ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೂಳಿಪುರದಲ್ಲಿ ನ್ಯಾಯಾಲಯದಿಂದ ನೋಟೀಸ್ ಬಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಅಕ್ಟೋಬರ್.30:ಆಟೋ ಚಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕಿನ ಗೂಳಿಪುರ ಗ್ರಾಮದಲ್ಲಿ ನಡೆದಿದ್ದು, ಆತ್ಮಹತ್ಯೆಗೆ ನ್ಯಾಯಾಲಯದಿಂದ ನೋಟೀಸ್ ಬಂದಿದ್ದೇ ಕಾರಣ ಎನ್ನಲಾಗಿದೆ.

ಗೂಳಿಪುರ ಗ್ರಾಮದ ನಿವಾಸಿ, ಆಟೋ ಚಾಲಕ ಮಹೇಶ್ ಅಲಿಯಾಸ್ ಬೆಳ್ಳಪ್ಪ(26) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತ ಕಳೆದ ಒಂದೂವರೆ ವರ್ಷಗಳ ಹಿಂದೆ ಹುರಳಿನಂಜನಪುರ ಬಳಿ ಮಾಡಿದ್ದ ಅಪಘಾತಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟೀಸ್ ಬಂದಿತ್ತು.

ಕುಂದಾಪುರದಲ್ಲಿ ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆಗೆ ಶರಣು: ಸಾವಿಗೆ ಕಾರಣ ಉಗ್ರ ಸಂಘಟನೆ?ಕುಂದಾಪುರದಲ್ಲಿ ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆಗೆ ಶರಣು: ಸಾವಿಗೆ ಕಾರಣ ಉಗ್ರ ಸಂಘಟನೆ?

ಇದನ್ನು ನೋಡಿದ ಬಳಿಕ ಭಯಗೊಂಡಿದ್ದನಲ್ಲದೆ, ತನ್ನನ್ನು ಬಂಧಿಸಿ ಜೈಲಿಗೆ ಹಾಕಿಬಿಡುತ್ತಾರೆ ಎಂದೆಲ್ಲ ಚಿಂತಿಸುತ್ತಿದ್ದನಂತೆ. ಈ ನಡುವೆ ಭಾನುವಾರ ರಾತ್ರಿ ಊಟ ಮಾಡಿದ ಬಳಿಕ ಮನೆಯಿಂದ ಹೊರಗೆ ಹೋದವನು ಗ್ರಾಮದ ಹೊರವಲಯದಲ್ಲಿರುವ ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Auto driver committed suicide for fearing about court notice

ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಬಡ್ಡಿ ತರಬೇತುದಾರ ಆತ್ಮಹತ್ಯೆಅತ್ಯಾಚಾರ ಆರೋಪ ಎದುರಿಸುತ್ತಿದ್ದ ಕಬಡ್ಡಿ ತರಬೇತುದಾರ ಆತ್ಮಹತ್ಯೆ

ಬೆಳಗ್ಗೆ ಎದ್ದು ನೋಡಿದಾಗ ಆತ ಇರಲಿಲ್ಲ. ಹುಡುಕಾಟ ನಡೆಸಿದ ವೇಳೆ ಗ್ರಾಮದ ಹೊರ ವಲಯದ ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಚಾಮರಾಜನಗರ ತಾಲೂಕಿನ ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Auto driver committed suicide for fearing about court notice. Incident took place at Gulipura village in Chamarajnagar District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X