ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರ: ಕೊರೊನಾ ವೈರಸ್ ಗೆ ಆಯುಷ್ ವೈದ್ಯಾಧಿಕಾರಿ ಸಾವು

|
Google Oneindia Kannada News

ಚಾಮರಾಜನಗರ, ಆಗಸ್ಟ್ 02: ಚಾಮರಾಜನಗರ ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ರಾಚಯ್ಯ ಅವರು ಕೋವಿಡ್-19 ಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ನಂತರ ಜುಲೈ 26 ರಿಂದ ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಡಾ.ರಾಚಯ್ಯ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೈಸೂರಿನ ಉದಯಗಿರಿ ನಿವಾಸಿಯಾಗಿದ್ದ ರಾಚಯ್ಯ ಅವರು, ಕಳೆದ 22 ವರ್ಷಗಳಿಂದ ಚಾಮರಾಜನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜುಲೈ 31 ರಂದು ಇವರು ನಿವೃತ್ತರಾಗಿದ್ದರೂ ಸಹ ಆಸ್ಪತ್ರೆಯಲ್ಲಿ ಇದ್ದುದ್ದರಿಂದ ಇನ್ನು ಅಧಿಕಾರಿ ಹಸ್ತಾಂತರ ಮಾಡಿರಲಿಲ್ಲ. ಅಷ್ಟರೊಳಗೆ ಕೊರೊನಾ ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ.

 Chamarajanagar: Ayush Physician Died Of Coronavirus

ಗುಂಡ್ಲುಪೇಟೆ ಪಟ್ಟಣದಲ್ಲೇ ಪ್ರತ್ಯಕ್ಷವಾದ ಚಿರತೆ ಗುಂಡ್ಲುಪೇಟೆ ಪಟ್ಟಣದಲ್ಲೇ ಪ್ರತ್ಯಕ್ಷವಾದ ಚಿರತೆ

ಆಯುಷ್ ವೈದ್ಯಾಧಿಕಾರಿ ಡಾ.ರಾಚಯ್ಯ ಅವರಿಗೆ ಮಧುಮೇಹ ಹಾಗೂ ರಕ್ತದೊತ್ತಡ ಇತ್ತು ಎಂದು ಹೇಳಲಾಗಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಆಯುಷ್ ಇಲಾಖೆಯ ಇಬ್ಬರು ಸಿಬ್ಬಂದಿಯ ಕೊರೊನಾ ವರದಿ ನೆಗೆಟಿವ್ ಬಂದಿದೆ.

English summary
Chamarajanagara District Ayush Medical Officer Dr Rachiah is Died of Covid-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X