Get Updates
Get notified of breaking news, exclusive insights, and must-see stories!

Ashadha Friday: ಚಾಮರಾಜೇಶ್ವರನಿಗೆ ಮಹಿಳೆಯರೇ ನಿಂಬೆಹಣ್ಣಿನ ಆರತಿ ಬೆಳಗುವುದೇಕೆ ಗೊತ್ತಾ?

ಚಾಮರಾಜನಗರ, ಜುಲೈ, 12: ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ಐತಿಹಾಸಿಕ ದೇವಾಲಯವಾದ ಚಾಮರಾಜನಗರದ ಚಾಮರಾಜೇಶ್ವರ ದೇಗುಲದಲ್ಲಿ ಚಾಮುಂಡೇಶ್ವರಿ ದೇವಿಗೆ ಸಹಸ್ರಾರು ಮಹಿಳೆಯರು ನಿಂಬೆಹಣ್ಣಿನ ಆರತಿ ಬೆಳಗಿದರು.

ಅಷಾಢ ಶುಕ್ರವಾರದಂದು ನಿಂಬೆಹಣ್ಣಿನ ಆರತಿ ಬೆಳಗಿದರೇ ಇಷ್ಟಾರ್ಥ ಸಿದ್ಧಿ, ಕಂಕಣ ಭಾಗ್ಯ ಕೂಡಿ ಬರಲಿದೆ ಎಂಬ ನಂಬಿಕೆ ಹಿನ್ನೆಲೆ ಸಹಸ್ರಾರು ಮಹಿಳೆಯರು, ಯುವತಿಯರು ನಿಂಬೆಹಣ್ಣಿನ‌ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು.

Ashadha Friday 2024 Celebration in Chamarajeshwara temple

ಈಶ್ವರ ಅಭಿಷೇಕ ಪ್ರಿಯನಾದರೆ, ವಿಷ್ಣು ಅಲಂಕಾರ ಪ್ರಿಯ. ಆದೇ ರೀತಿ ಚಾಮುಂಡೇಶ್ವರಿ ದೇವಿ ಸ್ತೋತ್ರ ಪ್ರಿಯಳಾಗಿದ್ದಾಳೆ. ಆಷಾಢ ಮಾಸದಲ್ಲಿ ದೇವಿಯನ್ನು ಸ್ಮರಿಸಿ ಸ್ತೋತ್ರ ಹೇಳಿದರೆ ದೇವಿ ನಮ್ಮೆಲ್ಲಾ ಕಷ್ಟಗಳನ್ನು ದೂರ ಮಾಡುತ್ತಾಳೆ ಎಂಬ ನಂಬಿಕೆಯಿದೆ. ಈ ಹಿನ್ನೆಲೆ ಚಾಮುಂಡೇಶ್ವರಿಗೆ ಮಹಿಳೆಯರು ಇಷ್ಟಾರ್ಥ ಈಡೇರಲಿ ಎಂದು ನಿಂಬೆಹಣ್ಣಿನ ಆರತಿ ಮಾಡುತ್ತಾರೆ.

ಇನ್ನೂ ಕೆಲವರು ಸೇಬು, ನಿಂಬೆ, ಕಿತ್ತಲೆ ಸೇರಿದಂತೆ ವಿವಿಧ ಬಗೆಯ ಹಣ್ಣಿನ ಹಾರ ತಯಾರಿಸಿ ದೇವರಿಗೆ ಅರ್ಪಿಸುತ್ತಾರೆ. ನಿಂಬೆಹಣ್ಣಿಗೆ ಆಕರ್ಷಣಾ ಶಕ್ತಿ ಹೆಚ್ಚು. ಹೀಗಾಗಿ ನಿಂಬೆಹಣ್ಣನ್ನು ದೇವತಾ ಪಾದಕ್ಕೆ ಹಿಂಡಿ ಅದರ ಸಿಪ್ಪೆಯಿಂದ ದೀಪ ತಯಾರಿಸಿ, ಅದರಿಂದ ಆರತಿ ಮಾಡಿದರೆ ಸಕಲ ಇಷ್ಟಾರ್ಥಗಳು ಸಿದ್ಧಿಸುತ್ತವೆ ಎಂಬ ನಂಬಿಕೆ ತಲೆ ತಲಾಂತರದಿಂದ ನಡೆದುಕೊಂಡು ಬಂದಿದೆ.

ಆಷಾಢ ಶುಕ್ರವಾರವಾದ ಇಂದು ಚಾಮುಂಡೇಶ್ವರಿ ದೇಗುಲಕ್ಕೆ ಭಕ್ತರ ದಂಡೇ ಹರಿದು ಬಂದಿತ್ತು. ದೇವಾಲಯದ ಅಂಗಳದ ತುಂಬಾ ಮಹಿಳೆಯರು ನಿಂಬೆ ಹಣ್ಣಿನಿಂದ ದೀಪ ತಯಾರಿಸಿ ದೇವಿಗೆ ಆರತಿ ಬೆಳಗುತ್ತಿದ್ದ ದೃಶ್ಯ ಕಣ್ಮನ ಸೆಳೆಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+