ಪ್ರಾಣಿಪ್ರಿಯರಿಗೆ Good news: ರಾಜ್ಯದಲ್ಲಿ ಮತ್ತೊಂದು ವನ್ಯಜೀವಿ ಸಫಾರಿ ಆರಂಭ
ಚಾಮರಾಜನಗರ, ಡಿಸೆಂಬರ್, 02: ಪರಿಸರ ಪ್ರವಾಸೋದ್ಯಮ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಗಡಿಜಿಲ್ಲೆ ಚಾಮರಾಜನಗರದಲ್ಲಿ ಇಂದಿನಿಂದ ಮತ್ತೊಂದು ವನ್ಯಜೀವಿ ಸಫಾರಿ ಆರಂಭಗೊಂಡಿದೆ.
ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಗಡಿಜಿಲ್ಲೆ ಚಾಮರಾಜನಗರದಲ್ಲಿ ಈಗಾಗಲೇ ಬಂಡೀಪುರ, ಕೆ.ಗುಡಿ, ಗೋಪಿನಾಥಂನಲ್ಲಿ ವನ್ಯಜೀವಿ ಸಫಾರಿ ಇದ್ದು, ಇಂದಿನಿಂದ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಪಿ.ಜಿ.ಪಾಳ್ಯ ಸಮೀಪ ಸಫಾರಿ ಆರಂಭಗೊಂಡಿದೆ. ಒಂದೇ ಜಿಲ್ಲೆಯಲ್ಲಿ ನಾಲ್ಕು ಕಡೆ ವನ್ಯಜೀವಿ ಸಫಾರಿ ನಡೆಸಬಹುದಾಗಿದ್ದು, ಪಿ.ಜಿ.ಪಾಳ್ಯದ ಕಡೆ ಹುಲಿ, ಚಿರತೆ ಆನೆ, ಕಾಡೆಮ್ಮೆ, ಜಿಂಕೆ, ವೈವಿಧ್ಯಮಯ ಪಕ್ಷಿಗಳು ಸೇರಿದಂತೆ ಎಲ್ಲಾ ಪ್ರಾಣಿಗಳನ್ನು ಇನ್ಮುಂದೆ ಪ್ರವಾಸಿಗರು ಕಣ್ತುಂಬಿಕೊಳ್ಳಬಹುದಾಗಿದೆ.

ಇಂದು ಬೆಳಗ್ಗೆ ಹನೂರು ಶಾಸಕ ಎಂ.ಆರ್.ಮಂಜುನಾಥ್ ಸಫಾರಿಗೆ ಚಾಲನೆ ನೀಡಿದ್ದು, ಪ್ರವಾಸಿಗರು ಇದರ ಸದುಪಯೋಗಪಡಿಸಿಕೊಂಡು ಪರಿಸರವನ್ನು ಕಣ್ತುಂಬಿಕೊಳ್ಳಬೇಕು ಹಾಗೂ ಪರಿಸರ ಉಳಿಸುವತ್ತ ಎಲ್ಲರೂ ಮುಂದಾಗಬೇಕು ಎಂದು ಹೇಳಿದ್ದಾರೆ. ಇನ್ನು, ಸಫಾರಿಗೆ ತೆರಳುವ ಪ್ರವಾಸಿಗರಿಗೆ ವಾಹನ ಶುಲ್ಕವಾಗಿ 100 ರೂಪಾಯಿ, ವಯಸ್ಕರಿಗೆ ತಲಾ 400 ಹಾಗೂ ಮಕ್ಕಳಿಗೆ 200 ರೂಪಾಯಿ ದರವನ್ನು ನಿಗದಿ ಪಡಿಸಲಾಗಿದೆ.
ಆನೆ ನಡೆದದ್ದೇ ದಾರಿ ಎಂಬ ಮಾತಿಗೆ ಸಾಕ್ಷಿಯಾದ ಈ ಘಟನೆ
ಆನೆಯೊಂದು ಇದು ನನ್ ಏರಿಯಾ ಎಂಬಂತೆ ಸಫಾರಿ ವಾಹನಕ್ಕೆ ಅಡ್ಡ ಹಾಕಿ ದಾರಿ ಕೊಡದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ವನ್ಯಜೀವಿ ಸಫಾರಿಯಲ್ಲಿ ನಡೆದಿದೆ.
ಗುರುವಾರ ಸಂಜೆಯ ಸಫಾರಿ ವೇಳೆ ಸಫಾರಿ ಬಸ್ ಅನ್ನು ಅಡ್ಡ ಹಾಕಿರುವ ಸಲಗ, ವಾಹನವನ್ನು ಹಿಮ್ಮೆಟ್ಟಿಸಿದೆ. ಆನೆ ನಡೆದಿದ್ದೆ ಹಾದಿ ಎಂಬುದಕ್ಕೆ ಬಂಡೀಪುರದಲ್ಲಿ ನಡೆದ ಘಟನೆ ಸಾಕ್ಷಿಯಾಗಿದ್ದು, ಸಲಗ ದಾರಿ ಕೊಡದ ಪರಿಣಾಮ ಚಾಲಕ ವಾಹನವನ್ನು ರಿವರ್ಸ್ ಗೇರ್ನಲ್ಲಿ ಚಲಾಯಿಸಿ ಬೇರೆ ದಾರಿ ಮೂಲಕ ಸಫಾರಿಗೆ ತೆರಳಿದ್ದಾರೆ. ಈ ಆನೆ ದಾದಾಗಿರಿ ವೀಡಿಯೋ ಪ್ರವಾಸಿಗರ ಮೊಬೈಲ್ನಲ್ಲಿ ಸೆರೆಯಾಗಿದೆ. ಹೀಗೆ ಸಫಾರಿ ವೇಳೆ ಆಗಾಗ್ಗೆ ಆನೆಗಳು ವಾಹನ ಅಟ್ಟಾಡಿಸುತ್ತಿರುತ್ತವೆ.
-
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು?












Click it and Unblock the Notifications