ಇದೇ ಮೊಟ್ಟ ಮೊದಲ ಬಾರಿಗೆ ಪುಂಡಾನೆ ದಂತಕ್ಕೆ ಕತ್ತರಿ ಪ್ರಯೋಗ: ಮತ್ತೊಂದು ಇತಿಹಾಸ ಸೃಷ್ಟಿಸಿದ ಬಂಡೀಪುರ
ಚಾಮರಾಜನಗರ, ಮೇ, 20: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ ವಲಯದಂಚಿನ ರೈತರ ಜಮೀನಿಗೆ ನುಗ್ಗಿ ದಾಂಧಲೆ ಮಾಡುತ್ತಿದ್ದ ಕಾಡಾನೆಗೆ ಬಂಡೀಪುರ ಅರಣ್ಯ ಇಲಾಖೆಯು, ಕೂಡು ದಂತಕ್ಕೆ ಚಿಕಿತ್ಸೆ ಮಾಡುವ ಮೂಲಕ ಕಾಡಾನೆಗೆ ನೈಸರ್ಗಿಕವಾಗಿ ಆಹಾರ ಸೇವನೆಗೆ ಅನುವು ಮಾಡಿಕೊಟ್ಟಿದೆ.
ಗುಂಡ್ಲುಪೇಟೆ ತಾಲೂಕಿನ ಹಂಗಳ ಸುತ್ತ ಮುತ್ತಲಿನ ರೈತರ ಜಮೀನಿನ ಫಸಲು ತಿಂದು ಹಾಳು ಮಾಡುತ್ತಿದ್ದ ಕೂಡು ದಂತ ಕಾಡಾನೆಯ ಹಾವಳಿಗೆ ರೈತರು ಆಕ್ರೋಶಗೊಂಡ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ, ಕಾಡಾನೆ ಸೆರೆ ಹಿಡಿದಿತ್ತು. ಬಳಿಕ ಅದನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವಲಯಕ್ಕೆ ಬಿಟ್ಟಿದ್ದು, ಕಾಡಿಗೆ ಬಿಡುವ ಮುನ್ನ ಆನೆ ದಂತಕ್ಕೆ ಕತ್ತರಿ ಪ್ರಯೋಗ ಮಾಡಲಾಗಿದೆ.

ಬಂಡೀಪುರ ಸಿಎಫ್ಒ ಪ್ರಭಾಕರನ್ ಅವರು ಸೆರೆ ಹಿಡಿದ ಕಾಡಾನೆ ನಾಡಿಗೇಕೆ ಬಂದು ರೈತರ ಜಮೀನಿನ ಫಸಲು ತಿನ್ನುತ್ತಿತ್ತು ಎಂದು ವೈಜ್ಞಾನಿಕವಾಗಿ ವಿಶ್ಲೇಷಣೆ ಮಾಡಿದ ಬಳಿಕ, ಹಂಗಳ ಸುತ್ತಮುತ್ತ ದಾಂಧಲೆ ಮಾಡುತ್ತಿದ್ದ ಕಾಡಾನೆಗೆ ಕೂಡು ದಂತ ಕಾರಣ ಎಂದು ಮೊದಲಿಗೆ ಖಚಿತ ಪಡಿಸಿಕೊಂಡಿದ್ದಾರೆ.
ಮೇಲಾಧಿಕಾರಿಗಳ ಅನುಮತಿ ಪಡೆದು ಆನೆಯನ್ನು ಸೆರೆ ಹಿಡಿದ ಕೋಡು ದಂತವನ್ನು ಸ್ವಲ್ಪ ತುಂಡು ಮಾಡಲಾಗಿದೆ. ಬಳಿಕ ಕೂಡು ದಂತ ಕಾಡಾನೆಗೆ ನೈಸರ್ಗಿಕಾಗಿ ಆಹಾರ ಸೇವನೆಗೆ ಹಾಗೂ ಕಾಡಿನಿಂದ ನಾಡಿಗೆ ಬಂದು ರೈತರ ಫಸಲು ನಾಶವಾಗದಂತೆ ಅರಣ್ಯ ಇಲಾಖೆ ಕಾಳಜಿ ವಹಿಸಿ, ಇದೇ ಮೊದಲ ಬಾರಿಗೆ ಈ ರೀತಿ ಪ್ರಯೋಗ ನಡೆಸುವ ಮೂಲಕ ಬಂಡೀಪುರ ಇತಿಹಾಸ ಬರೆದಿದೆ.
ಸೆರೆ ಹಿಡಿದಿದ್ದ ಕಾಡಾನೆಗೆ ಎರಡು ದಂತ ಅಡ್ಡಾದಿಡ್ಡಿಯಾಗಿ ಬೆಳೆದು ಒಂದಕ್ಕೊಂದು ಕೂಡಿಕೊಂಡಿದ್ದ ಕಾರಣ ಸೊಂಡಿಲ ಮೇಲೆತ್ತಲು ಆಗುತ್ತಿರಲಿಲ್ಲ. ಕಾಡಲ್ಲಿ ಮರದ ಸೊಪ್ಪು, ಹಣ್ಣು ತಿನ್ನಲು ಆಗುತ್ತಿಲ್ಲ. ದೇಹ ತಂಪು ಮಾಡಿಕೊಳ್ಳಲು ಕಾಡಾನೆ ಮಣ್ಣು, ಮರಳು, ನೀರು ತಂಪು ಮಾಡಿಕೊಳ್ಳಲು ಆಗುತ್ತಿರಲಿಲ್ಲ.
ಕೂಡು ದಂತಗಳ ಒಳಗಿಂದ ಆನೆ ಸೊಂಡಿಲು ಮೇಲತ್ತಲು ಆಗದೆ, ಕಾಡಿನ ಆಹಾರ ತಿನ್ನಲು ಆಗದ ಕಾರಣ ಕಾಡಾನೆ ಸುಲಭವಾಗಿ ಆಹಾರ ಸೇವನೆಗೆ ಕಾಡಾಂಚಿನ ಗ್ರಾಮದ ರೈತರ ಜಮೀನಿನಲ್ಲಿ ಬೆಳೆದ ಫಸಲು ತಿನ್ನಲು ಶುರು ಮಾಡಿದೆ.
ಜಮೀನುಗಳಿಗೆ ದಾಳಿ: ನೆಲ ಮಟ್ಟದಲ್ಲಿ ಬೆಳೆದ ಕಬ್ಬು , ಬಾಳೆ ಗಿಡ, ಟೊಮ್ಯಾಟೊ ಸೇರಿದಂತೆ ಮತ್ತಿತರ ತರಕಾರಿ ಸುಲಭವಾಗಿ ತಿಂದು ಹಸಿವು ನೀಗಿಸಿಕೊಳ್ಳುತ್ತಿದ್ದ ಕಾಡಾನೆಯು ಇದನ್ನೇ ನಿತ್ಯ ಅಭ್ಯಾಸ ಮಾಡಿಕೊಂಡಿತ್ತು. ಇದರಿಂದ ರೈತರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿತ್ತು. ಈಗ ಸದ್ಯ, ಆನೆಗೆ ದಂತ ಕತ್ತರಿಸಿದ ಬಳಿಕ ಕಾಡಲ್ಲಿ ಆರೋಗ್ಯದಿಂದಿದ್ದು ನೈಸರ್ಗಿಕವಾಗಿ ಸಿಗುವ ಆಹಾರ ಸೇವಿಸುತ್ತಿದೆ ಎನ್ನಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications