ವಿದ್ಯುತ್ ತಂತಿಯಿಂದ ಹಾರಿದ ಕಿಡಿಗೆ ಕಾರು ಭಸ್ಮ
ಬೆಂಕಿ ಅನಾಹುತಕ್ಕೆ ಇಂಡಿಕಾ ಕಾರು ಹಾಗೂ ಅದರ ಸಮೀಪವಿದ್ದ ಜೋಳದ ಕಡ್ಡಿಯ ಬಣವೆಗಳು ಸುಟ್ಟು ಬೂದಿಯಾಗಿವೆ.
ಚಾಮರಾಜನಗರ: ಬೇಸಿಗೆ ಬರುತ್ತಿದ್ದಂತೆಯೇ ಅಲ್ಲಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಿದ್ದು, ಎಷ್ಟೇ ಎಚ್ಚರ ವಹಿಸುತ್ತಿದ್ದರೂ ಅಗ್ನಿ ಅನಾಹುತಗಳು ನಿಲ್ಲುವಂತೆ ಕಾಣುತ್ತಿಲ್ಲ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ, ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ವಿದ್ಯುತ್ ತಂತಿ ಒಂದಕ್ಕೊಂದು ತಗುಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಎರಡು ಜೋಳದ ಕಡ್ಡಿಯ ಮೆದೆ ಮತ್ತು ಒಂದು ಕಾರು ಸಂಪೂರ್ಣ ಭಸ್ಮಗೊಂಡಿದೆ.
ಶುಕ್ರವಾರ ಮಧ್ಯಾಹ್ನ ಕಂದೇಗಾಲದಲ್ಲಿ ಮೃತರಾದ ನಂಜಪ್ಪ ಎಂಬುವರ ಅಂತಿಮ ದರ್ಶನಕ್ಕೆ ಉಡಿಗಾಲ ಗ್ರಾಮದ ಮಾದಪ್ಪ ಎಂಬುವರು ತಮ್ಮ ಇಂಡಿಕಾ ಕಾರಿನಲ್ಲಿ ಬಂದಿದ್ದರು. ಅವರು ಕಾರನ್ನು ತೆಂಗಿನ ಮರದ ನೆರಳಿನಲ್ಲಿ ನಿಲ್ಲಿಸಿ ತೆರಳಿದ್ದರು.[ಬಂಡೀಪುರದಲ್ಲಿನ್ನೂ ಆರದ ಬೆಂಕಿ : ಅಪಾರ ಅರಣ್ಯ ಸಂಪತ್ತು ನಾಶ]

ಮಧ್ಯಾಹ್ನ ನೆತ್ತಿ ಸುಡುವ ಬಿಸಿಲಿನ ಜತೆಯಲ್ಲೇ ಗಾಳಿ ಬಂದಿದ್ದು ಈ ಸಂದರ್ಭ ಅಲ್ಲಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ಗೆ ಎಳೆಯಲಾಗಿದ್ದ ವಿದ್ಯುತ್ ತಂತಿ ತಗುಲಿ ಕಿಡಿ ಹಾರಿ ಬೆಂಕಿ ಹೊತ್ತಿ ಉರಿದಿದೆ. ಪರಿಣಾಮ ಜೋಳದ ಕಡ್ಡಿಯ ಮೆದೆ ಹಾಗೂ ಅಲ್ಲೇ ನಿಲ್ಲಿಸಿದ ಇಂಡಿಕಾ ಕಾರಿಗೂ ಬೆಂಕಿ ತಗುಲಿದ್ದು, ಸಂಪೂರ್ಣ ಭಸ್ಮವಾಗಿದೆ. ಬೆಂಕಿಯ ಕೆನ್ನಾಲಿಗೆ ತೆಂಗಿನ ಮರಕ್ಕೂ ತಗುಲಿದ್ದು ಅವು ಸುಟ್ಟು ಹೋಗಿವೆ.[9 ವರ್ಷಗಳಿಂದ ಆರೋಗ್ಯ ಸಹಾಯಕಿಯರಿಲ್ಲದೆ ಆಸ್ಪತ್ರೆಗೆ ಬೀಗ!]

ದಟ್ಟ ಹೊಗೆ ಆವರಿಸಿ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಕಂಡು ಎಲ್ಲರೂ ಓಡಿ ಬಂದರಾದರೂ ಬೆಂಕಿ ನಂದಿಸುವುದು ಸುಲಭದ ಕೆಲಸವಾಗಿರಲಿಲ್ಲ. ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿ ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಅಗ್ನಿ ಅನಾಹುತದಿಂದ ಸುಮಾರು 5ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಂಡ್ಲುಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications