ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಡೀಪುರಕ್ಕೆ ಬೆಂಕಿ ಇಡಲು ಕಾರಣವೇನು? ಸತ್ಯ ಬಾಯ್ಬಿಟ್ಟ ಆರೋಪಿಗಳು

|
Google Oneindia Kannada News

Recommended Video

ಬಂಡೀಪುರಕ್ಕೆ ಬೆಂಕಿ ಇಡಲು ಕಾರಣವೇನು ಗೊತ್ತಾ..? | Oneindia Kannada

ಗುಂಡ್ಲುಪೇಟೆ, ಮಾರ್ಚ್ 4: ಬಂಡೀಪುರ ರಾಷ್ಟ್ರೀಯ ಉದ್ಯಾನಕ್ಕೆ ಬೆಂಕಿ ಇಡಲು ಇದ್ದ ಅಸಲಿ ಕಾರಣವನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಹುಲಿಗಳ ಕಾಟ ಹೆಚ್ಚಾಗಿದ್ದ ಕಾರಣ ಅವುಗಳು ನಾಡಿನತ್ತ ಬರುವುದು ತಪ್ಪಿಸುವ ಉದ್ದೇಶದಿಂದ ಬಂಡೀಪುರ ಅರಣ್ಯಕ್ಕೆ ಬೆಂಕಿ ಇಟ್ಟಿದ್ದೆವು ಎಂದು ಬಂಧಿತ ಆರೋಪಿಗಳು ಹೇಳಿದ್ದಾರೆ.

ಸಹಜ ಸ್ಥಿತಿಯತ್ತ ಬಂಡೀಪುರದ ಕಾಡು;ಅಪಾಯದಿಂದ ಪಾರಾದ ಪ್ರಾಣಿಗಳುಸಹಜ ಸ್ಥಿತಿಯತ್ತ ಬಂಡೀಪುರದ ಕಾಡು;ಅಪಾಯದಿಂದ ಪಾರಾದ ಪ್ರಾಣಿಗಳು

ಬಂಡೀಪುರ ರಾಷ್ಟ್ರೀಯ ಉದ್ಯಾನಕ್ಕೆ ಬೆಂಕಿ ತಗುಲಿ 15 ಸಾವಿರ ಎಕತೆಗೂ ಹೆಚ್ಚು ಅರಣ್ಯ ನಾಶವಾಗಿತ್ತು. ಆದರೆ ಬೆಂಕಿ ಹೇಗೆ ತಗುಲಿತು ಎಂಬುದೇ ಅರಣ್ಯ ಅಧಿಕಾರಿಗಳಲ್ಲಿ ಮೂಡಿದ್ದ ಪ್ರಶ್ನೆಯಾಗಿತ್ತು. ಇದೀಗ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

Bandipur forest fire culprits reveal reason behind

ಇದಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿಯ ಹನುಮಯ್ಯ ಹಾಗೂ ಗೋಪಯ್ಯ ಹುಲಿಗಳು ನಾಡಿನತ್ತ ಬರುವುದನ್ನು ತಡೆಯುವ ಉದ್ದೇಶದಿಂದ ಬೆಂಕಿ ಹಚ್ಚಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಈಗ ಪರಿಸ್ಥಿತಿ ಹೇಗಿದೆ ಗೊತ್ತಾ? ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಈಗ ಪರಿಸ್ಥಿತಿ ಹೇಗಿದೆ ಗೊತ್ತಾ?

ಮತ್ತೋರ್ವ ಆರೋಪಿ ಕಳ್ಳೀಪುರ ಅರುಣ್‌ ಕುಮಾರ್‌ ತನ್ನ ಮೈಮೇಲೆ ಮಹದೇಶ್ವರ ಬರುತ್ತಾನೆ ಎಂದು ಅಭಿನಯ ಮಾಡಿದ್ದು, ಬೆಂಕಿ ಹಚ್ಚಿರುವ ಬಗ್ಗೆ ಬಾಯಿ ಬಿಟ್ಟಿಲ್ಲ ಎನ್ನಲಾಗಿದೆ.

English summary
After over five days of ravaging the forest, the fire at the Bandipur Tiger reserve forest finally been put out.Bandipur forest fire culprits reveal reason behind.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X