ಪುರಾಣಿಪೋಡಿನ ವಸತಿ ಶಾಲೆ ಮಕ್ಕಳ್ಳೊಂದಿಗೆ ಆಟ ಆಡಿದ ಮರಿ ಆನೆ; ವಿಡಿಯೋ ವೈರಲ್
ಚಾಮರಾಜನಗರ: ತಾಯಿಯಿಂದ ತಪ್ಪಿಸಿಕೊಂಡ ಆನೆಯೊಂದು ಯಳಂದೂರು ತಾಲೂಕಿನ ಪುರಾಣಿಪೋಡಿನ ವಸತಿ ಶಾಲೆಗೆ ಬಂದು ಮಕ್ಕಳೊಟ್ಟಿಗೆ ಆಟ ಆಡಿದ್ದು ಗಮನ ಸೆಳೆದಿದೆ.
ಬಿಳಿಗಿರಿರಂಗನಬೆಟ್ಟ ಅರಣ್ಯ ಪ್ರದೇಶದಲ್ಲಿ ತಾಯಿಯಿಂದ ಬೇರ್ಪಟ್ಟ ಗಂಡು ಮರಿ ಆನೆಯೊಂದು ದಾರಿತಪ್ಪಿ ಪುರಾಣಿಪೋಡಿನ ವಸತಿ ಶಾಲೆಗೆ ಬಂದಿದೆ. ಆನೆ ಕಂಡಂದ್ದೇ ತಡ ಖುಷಿಗೊಂಡ ಕಾಡಿನ ಮಕ್ಕಳು ಆನೆಯೊಟ್ಟಿಗೆ ಆಡಿ ನಲಿದಾಡಿದ್ದಾರೆ. ಮನುಷ್ಯರನ್ನೇ ಕಾಣದ ಮರಿ ಆನೆ ಹೊಸ ಸ್ನೇಹಿತರೊಟ್ಟಿಗೆ ನಲಿದಿದ್ದು, ಮಕ್ಕಳು ಕೊಟ್ಟ ಹಾಲನ್ನು ಕುಡಿದು ಅವರೊಂದಿಗೆ ಆಟ ಆಡಿಗೆ. ಬಾಳೆಹಣ್ಣು ತಿನ್ನಿಸಿ 'ಆನೆ ಬಂತೊಂದಾನೆ, ಯಾವೂರ ಆನೆ' ಎಂದು ಹಾಡಿ ಮಕ್ಕಳು ಕುಣಿದು ಕುಪ್ಪಳಿಸಿರುವುದು ವೀಡಿಯೋದಲ್ಲಿ ಸೆರೆ ಆಗಿದೆ.
ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರಿಂದ ಯಳಂದೂರು ವಲಯದ ಸಿಬ್ಬಂದಿ ಬಂದು ಗಸ್ತು ತಿರುಗಿ ತಾಯಿ ಆನೆ ಘೀಳಿಡುತ್ತಿದ್ದನ್ನು ಗಮನಿಸಿ ಈರಣ್ಣ ಕಟ್ಟೆ ಪೋಡಿನ ಬಳಿ ಮರಿ ಆನೆ ತಾಯಿಯನ್ನು ಸೇರುವಂತೆ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮನುಷ್ಯ-ಪ್ರಾಣಿ ಸಂಘರ್ಷದ ನಡುವೆ, ಬಿಳಿಗಿರಿರಂಗನ ಬೆಟ್ಟ ಸಮೀಪದ ಚಾಮರಾಜನಗರದ ಪುರಾಣಿಪೋಡು ಗ್ರಾಮದಲ್ಲಿ ಆರು ತಿಂಗಳ ಗಂಡು ಮರಿ ಆನೆಯೊಂದು ಬುಡಕಟ್ಟು ಜನಾಂಗದ ಶಾಲಾ ಮಕ್ಕಳು ಮತ್ತು ಶಿಕ್ಷಕರೊಂದಿಗೆ ಸ್ನೇಹ ಬೆಳೆಸಿದ ಘಟನೆ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಆನೆ ಮರಿ ತನ್ನ ತಾಯಿಯಿಂದ ಬೇರ್ಪಟ್ಟು ಮಾನವ ವಾಸಕ್ಕೆ ಹೊಂದಿಕೊಂಡಿರಬಹುದು. ಕಾಡು ಪ್ರಾಣಿಯು ಮನುಷ್ಯರೊಂದಿಗೆ ಸ್ನೇಹ ಬೆಳೆಸುವುದು ಹಾಗೂ ಅವರಿಂದ ಕಾಳಜಿ ಬಯಸುವುದು ತಮಾಷೆ ವಿಷಯವಲ್ಲ.
ಶಾಲೆಯ ಮಕ್ಕಳೊಂದಿಗೆ ಆತವಾಡಿದ ಮರಿ ಆನೆ
ಯಳಂದೂರು ತಾಲೂಕಿನ ಬುಡಕಟ್ಟು ಜನಾಂಗದವರ ವ್ಯಾಪ್ತಿಯ ಗ್ರಾಮವೊಂದರ ಶಾಲಾ ಪ್ರದೇಶದಲ್ಲಿ ಈ ಆನೆಯ ಮರಿ ಓಡಾಡುತ್ತಿರುವುದು ಪತ್ತೆ ಆಗಿತ್ತು. ಇದರೊಂದಿಗೆ ಮಕ್ಕಳು ಮತ್ತು ವಯಸ್ಕರು ಆಟವಾಡುತ್ತಾ ಅದಕ್ಕೆ ತಿಂಡಿ ತಿನಿಸುಗಳನ್ನು ತಿನ್ನಿಸುತ್ತಿರುವ ದೃಶ್ಯ ಕಂಡುಬಂದಿದೆ. ಇದಕ್ಕೆ ಬಾಳೆಹಣ್ಣು ಮತ್ತು ಇತರ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿತ್ತು. ಆನೆ ಮರಿ ತುಂಬಾ ಸಂತೋಷವಾಗಿದ್ದರೂ, ಅಂತಹ ಸಾಮೀಪ್ಯ ಅಪರೂಪ ಎಂದು ಚಾಮರಾಜನಗರದ ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದರು. ತನ್ನ ತಾಯಿ ಆನೆಯೊಂದಿಗೆ ಸೇರಿಸಲು ಪ್ರಯತ್ನಿಸುತ್ತಿರುವ ಅರಣ್ಯಾಧಿಕಾರಿಗಳು ಆನೆಯ ಮರಿಯನ್ನು ಕರೆದೊಯ್ದಿದ್ದಾರೆ.
ಮಲೆನಾಡು ಭಾಗಗಳಲ್ಲಿ ಆನೆಗಳ ಹಾವಳಿ
ಇನ್ನು ಇತ್ತೀಚೆಗೆ ಮಲೆನಾಡಿನ ಭಾಗಗಳಲ್ಲಿ ಆನೆಗಳು ಗೀಳಿಗಿಡುವುದನ್ನು ನೋಡಿದ್ದೇವೆ. ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡಿ ರಂಪಾಟಕ್ಕಿಡುತ್ತಿದ್ದವು. ಕೆಲವು ಕಡೆಗಳಲ್ಲಿ ದಾಳಿ ಮಾಡಿ ಮನುಷ್ಯರ ಜೀವವನ್ನೇ ಬಲಿ ಪಡೆದುಕೊಂಡಿವೆ. ಇದಕ್ಕೆ ಬೇಸತ್ತ ಜನರು ಅರಣ್ಯ ಇಲಾಖೆಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದನ್ನು ನೋಡಿದ್ದೇವೆ. ಆನೆಗಳ ದಾಳಿಯಿಂದ ಅರಣ್ಯ ಇಲಾಖೆ ಹಾಗೂ ಜಮೀನುದಾರರ ನಡುವೆ ಸಂಘರ್ಷಗಳು ಸಾಮಾನ್ಯ ಆಗಿಬಿಟ್ಟಿದೆ. ಇದರಲ್ಲಿಯೂ ಪುಟ್ಟ ಮರಿ ಆನೆಯೊಂದು ದಾರಿ ತಪ್ಪಿ ಚಾಮರಾಜರಾನಗರದ ಶಾಲೆಯೊಂದಕ್ಕೆ ಆಗಮಿಸಿರುವುದು ವಿಶೇಷ ಆಗಿದೆ. ಆ ಮರಿ ಆನೆ ಶಾಲೆಗೆ ಸುಮ್ಮನೆ ಭೇಟಿ ಕೊಟ್ಟಿರಲಿಲ್ಲ, ಬದಲಾಗಿ ಮಕ್ಕಳೊಂದಿಗೆ ಆಟ ಆಡಿ ನಲಿದಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್ ಆಗಿದೆ. ಈ ಮರಿ ಆನೆಯೊಂದಿ ಮಕ್ಕಳು ಕೂಡ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲದೇ ತಾವು ತಂದಿದ್ದ ತಿಂಡಿಗಳನ್ನು ಮರಿ ಗಜರಾಜನಿಗೆ ಕೊಟ್ಟು ಆನಂದಿಸಿರುವುದು ಗಮನ ಸೆಳೆದಿದೆ.

ಹೀಗೊಂದು ಅಪರೂಪದ ದೃಶ್ಯ ಕಂಡು ಬಂದಿದ್ದು, ಯಳಂದೂರು ತಾಲೂಕಿನ ಪುರಾಣಿಪೋಡಿನ ವಸತಿ ಶಾಲೆಯಲ್ಲಿ. ಗಜರಾಜ ಮಕ್ಕಳ ಜೊತೆಗೆ ದಿನವಿಡೀ ಆಟವಾಡಿದ್ದು ಭಾರಿ ಸದ್ದು ಮಾಡುತ್ತಿದೆ. ಈ ಅಪರೂಪದ ದೃಶ್ಯಕ್ಕೆ ಮನಸೋತ ನೆಟ್ಟಿಗರು ಸಂತೋಷವನ್ನು ಹೊರಹಾಕುತ್ತಲೇ ಇದ್ದಾರೆ. ಕೊನೆಗೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮರಿ ಆನೆಯನ್ನು ತಾಯಿ ಬಳಿ ಸೇರಿಸುವಲ್ಲಿ ಯಶಸ್ವಿ ಆಗಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications