ಟಿಪ್ಪು ಜಯಂತಿ ವಿರೋಧಿಸಿ ಮೆರವಣಿಗೆ: ಕಾರ್ಯಕರ್ತರ ಬಂಧನ
ಚಾಮರಾಜನಗರ, ನವೆಂಬರ್, 8: ಟಿಪ್ಪು ಜಯಂತಿ ಆಚರಣೆ ಮಾಡವುದನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮತ್ತು ಆರ್ ಎಸ್ ಎಸ್ ಕಾರ್ಯಕರ್ತರನ್ನು ಚಾಮರಾಜನಗರದಲ್ಲಿ ಬಂಧಿಸಲಾಗಿದೆ.
ಚಾಮರಾಜನಗರದ ಪ್ರಮುಖ ವೃತ್ತಗಳಲ್ಲಿ ಪಕ್ಷದ ನಾಯಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಚಾಮರಾಜೇಶ್ವರ ದೇವಾಲಯದ ಮುಂಭಾಗ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂದಿಸಿದರು.

ನಗರದ ಪ್ರಮುಖ ವೃತ್ತಗಳಲ್ಲಿ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿ ಧಿಕ್ಕಾರ ಕೂಗಿದ ಹಲವು ಕಾರ್ಯಕರ್ತರನ್ನೂ ಪೊಲೀಸರು ಬಂಧಿಸಿದರು.
ಮತ್ತೊಂದೆಡೆ ಜಿಲ್ಲಾಡಳಿತ ಭವನದಲ್ಲಿ ಹಿಂದೂ ಜಾಗೃತಿ ವೇದೆಕೆ ರಾಜ್ಯ ಸಂಚಾಲಕ ಉಲ್ಲಾಸ್ ಕಾರಂತ್ ಮಾತನಾಡಿ ಮುಸಲ್ಮಾನರೇ ಜಯಂತಿ ವಿರೋದಿಸುತ್ತಿರುವಾಗ ಅವಿವೇಕಿ ಮುಖ್ಯಮಂತ್ರಿ ಯಾಕೆ ಅರ್ಥ ಮಾಡಿಕೊಳ್ಳುತ್ತಿಲ್ಲ. ಓಟ್ ಬ್ಯಾಂಕ್ ಗೆ ಇವರನ್ನೆ ಇವರೆ ಮಾರಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಟಿಪ್ಪು ಜಯಂತಿಗೆ ಆಚರಣೆಗೆ ಅವಕಾಶ ಕಲ್ಪಿಸಬಾರದು ಎಂದು ಜಿಲ್ಲಾಧಿಕಾರಿ ಕಚೇರಿಗೆ ಮನವಿಪತ್ರ ಸಲ್ಲಿಸಲು ಕಾರ್ಯಕರ್ತರು ಮುಂದಾದರು ಆದರೆ ಜಿಲ್ಲಾಧಿಕಾರಿಯವರು ಮನವಿಪತ್ರ ಸ್ವೀಕರಿಲಸು ಮುಂದೆ ಬಾರದಿದ್ದರಿಂದ
ಕಚೇರಿಗೆ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನಿಸಿದರು.

ನಂತರ ಜಿಲ್ಲಾಧಿಕಾರಿಯವರು ಬಂದು ಪ್ರತಿಭಟನಕಾರರ ಮನವಿ ಪತ್ರ ಸ್ವೀಕರಿಸಿ ರಾಷ್ಟ್ರಪತಿಗೆ ಕಳುಹಿಸಿಕೊಡಲಾಗುವುದು ಎಂದು ಹೇಳಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications