ಕಾಂಗ್ರೆಸ್ ಶಾಸಕರು ಬಂಡೆಯನ್ನು ಒಡೆದು ಜಲ್ಲಿಕಲ್ಲು ಮಾಡಿದ್ದಾರೆ: ಡಿಕೆಶಿ ವಿರುದ್ಧ ಯತ್ನಾಳ್‌ ವ್ಯಂಗ್ಯ

ಚಾಮರಾಜನಗರ, ನವೆಂಬರ್‌ 06: ಡಿಸಿಎಂ ಡಿ.ಕೆ.ಶಿವಕುಮಾರ್ ಈಗ ಬಂಡೆಯಲ್ಲ ಜಲ್ಲಿಕಲ್ಲು ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ವ್ಯಂಗ್ಯ ಮಾಡಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಬರ ಅಧ್ಯಯನ ಪ್ರವಾಸ ಮುಗಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಯಾರೂ ಡಿ.ಕೆ.ಶಿವಕುಮಾರ್ ಮಾತನ್ನು ಕೇಳುತ್ತಿಲ್ಲ. ರಾಜ್ಯಾಧ್ಯಕ್ಷರಿಗೆ ಯಾರೂ ಕ್ಯಾರೆ ಎನ್ನುತ್ತಿಲ್ಲ. ಡಿಕೆಶಿ ಪೂರ್ತಿ ವೀಕ್ ಆಗಿದ್ದು, ಕಾಂಗ್ರೆಸ್ ಶಾಸಕರು ಬಂಡೆಯನ್ನು ಒಡೆದು ಜಲ್ಲಿಕಲ್ಲು ಮಾಡಿದ್ದಾರೆ ಎಂದು ವ್ಯಂಗ್ಯ ಮಾಡಿದರು.

basanagouda-patil-yatnal

ಇನ್ನು, ಇದೇ ವೇಳೆ ಡಿ.ಕೆ.ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸಲು ಅವರ ಪಕ್ಷದಲ್ಲೇ ವಕೀಲರನ್ನು ಸಂಪರ್ಕ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಜಾಮೀನನ್ನು ರದ್ದುಪಡಿಸಲು ಕೆಲವರು ವಿಮಾನದಲ್ಲಿ ತೆರಳಿದ್ದಾರೆ ಎಂದರು.

ಆಪರೇಷನ್ ಹಸ್ತ ಸಂಬಂಧ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಬಿಜೆಪಿ ಮಾಜಿ ಶಾಸಕರನ್ನು ಸೆಳೆಯುವ ಹಲ್ಕಾ ಕೆಲಸ ಬಿಡಬೇಕು. ಗ್ರಾಪಂ ಅಧ್ಯಕ್ಷರಾಗಲು ಯೋಗ್ಯವಿಲ್ಲದಿದ್ದರೂ, ಬಿಜೆಪಿ ಅವರನ್ನು ಸಿಎಂ ಮಾಡಿತ್ತು. ಮಂತ್ರಿ ಮಾಡಿತ್ತು. ಸ್ಪೀಕರ್, ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿತ್ತು. ಈಗ ಕಾಂಗ್ರೆಸ್‌ಗೆ ಹೋಗಿ ಬಿಜೆಪಿ ಬಗ್ಗೆ ಮಾತನಾಡುತ್ತಿದ್ದಾರೆ. ಕಿರಾಣಿ ಅಂಗಡಿ ತೆರೆದು ಶಾಸಕರನ್ನು ವ್ಯಾಪಾರ ಮಾಡುವ ಕೆಲಸಕ್ಕೆ ಇಳಿದಿದ್ದಾರೆ. ಈ ಹಲ್ಕಾ ಕೆಲಸ ಮೊದಲು ಬಿಡಬೇಕು ಎಂದು ಯತ್ನಾಳ್ ವಾಗ್ದಾಳಿ ನಡೆಸಿದರು.

ಬಿಜೆಪಿಯಲ್ಲಿ ವಿ.ಸೋಮಣ್ಣ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಯತ್ನಾಳ್‌, ಸೋಮಣ್ಣ ಅವರನ್ನು ಬಿಜೆಪಿ ಕಡೆಗಣಿಸಿಲ್ಲ. ಅವರಿಗೆ ಮುಂದೆ ಪಕ್ಷದಲ್ಲಿ ಒಳ್ಳೆಯ ಗೌರವಯುತ ಸ್ಥಾನ ಕಾದಿದೆ. ಸೋಮಣ್ಣ ಕಾಂಗ್ರೆಸ್‌ಗೆ ಹೋದರೆ ಮಣ್ಣು ತಿನ್ನಬೇಕು ಅಷ್ಟೇ. ಅವರೇ 136 ಜನ ಇದ್ದಾರೆ ಅವರಿಗೆ ಸರಿಯಾದ ಸ್ಥಾನ ಸಿಕ್ಕಿಲ್ಲ, ಇನ್ನು ಸೋಮಣ್ಣ ಹೋದರೆ ಅವರಿಗೇನು ಸಿಗುತ್ತದೆ ಎಂದು ಪ್ರಶ್ನಿಸಿದರು.

ಈಗ ನಮಗೆ ಲೋಕಸಭೆ ಚುನಾವಣೆ ಅಷ್ಟೇ ಬೇಕು. ಮೋದಿ ಮತ್ತೊಮ್ಮೆ ಪಿಎಂ ಆಗಲು ಹಗಲು ರಾತ್ರಿ ದುಡಿಯಬೇಕು.

ಭಾರತ ಭಾರತವಾಗಿ ಉಳಿಯಬೇಕು. ಭಾರತ ಮತ್ತೊಂದು ಇಸ್ರೇಲ್ ವಿರುದ್ಧ ಹೋಗಿರುವ ಹಮಾಸ್ ಆಗಬಾರದು. ಅದಕ್ಕಾಗಿ 2024ಕ್ಕೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗಬೇಕು ಎಂದರು.

ಪರೀಕ್ಷೆ ಅಕ್ರಮದಲ್ಲಿ ಕಾಂಗ್ರೆಸ್ ಕಿಂಗ್‌ಪಿನ್‌

ಎಲ್ಲಾ ಅಕ್ರಮದ ಕಿಂಗ್‌ಪಿನ್‌ಗಳೆಲ್ಲರೂ ಕಾಂಗ್ರೆಸ್‌ನವರು. ಪಿಎಸ್ಐ ಹಗರಣ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ದ ಮಾತನಾಡುತ್ತಿದ್ದರು. ಈಗ ನಿಮ್ಮದೇ ಸರ್ಕಾರ ಇದೆ ಸಿಬಿಐ ತನಿಖೆ ಮಾಡಿ. ನೀವು ಐದು ತಿಂಗಳಾದರೂ ಯಾವ ತನಿಖೆ ಮಾಡಿಲ್ಲ. ನಿಮಗೆ ಧಮ್, ತಾಖತ್ ಇದ್ರೆ ತನಿಖೆ ಮಾಡಿಸಿ ಎಂದು ಸವಾಲು ಹಾಕಿದರು.

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಏನೇನೋ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಈಗ ಪ್ರಿಯಾಂಕ್ ಖರ್ಗೆ ಎಲ್ಲಿಗೆ ಹೋದರು. ಕಾಂಗ್ರೆಸ್ ಪಕ್ಷದವರೇ ಅಕ್ರಮದ ಕಿಂಗ್‌ಪಿನ್‌ ಆಗಿದ್ದಾರೆ. ಇದೆಲ್ಲಾ ನೋಡಿದರೆ ಪಿಎಸ್ಐ ಹಾಗೂ ಕೆಎಇ ಪರೀಕ್ಷಾ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ಕೈವಾಡ ಇದೆ ಎನಿಸುತ್ತದೆ ಎಂದು ಯತ್ನಾಳ್‌ ಶಂಕೆ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+