ಕನಕಗಿರಿಯ ಬಾಹುಬಲಿಗೆ ಮಹಾಮಸ್ತಾಭಿಷೇಕ

ಚಾಮರಾಜನಗರ, ಫೆಬ್ರವರಿ 2: ಚಾಮರಾಜನಗರ ಜಿಲ್ಲೆಯ ಕನಕಗಿರಿ ಅತಿಶಯ ಸಿದ್ದ ಕ್ಷೇತ್ರದಲ್ಲಿ ನೂತನ ಬಾಹುಬಲಿಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ, 1108 ಕಳಸದಿಂದ ಮಹಾಮಸ್ತಾಭಿಷೇಕ ಮಾಡುವ ಮೂಲಕ ಜೈನ ಸಮುದಾಯದವರು ಭಕ್ತಿಭಾವ ಮೆರೆದರು.

ಮಲೆಯೂರು ಗ್ರಾಮದ ಬಳಿಯಿರುವ ಜೈನ ಕಾಶಿ ಎಂದೇ ಖ್ಯಾತಿ ಪಡೆದ ಕನಕಗಿರಿ ಅತಿಶಯ ಸಿದ್ದ ಕ್ಷೇತ್ರದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಭಕ್ತರು ಬಾಹುಬಲಿಗೆ ಘೋಷಣೆ ಕೂಗುತ್ತಾ ಹರ್ಷ ವ್ಯಕ್ತಪಡಿಸಿದರು. ನೂತನವಾಗಿ 18 ಅಡಿ ಎತ್ತರದ ಬಾಹುಬಲಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವುದರೊಂದಿಗೆ ಮಹಾಮಸ್ತಾಭಿಷೇಕ ನೆರವೇರಿಸಿ, ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಲಾಯಿತು.[ಗೊಮ್ಮಟಗಿರಿಯ ಗೊಮ್ಮಟೇಶ್ವರನಿಗೆ ಮಹಾಮಸ್ತಕಾಭಿಷೇಕ]

Bahubali mahamastakabhisheka in kanakagiri

ಬಳಿಕ ಬಾಹುಬಲಿ ಮೂರ್ತಿಗೆ 1108 ತುಂಬು ಕಳಸದ ನೀರು, ಹಾಲು, ಚಂದನ, ಅರಿಶಿನ- ಕುಂಕುಮ ಹೀಗೆ ಹಲವು ದ್ರವ್ಯಗಳಿಂದ ಮಹಾಮಸ್ತಕಾಭಿಷೇಕ ಮಾಡಲಾಯಿತು. ಕನಕಗಿರಿ ಸಿದ್ದಕ್ಷೇತ್ರದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಮಹಾಮಸ್ತಾಭಿಷೇಕದಲ್ಲಿ ಹಲವು ಗಣ್ಯರು, ರಾಜ್ಯದ ವಿವಿಧ ಕಡೆಗಳಿಂದ ಬಂದಿದ್ದ ಸಾವಿರಾರು ಭಕ್ತರು ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+