ಬಂಡೀಪುರ ಹೆದ್ದಾರಿ ವಿಸ್ತರಣೆಗಿಲ್ಲ ಹಸಿರು ನಿಶಾನೆ!
ಚಾಮರಾಜನಗರ, ಜನವರಿ 12: ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಸಾವಿರಾರು ಪ್ರವಾಸಿಗರು ಬರುತ್ತಾರೆ ಆದರೆ ಇವರೆಲ್ಲರು ರಸ್ತೆ ಬಗ್ಗೆಯೇ ಮಾತನಾಡುತ್ತಾರೆ. ಕಾರಣ ಬಂಡೀಪುರ ರಾಷ್ಟ್ರೀಯ ಉದ್ಯಾನದ ಮಾರ್ಗವಾಗಿ ಸಾಗುವ ರಾಷ್ಟ್ರೀಯ ಹೆದ್ದಾರಿ 67 ಕಿರಿದಾಗಿದೆ. ಇದು ರಾಷ್ಟ್ರೀಯ ಹೆದ್ದಾರಿಯಾಗಿದ್ದರೂ ಸಾಮಾನ್ಯ ರಸ್ತೆಗಿಂತ ಕಡೆಯಾಗಿದೆ.
ದೂರದಿಂದ ಬರುವವರಿಗೆ ಇದೊಂದು ರಾಷ್ಟ್ರೀಯ ಹೆದ್ದಾರಿನಾ ಎಂಬ ಸಂಶಯ ಮೂಡುವುದು ಸಹಜ. ಏಕೆಂದರೆ ಸೌಲಭ್ಯವಂಚಿತ ಈ ರಸ್ತೆಯಲ್ಲಿ ಸಾಗುವುದೇ ಸಾಹಸ. ಇಂಥ ರಸ್ತೆಯನ್ನು ಅಭಿವೃದ್ಧಿ ಮಾಡಬೇಕೆನ್ನುವ ಒತ್ತಡ ಒಂದೆಡೆಯಾದರೆ, ಮತ್ತೊಂದೆಡೆ ಅಭಿವೃದ್ಧಿಗೆ ಕಾನೂನು ತೊಡಕುಗಳು ಎದುರಾಗಿವೆ. ಇದರಿಂದಾಗಿ ಬಂಡೀಪುರ ಮೂಲಕ ಊಟಿಗೆ ತೆರಳುವ ಪ್ರವಾಸಿಗರು ಹಿಡಿಶಾಪ ಹಾಕುತ್ತಿದ್ದಾರೆ. ಗುಂಡ್ಲುಪೇಟೆ ಪಟ್ಟಣದಿಂದ ಮೇಲುಕಾಮನಹಳ್ಳಿ ಗ್ರಾಮದವರೆಗೆ 20 ಕಿ.ಮೀ. ದೂರದ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಹಸಿರು ನಿಶಾನೆ ದೊರೆತಿದ್ದು, ಈಗಾಗಲೇ ಸುಮಾರು ರು. 48ಕೋಟಿಗಳ ವೆಚ್ಚದಲ್ಲಿ ಕಾಮಗಾರಿಯೂ ನಡೆಯುತ್ತಿದೆ.[ಬಂಡೀಪುರ ಸಫಾರಿಗಾಗಿ ಬಂತು ಪರಿಸರ ಸ್ನೇಹಿ ಬಸ್!]

ಆದರೆ ಹೆದ್ದಾರಿಯನ್ನು ವಿಸ್ತರಣೆ ಮಾಡಿ ಅಭಿವೃದ್ಧಿಗೊಳಿಸಲು ಅರಣ್ಯ ಇಲಾಖೆ ಅನುಮತಿ ನೀಡುತ್ತಿಲ್ಲ. ಕಾರಣ ರಸ್ತೆಯ ಎರಡು ಬದಿಯಲ್ಲೂ ಮರಗಳಿದ್ದು ಅವುಗಳನ್ನು ತೆರವುಗೊಳಿಸಿದರೆ ರಸ್ತೆ ವಿಸ್ತರಣೆ ಮಾಡಿ ಅಭಿವೃದ್ಧಿ ಮಾಡಬಹುದು ಇದಕ್ಕೆ ಅರಣ್ಯ ಇಲಾಖೆ ಅನುಮತಿ ನೀಡಬೇಕೆಂದು ರಸ್ತೆ ಅಭಿವೃದ್ಧಿ ಪ್ರಾಧಿಕಾರ ಸಂಸದ ಆರ್.ಧ್ರುವನಾರಾಯಣ್ ಅವರಿಗೆ ಮನವಿ ಮಾಡಲಾಗಿದೆ.[ಬಂಡೀಪುರದ 'ರಾಜಾ ಹುಲಿ' ಬಂದರೆ ಎಂಥ ಗಾಡಿಯೂ ಸೈಡಿಗೆ]
ಈ ಸಂಬಂಧ ಸಂಸದರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, ಈ ಸಂದರ್ಭ ಅರಣ್ಯಾಧಿಕಾರಿಗಳು ಅರಣ್ಯ ಕಾಯ್ದೆಯ ನಿಯಮದಂತೆ ಸೂಕ್ಷ್ಮ ಅರಣ್ಯ ವಲಯಕ್ಕೆ ಸೇರಿದ ಹಾಗೂ ಸಂರಕ್ಷಿತ ಅಭಯಾರಣ್ಯದಲ್ಲಿ ರಸ್ತೆಯ ಅಗಲವನ್ನು ಹೆಚ್ಚಿಸಲು ಸಾಧ್ಯವಿಲ್ಲ ಹಾಗೂ ರಸ್ತೆಯ ಬದಿಯಲ್ಲಿನ ಮರಗಳನ್ನು ಕಡಿಯಲು ಅವಕಾಶವಿಲ್ಲ. ಬದಲಾಗಿ ಸಂಚಾರಕ್ಕೆ ಅಡ್ಡಿಯುಂಟು ಮಾಡುವ ಮರಗಳ ಕೊಂಬೆಗಳನ್ನು ಮಾತ್ರ ಕತ್ತರಿಸಲು ಅನುಮತಿ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಇರುವ ರಸ್ತೆಯನ್ನು ಅಭಿವೃದ್ಧಿಗೊಳಿಸುವ ಕಾರ್ಯ ನಡೆಯುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications