ಬಂಡೀಪುರದಲ್ಲಿನ್ನೂ ಆರದ ಬೆಂಕಿ : ಅಪಾರ ಅರಣ್ಯ ಸಂಪತ್ತು ನಾಶ
ಸುಮಾರು 500 ಎಕರೆ ಅರಣ್ಯ ಪ್ರದೇಶ ನಾಶ; ರಾಷ್ಟ್ರೀಯ ಉದ್ಯಾನವನದ ಅಮೂಲ್ಯ ಸಸ್ಯ ಹಾಗೂ ಪ್ರಾಣಿ ಸಂಕುಲ ಭಸ್ಮ
ಚಾಮರಾಜ ನಗರ, ಫೆಬ್ರವರಿ 20: ದುಷ್ಕರ್ಮಿಗಳ ಕುಕೃತ್ಯದಿಂದಾಗಿ ಶನಿವಾರ ಹೊತ್ತಿ ಉರಿಯುತ್ತಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಬೆಂಕಿ ಇನ್ನೂ ಶಮನಗೊಂಡಿಲ್ಲ. ಅಗ್ನಿ ನಂದಿಸಲು ಸತತವಾಗಿ ಪ್ರಯತ್ನಿಸಲಾಗಿದ್ದರೂ ಜೋರಾಗಿ ಗಾಳಿ ಬೀಸುತ್ತಿರುವ ಕಾರಣ ಬೆಂಕಿ ಸಂಪೂರ್ಣ ಆರಿಲ್ಲ ಎನ್ನಲಾಗುತ್ತಿದೆ.
ಬೆಂಕಿಯ ಕೆನ್ನಾಲಿಗೆ ಓರ್ವ ಅರಣ್ಯ ಸಿಬ್ಬಂದಿಯನ್ನು ಬಲಿ ಪಡೆದಿರುವುದಲ್ಲದೇ ಸುಮಾರು ಐನೂರು ಹೆಕ್ಟೇರ್ ನಷ್ಟು ಅರಣ್ಯ ಸಂಪತ್ತು ನಾಶವಾಗಿದೆ. ಈವರೆಗಿನ ಬೆಂಕಿಯ ಕೆನ್ನಾಲಿಗೆಗೆ ಬೀಟೆ, ತೇಗ ಸೇರಿದಂತೆ ಹಲವಾರು ಬೆಲೆಬಾಳುವ ಮರಗಳು, ಮೊಲ, ಜಿಂಕೆ, ಹಾವು ಸೇರಿದಂತೆ ಹಲವು ಸಣ್ಣಪುಟ್ಟ ಪ್ರಾಣಿಗಳು ಆಹುತಿಯಾಗಿವೆ.

ಸ್ಥಳದಲ್ಲಿ ಬೆಂಕಿ ಆರಿಸುವ ಕಾರ್ಯಾಚರಣೆ ಮುಂದುವರಿದಿದೆ.
ಮೊಳೆಯೂರು, ಎನ್.ಬೇಗೂರು, ಗುಂಡ್ರೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಅಧಿಕಾರಿಗಳೂ ಸೇರಿದಂತೆ 500ಕ್ಕೂ ಹೆಚ್ಚು ಸಿಬ್ಬಂದಿಗಳು ಬೆಂಕಿ ಆರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇವರಿಗೆ 50ಕ್ಕೂ ಹೆಚ್ಚು ಸ್ವಯಂ ಸೇವಕರು ಕೈ ಜೋಡಿಸಿದ್ದಾರೆ.
ನಾಲ್ಕು ಟ್ಯಾಂಕರ್ ಗಳ ಮೂಲಕ ನೀರು ಪೂರೈಸಲಾಗುತ್ತಿದ್ದು,
ಕಾಡ್ಗಿಚ್ಚಿನಿಂದ ಗಾಯಗೊಂಡಿದ್ದ ಮೊಳೆಯೂರು ವಲಯ ಅರಣ್ಯಾಧಿಕಾರಿ ಗಂಗಾಧರ್, ಸಿಬ್ಬಂದಿಗಳಾದ ಮಂಜು ಹಾಗೂ ಮನು ಎಂಬವರಿಗೆ ಸರಗೂರಿನ ವಿವೇಕಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications