯಾಗಿ ನೀಡಿರುವ ಎರಡು ಆ್ಯಂಬುಲೆನ್ಸ್ ಸೇವೆಗೆ ಸಿದ್ದವಾಗಿದ್ದು, ಶಾಸಕ ಎಚ್.ಎಂ.ಗಣೇಶಪ್ರಸಾದ್ ಮೂಲಕ ಚಾಲನೆ ದೊರಕಿಸಲು ಇಲಾಖೆ ಸನ್ನದ್ಧವಾಗಿದೆ. ಆ್ಯಂಬುಲೆನ್ಸ್ ಗಳಿಗೆ ಶೀಘ್ರದಲ್ಲೆ ಹಸಿರು ನಿಶಾನೆ ಸಿಗಲಿದೆ ಎಂದು ಅರಣ್ಯಾಧಿಕಾರಿ ಡಾ.ರಮೇಶ್ ಕುಮಾರ್ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications