ಚಾಮರಾಜನಗರ: ಮಗಳ ಮದುವೆ ಕಾರ್ಯದಲ್ಲಿ ಬ್ಯುಸಿಯಾದ ಶ್ರೀರಾಮುಲು
ಚಾಮರಾಜನಗರ, ನವೆಂಬರ್, 21: ಮಾಜಿ ಸಚಿವ ಬಿ.ಶ್ರೀರಾಮುಲು ತಮ್ಮ ಎರಡನೇ ಪುತ್ರಿಯ ಮದುವೆಯ ಕಾರ್ಯಕ್ಕೆ ಓಡಾಟ ನಡೆಸುತ್ತಿದ್ದು, ಚಾಮರಾಜನಗರದಲ್ಲಿ ಮಂಗಳವಾರ (ನವೆಂಬರ್ 21) ಲಗ್ನ ಪತ್ರಿಕೆಗಳನ್ನು ಹಂಚಿದರು.
ಈ ಹಿಂದೆ ಆರೋಗ್ಯ ಸಚಿವರಾಗಿದ್ದ ವೇಳೆ ಮೊದಲ ಪುತ್ರಿಯ ವಿವಾಹ ನಡೆಸಿದ್ದ ರಾಮುಲು ಈಗ ಎರಡನೇ ಮಗಳ ಮದುವೆ ಮಾಡುತ್ತಿದ್ದು, ಚಾಮರಾಜನಗರದ ಬಿಜೆಪಿ ಕಚೇರಿಗೆ ಬಂದು ಎಲ್ಲಾ ಮುಖಂಡರು, ಅಭಿಮಾನಿಗಳು, ಸಮುದಾಯದವರಿಗೆ ಆಮಂತ್ರಣ ಪತ್ರಿಕೆಗಳನ್ನು ಕೊಟ್ಟು ವಿವಾಹಕ್ಕೆ ಆಹ್ವಾನಿಸಿದ್ದಾರೆ.

ಇನ್ನು, ಮಾಜಿ ಸಚಿವ ರಾಮುಲು ಅವರನ್ನು ಬರಮಾಡಿಕೊಂಡ ಬಿಜೆಪಿ ಮುಖಂಡರು ಅವರಿಗೆ ಸನ್ಮಾನಿಸಿ, ಲಗ್ನ ಪತ್ರಿಕೆಗಳನ್ನು ಪಡೆದಿದ್ದಾರೆ. ಡಿಸೆಂಬರ್ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ನಡೆಯಲಿದೆ.
ಡಿ.ಕೆ.ಶಿವಕುಮಾರ್ ವಿರುದ್ಧ HDK ವಾಗ್ದಾಳಿ
ಟೆಂಟಲ್ಲಿ ಬ್ಲೂ ಫಿಲಂ ತೋರಿಸಿಕೊಂಡು ಜೀವನ ಮಾಡಿಕೊಂಡು ಬಂದವರು ಅವರು, ಆ ಮನಸ್ಥಿತಿಯಲ್ಲಿ ಅವನಿಗೆ ಇನ್ನೇನು ಬರುತ್ತದೆ. ಆತರ ಪೋಸ್ಟರ್ ಪ್ರಿಪೇರ್ ಮಾಡಿಸೋದು ಬಿಟ್ಟು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಪರೋಕ್ಷವಾಗಿ ಏಕವಚನದಲ್ಲಿ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಇತ್ತೀಚೆಗಷ್ಟೇ ವಾಗ್ದಾಳಿ ನಡೆಸಿದ್ದರು.
ಇನ್ನು ನಾನು ಆ ಜೀವನ ಮಾಡಿಕೊಂಡು ಬಂದಿಲ್ಲ. ಅದನ್ನೇ ಮುಂದುವರೆಸುತ್ತಿದ್ದಾರೆ. ಅವರು ಬಂದಿರುವುದೇ ಆ ಸಂಸ್ಕೃತಿಯಲ್ಲಿ. ಅಂತಹವರನ್ನ ಈ ರಾಜ್ಯದ ಜನ ಆಯ್ಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ಸಿಗು ಇಂದು ಅಂತವರಿಗೆ ಅಧಿಕಾರ ನೀಡಿದ್ದಾರೆ. ಅವರ ಜೀವನ, ಸಂಸ್ಕೃತಿ, ಬದುಕೇ ಅಷ್ಟು ಏನು ಮಾಡೋದು ಎಂದು ಕಿಡಿಕಾರಿದ್ದರು.
ಬಿಜೆಪಿಯವರು ದೇಶವನ್ನು ನಾಶ ಮಾಡಿದ್ದಾರೆ
ಬಿಜೆಪಿಯವರು ಕಳೆದ ಹತ್ತು ವರ್ಷಗಳಲ್ಲಿ ದೇಶವನ್ನು ನಾಶ ಮಾಡಿದ್ದಾರೆ. ಆರ್ಥಿಕವಾಗಿ ದೇಶ ದಿವಾಳಿಯಾಗಿದ್ದು, ₹165 ಲಕ್ಷ ಕೋಟಿ ಸಾಲ ಇದೆ ಎಂದು ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯಲ್ಲಿ ಟೀಕಿಸಿದ್ದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ವ್ಯಕ್ತಿಯನ್ನು ದೇವರೆಂದು ಪ್ರತಿಬಿಂಬಿಸುವುದು, ಅವರನ್ನೇ ವಿಶ್ವಗುರು ಎಂದು ಹೇಳುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಳ್ಳೆಯದಲ್ಲ ಎಂದರು. ಇನ್ನು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಮತ್ತು ನರೇಂದ್ರ ಮೋದಿ ಅವರು ಹತ್ತು ವರ್ಷ ಏನು ಮಾಡಿದ್ದಾರೆ ಎಂಬ ಬಗ್ಗೆ ಚರ್ಚೆ ನಡೆಸಬೇಕು. ಇನ್ನು ಆರು ತಿಂಗಳು ರಾಜ್ಯದ ವಿಷಯ ಮಾತನಾಡಬಾರದು ಎಂದು ಹೇಳಿದ್ದರು.
ದೇಶದ ಹಿತಾಸಕ್ತಿ ಕಾಪಾಡುವ ಜೊತೆಗೆ, ಪ್ರಗತಿಯತ್ತ ಮುನ್ನಡೆಸಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಏನು ಮಾಡಿದೆ ಎಂಬುದನ್ನು ಪ್ರಶ್ನೆ ಮಾಡುವ ಸಮಯ ಬಂದಿದೆ ಎಂದು ಎಂದರು. ಇನ್ನು ಪ್ರತಿ ವರ್ಷ ಒಂದಿಲ್ಲೊಂದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತವೆ. ಮೋದಿ ಅವರು ಚುನಾವಣೆ ಭಾಷಣ ಮಾಡಿ, ಕಾಂಗ್ರೆಸ್ಗೆ ಬೈದಿದ್ದು ಬಿಟ್ಟರೆ ಹತ್ತು ವರ್ಷಗಳಲ್ಲಿ ಏನೂ ಮಾಡಿಲ್ಲ ಎಂದು ಟೀಕಿಸಿದ್ದರು.
ಸ್ಮಾರ್ಟ್ ಸಿಟಿ, ಬುಲೆಟ್ ರೈಲು, ರೈತರ ಆದಾಯ ದ್ವಿಗುಣಗೊಳಿಸುವುದು, 2 ಕೋಟಿ ಉದ್ಯೋಗ ಸೃಷ್ಟಿ, ಮೇಕ್ ಇನ್ ಇಂಡಿಯಾ ಸೇರಿದಂತೆ ಹಲವು ಯೋಜನೆಗಳ ಮೂಲಕ ಸುಳ್ಳು ಭರವಸೆ ನೀಡಿದ್ದರು. ಮಧ್ಯಪ್ರದೇಶದಲ್ಲಿ ವ್ಯಾಪಂ ಹಗರಣದ ಸಾಕ್ಷಿಗಳಾಗಿದ್ದ 44 ಜನರನ್ನು ಕೊಲೆ ಮಾಡಲಾಗಿದೆ. ಅವುಗಳ ಬಗ್ಗೆ ಮಾತನಾಡುತ್ತಿಲ್ಲ. ನೆಹರೂ, ಇಂದಿರಾಗಾಂಧಿ, ಮನಮೋಹನ್ಸಿಂಗ್ ಅವರಿಗೆ ಬೈಯುವುದೇ ಕೆಲಸವಾಗಿದೆ ಎಂದು ಹೇಳಿದ್ದರು.
ವಿಜಯೇಂದ್ರ ಅವರ ಹಸ್ತಕ್ಷೇಪ, ಭ್ರಷ್ಟಾಚಾರದ ಕಾರಣಕ್ಕೆ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲಾಯಿತು ಎಂದು ಬಿಜೆಪಿಯವರೇ ಹೇಳಿದ್ದರು. ಈಗ ಅವರನ್ನೇ ಏಕೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ? ಎಂದು ಪ್ರಶ್ನಿಸಿದರು. ಯತೀಂದ್ರ ಅವರ ವಿಡಿಯೊದಲ್ಲಿ ವರ್ಗಾವಣೆ ಬಗ್ಗೆ ಪ್ರಸ್ತಾಪವಾಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ವಿಜಯೇಂದ್ರ ಬಗ್ಗೆ ಬಿಜೆಪಿಯವರು ಈ ಹಿಂದೆ ಏನು ಹೇಳಿದ್ದರು ಎಂಬುದು ಅವರಿಗೆ ನೆನಪಿಲ್ಲ ಎಂದಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications