ಬಂಡೀಪುರದ ಹೆದ್ದಾರಿಯಲ್ಲಿ ರಾಜಗಾಂಭೀರ್ಯ ಮೆರೆದ ಕರಡಿ
ಚಾಮರಾಜನಗರ, ಜುಲೈ 25: ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮಧ್ಯೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹುಲಿ, ಕಾಡಾನೆಗಳ ಕ್ಯಾಟ್ ವಾಕ್ ನ ದೃಶ್ಯವನ್ನು ಈ ಮಾರ್ಗವಾಗಿ ಸಂಚರಿಸುವ ಹೆಚ್ಚಿನ ಪ್ರವಾಸಿಗರು ನೋಡಿರುತ್ತಾರೆ.
ಆದರೆ, ಇದೀಗ ಕರಡಿಯೊಂದು ಹೆದ್ದಾರಿಯಲ್ಲಿ ಏಕಾಂಗಿಯಾಗಿ ರಾಜ ಗಾಂಭೀರ್ಯದಿಂದ ನಡೆದು ಹೋದ ದೃಶ್ಯ ವೈರಲ್ ಆಗಿದ್ದು, ಅದನ್ನು ನೋಡಿದ ಕೆಲವರು ಖುಷಿ ಪಡುತ್ತಿದ್ದರೆ, ಈ ವ್ಯಾಪ್ತಿಯ ಕಾಡಂಚಿನ ಜನ ಮಾತ್ರ ಬೆಚ್ಚಿ ಬಿದ್ದಿದ್ದಾರೆ. ಏಕೆಂದರೆ ಈಗಾಗಲೇ ಬಂಡೀಪುರ ಕಾಡಂಚಿನ ಜನ ಹುಲಿ, ಕಾಡಾನೆ, ಚಿರತೆ ದಾಳಿಯಿಂದ ಬೆಚ್ಚಿ ಬಿದ್ದಿದ್ದಾರೆ. ಹೀಗಿರುವಾಗ ಕರಡಿ ಏನಾದರೂ ಅರಣ್ಯ ಬಿಟ್ಟು ನಾಡಿನತ್ತ ಬಂದರೆ ಏನಪ್ಪಾ ಮಾಡೋದು ಎಂದು ಯೋಚಿಸುತ್ತಿದ್ದಾರೆ.
ಬಂಡೀಪುರ- ಮೈಸೂರು ರಾಷ್ಟ್ರೀಯ ಹೆದ್ದಾರಿ ಅರವತ್ತೇಳರಲ್ಲಿ ಕಳೆದ ಕೆಲವು ದಿನಗಳ ಹಿಂದೆ ಭಾರಿ ಗಾತ್ರದ ಕರಡಿಯೊಂದು ರಸ್ತೆಯಲ್ಲಿ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿರುವ ದೃಶ್ಯವನ್ನು ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ತೇಲಿ ಬಿಟ್ಟಿದ್ದು ಇದೀಗ ಸಕತ್ ವೈರಲ್ ಆಗಿದೆ.

ಈಗಾಗಲೇ ಬಂಡೀಪುರ ಅಂದರೆ ಅದು ಹುಲಿಗಳ ತಾಣ ಎಂಬ ಮಾತಿದೆ. ಹುಲಿಗಳ ಆಟ, ನಡಿಗೆ ಎಲ್ಲವನ್ನೂ ಸೆರೆ ಹಿಡಿಯುವುದು ಮಾಮೂಲಿಯಾಗಿದೆ. ಆದರೆ ಕರಡಿಯ ಗಂಭೀರ ನಡಿಗೆ ಎಲ್ಲರ ಗಮನ ಸೆಳೆದಿದೆ. ಸಫಾರಿಗೆ ತೆರಳುವವರಿಗೆ ಕಾಣಿಸದ ಕರಡಿಯು ರಸ್ತೆಯಲ್ಲಿ ಕಾಣಿಸಿರುವುದು ರೋಮಾಂಚನ ಉಂಟು ಮಾಡಿದೆ.
ಒಟ್ಟಾರೆ ಹೇಳಬೇಕೆಂದರೆ, ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಇದೀಗ ಹುಲಿಗಳ ಜೊತೆಗೆ ಕರಡಿಯೂ ಕಾಣಿಸಿಕೊಂಡಿರುವುದರಿಂದ, "ನಾನೂ ಕೂಡ ಇಲ್ಲಿದ್ದೇನೆ ಬನ್ನಿ, ನನ್ನನ್ನು ನೋಡಿಕೊಂಡು ಹೋಗಿ" ಎಂಬ ಸಂದೇಶವನ್ನು ಪ್ರಾಣಿಪ್ರಿಯರಿಗೆ ರವಾನಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications