ಗುಂಡ್ಲುಪೇಟೆ: ಬೀದಿ ನಾಯಿಗಳ ಪಾಲಿನ ಅನ್ನದಾತನಾದ ಬಿಸಿಸಿಐ ಅಧ್ಯಕ್ಷ, ಫೋಟೋ ವೈರಲ್
ಚಾಮರಾಜನಗರ, ನವೆಂಬರ್, 23: ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಈಗ ಕೃಷಿಯಲ್ಲಿ ಸೆಕೆಂಡ್ ಇನ್ನಿಂಗ್ ಆರಂಭಿಸಿದ್ದಾರೆ. ಇದರ ಜೊತೆಗೆ, ಬೀದಿನಾಯಿಗಳ ಮೇಲೆ ವಿಶೇಷ ಅಕ್ಕರೆ ಇಟ್ಟುಕೊಂಡಿದ್ದು, ಆಹಾರ ಜೊತೆಗೆ ಔಷಧವನ್ನು ಕೊಡುವ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೃಷಿ ನಡೆಸುವ ರೋಜರ್ ಬಿನ್ನಿ ತಾವು ಬಂದಾಗಲೆಲ್ಲ ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ. ಕೆಲ ದಿನಗಳ ಹಿಂದೆಯಷ್ಟೇ, ಬೀದಿನಾಯಿಗಳಿಗೆ ಚುಚ್ಚುಮದ್ದನ್ನು ಕೂಡ ಹಾಕಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ತಾವು ಕೃಷಿ ಭೂಮಿಗೆ ತೆರಳುವ ಮಾರ್ಗ ಮಧ್ಯದಲ್ಲಿ ಸಿಗುವ ಬೀದಿ ನಾಯಿಗಳಿಗೆ ಆಹಾರ ನೀಡುತ್ತಾ ಸಾಗುವ ಬಿನ್ನಿಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಇದೀಗ ಭಾರೀ ವೈರಲ್ ಆಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಕೃಷಿ ಉಪಯೋಗಕ್ಕಾಗಿ ಚಾಮರಾಜನಗರದಲ್ಲಿ ಟ್ರಾಕ್ಟರ್ ಖರೀದಿಸಿ ಗಮನ ಸೆಳೆದಿದ್ದರು. ಇದೀಗ ಮತ್ತೆ ಮೂಲಕ ಪ್ರಾಣಿಗಳನ್ನು ಸಂತೈಸುವ ಮೂಲಕ ಗಮನ ಸೆಳೆದಿದ್ದಾರೆ.
ಚಾಮರಾಜನಗರದಲ್ಲಿ ಮುತ್ತಯ್ಯ ಮುರಳೀಧರನ್ ಕಾರ್ಖಾನೆ
ಇನ್ನು ವಿಶ್ವ ವಿಖ್ಯಾತ ಕ್ರಿಕೆಟಿಗ, ಸ್ಪಿನ್ ಮಾಂತ್ರಿಕ ಎಂದೇ ಪ್ರಸಿದ್ಧಿಯಾಗಿರುವ ಮುತ್ತಯ್ಯ ಮುರಳೀಧರನ್ ಕೈಗಾರಿಕೋದ್ಯಮಿಯಾಗಿ ಮತ್ತೇ ಮೋಡಿ ಮಾಡಲು ಕರ್ನಾಟಕಕ್ಕೆ ಬರುತ್ತಿದ್ದಾರೆ. ಅದರಲ್ಲೂ ಕರ್ನಾಟಕದ ಚಾಮರಾಜನಗರದಲ್ಲಿ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗಿರುವುದೇ ವಿಶೇಷ.
ಗಡಿಜಿಲ್ಲೆ ಚಾಮರಾಜನಗರದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಾಫ್ಟ್ ಡ್ರಿಂಕ್ ಕಾರ್ಖಾನೆಯನ್ನು ಆರಂಭಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆ 46 ಹೆಕ್ಟೇರ್ ಪ್ರದೇಶವನ್ನು ಖರೀದಿಸಿ, ಆಡಳಿತಾತ್ಮಕವಾದ ಎಲ್ಲಾ ಹಂತಗಳನ್ನೂ ಮುಗಿಸಿ ಕಾರ್ಕಾನೆ ನಿರ್ಮಾಣ ಕಾರ್ಯವನ್ನು ಆರಂಭಿಸಿದ್ದಾರೆ ಎಂದು ಇತ್ತೀಚೆಗಷ್ಟೇ ತಿಳಿದುಬಂದಿತ್ತು.
ಶ್ರೀಲಂಕಾ ತಂಡದ ಮಾಜಿ ಕ್ರಕೆಟ್ ಆಟಗಾರ ಈ ಕಾರ್ಖಾನೆಯಲ್ಲಿ ಮುತ್ತಯ್ಯ ಬೆವರೇಜಸ್ ಹೆಸರಿನಲ್ಲಿ ಸಾಫ್ಟ್ ಡ್ರಿಂಕ್, ಕೂಲ್ ಡ್ರಿಂಕ್, ಸುವಾಸಿತ ಹಾಲನ್ನು ಕ್ಯಾನ್ಗಳಲ್ಲಿ ಮಾರಾಟ ಮಾಡಲಿದ್ದಾರೆ. ಚಾಮರಾಜನಗರದಲ್ಲಿ ಸಾಪ್ಟ್ ಡ್ರಿಂಕ್ ಹಾಗೂ ನಾನ್ ಆಲ್ಕೊಹಾಲಿಕ್ ಡ್ರಿಂಕ್ಗಳು ತಯಾರಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
250 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣವನ್ನು ಚಾಮರಾಜನಗರದಲ್ಲಿ ಹೂಡಿಕೆ ಮಾಡುತ್ತಿದ್ದು, ಇದರಿಂದ ಸ್ಥಳೀಯವಾಗಿ 500-800 ಮಂದಿಗೆ ಕೆಲಸ ಸಿಗಲಿದೆ. ಪರೋಕ್ಷವಾಗಿ ನೂರಾರು ಮಂದಿ ಕಾರ್ಕಾನೆಯಿಂದ ಸಹಾಯವಾಗಾಲಿದೆ.
ಖ್ಯಾತ ಕ್ರಿಕೆಟಿಗ ಚಾಮರಾಜನಗರದಲ್ಲಿ ಕಾರ್ಖಾನೆ ಆರಂಭಿಸುವುದರಿಂದ ಮತ್ತಷ್ಟು ಕೈಗಾರಿಕೆಗಳನ್ನು ಸೆಳೆಯಲು ಅನುಕೂಲ ಆಗಲಿದೆ. ಈಗಾಗಲೇ ಬಿರ್ಲಾ ಗ್ರೂಪಿನಿಂದ ಪರಿಸರಸ್ನೇಹಿ ಬಣ್ಣದ ಕಾರ್ಖಾನೆ ಕೂಡ ನಿರ್ಮಾಣವಾಗುತ್ತಿದ್ದು, ಅಂತಿಮ ಹಂತದ ಪ್ರಕ್ರಿಯೆಯಲ್ಲಿ ಈ ಕಾರ್ಖಾನೆ ಇದೆ. ಒಟ್ಟಿನಲ್ಲಿ ಖ್ಯಾತ ಕ್ರಿಕೆಟಿಗ ಕರ್ನಾಟಕದಲ್ಲಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭ ಮಾಡಿರುವುದು ಸಂತೋಷದಾಯಕ ಬೆಳವಣಿಗೆ ಆಗಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications