ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ: ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

|
Google Oneindia Kannada News

ಚಾಮರಾಜನಗರ, ಜುಲೈ 23: ಚಾಮರಾಜನಗರದ ಗುಂಡ್ಲುಪೇಟೆ ಸಮೀಪದ ಕಬ್ಬೆಕಟ್ಟೆ ಶನೇಶ್ವರ ದೇವಸ್ಥಾನದಲ್ಲಿ ಕಳೆದ ತಿಂಗಳು, ದಲಿತ ಯುವಕನ ಮೇಲೆ ಹಲ್ಲೆ ಹಾಗೂ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳಿಗೆ, ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

 ದಲಿತನ ಬೆತ್ತಲೆ ಮೆರವಣಿಗೆ ಪ್ರಕರಣ: ಇಬ್ಬರು ಪೊಲೀಸರ ಅಮಾನತು ದಲಿತನ ಬೆತ್ತಲೆ ಮೆರವಣಿಗೆ ಪ್ರಕರಣ: ಇಬ್ಬರು ಪೊಲೀಸರ ಅಮಾನತು

ಆರೋಪಿಗಳಾದ ದೇವಸ್ಥಾನದ ಅರ್ಚಕ ಶಿವಪ್ಪ, ಬಸವರಾಜು, ಮಾಣಿಕ್ಯ, ಸತೀಶ್, ಚನ್ನಕೇಶವಮೂರ್ತಿ ಹಾಗೂ ಪುಟ್ಟಸ್ವಾಮಿ ಅವರು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಜಿ.ಬಸವರಾಜ ಅವರು ಆದೇಶ ಪ್ರಕಟಿಸಿದರು.

bail for accused in Dalit youth harassment case in Chamarajanagar

ಇದಕ್ಕೂ ಮುನ್ನ, ಆರೋಪಿಗಳ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಹಾಗಾಗಿ, ಜಾಮೀನು ಮಂಜೂರು ಮಾಡಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದು, ಆರೋಪಿಗಳು ತಲಾ 1 ಲಕ್ಷ ಮೊತ್ತದ ಬಾಂಡ್ ಹಾಗೂ ಅದಕ್ಕೆ ಇಬ್ಬರ ಭದ್ರತೆ ನೀಡಬೇಕು. ಪ್ರತಿ ದಿನ ಠಾಣೆಗೆ ಹೋಗಿ ಸಹಿ ಹಾಕಬೇಕು ಮತ್ತು ಸಾಕ್ಷ್ಯಗಳ ನಾಶಕ್ಕೆ ಯತ್ನಿಸಬಾರದು ಎಂದು ಆದೇಶಿಸಲಾಗಿದೆ.

English summary
The District Principal and the Sessions Court granted conditional bail for the 6 accused of Dalit man harassment case which happened last month at Chamarajanagar's Gundlupet talluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X