ಮತದಾನ ಮೊದಲು ನಂತರ ಮದುವೆ: ಓಡಿ ಬಂದು ಮತ ಹಾಕಿದ ವರ-ವಧು
ಚಾಮರಾಜನಗರ ಏಪ್ರಿಲ್ 26: ದಾಂಪತ್ಯ ಜೀವನಕ್ಕೆ ಕಾಲಿಡುವ ಮುನ್ನ ವರನೊಬ್ಬ ಓಡಿ ಬಂದು ಮತ ಚಲಾಯಿಸಿದ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ನಡೆದಿದೆ.
ತಾಳಿ ಕಟ್ಟುವ ಶುಭ ಗಳಿಗೆಗೂ ಮುನ್ನ ವರ ಚೇತನ್ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆ ಒಂಬತ್ತು ಗಂಟೆಗೆ ತಾಳಿ ಕಟ್ಟುವ ಶುಭ ಮುಹೂರ್ತವಿತ್ತು. ಹೀಗಾಗಿ ಇದಕ್ಕೂ ಮುನ್ನ ಮತಗಟ್ಟೆಗೆ ಓಡೋಡಿ ಬಂದ ವರ ಚೇತನ್ ಮತ ಹಾಕಿದರು.

ಈ ವೇಳೆ ವರನ ಕುಟುಂಬಸ್ಥರು ಸಾಥ್ ನೀಡಿದರು. ಶುಭ ಮುಹೂರ್ತಕ್ಕೆ ಸಮಯ ಮೀರುವ ಕಾರಣ ವರ ಓಡೋಡಿ ಬಂದು ಮತ ಕೇಂದ್ರದಲ್ಲಿ ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮತದಾನದ ಹೆಸರೇಳಿಕೊಂಡು ಮನೆಯಲ್ಲಿ ಮತದಾನ ಮಾಡದೇ ಇರುವ ಯುವ ಪೀಳಿಗೆಗೆ ಈ ಘಟನೆ ಮಾದರಿಯಾಗಿದೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಚೇತನ್, 'ನನ್ನ ಹಕ್ಕನ್ನು ನಾನು ಚಲಾಯಿಸಲು ಬಂದಿದ್ದೇನೆ. ಮತದಾನ ನಮ್ಮೆಲ್ಲರ ಆದ್ಯ ಕರ್ತವ್ಯ. ಯಾರೂ ಕೂಡ ಮತದಾನದಿಂದ ವಂಚಿತರಾಗಬಾರದು. ತಾಳಿ ಕಟ್ಟುವ ಮುನ್ನ ಬಂದು ಮತದಾನ ಮಾಡಿ ನನ್ನ ಹಕ್ಕು ಚಲಾಯಿಸಿದ್ದೇನೆ' ಎಂದರು.
ಇನ್ನೂ ಚಿಕ್ಕಮಗಳೂರು, ಮಡಿಕೇರಿಯಲ್ಲೂ ಇಂಥಹ ಘಟನೆ ನಡೆದಿದೆ. ಮತದಾನದ ದಿನವೇ ಹಲವೆಡೆ ಮದುವೆ ನಡೆಯುತ್ತಿರುವುದರಿಂದಾಗಿ ಕುಟುಂಬಸ್ಥರು, ವಧು-ವರರರು ಮತಗಟ್ಟೆಗಳಿಗೆ ಬಂದು ವೋಟ್ ಹಾಕುವುದು ಕೊಂಚ ಕಷ್ಟವಾಗಿದೆ.
ಅದಾಗ್ಯೂ ಕೆಲವೆಡೆ ವರ-ವಧು ಮತಗಟ್ಟೆಗಳಿಗೆ ಆಗಮಿಸಿ ಮತಚಲಾಯಿಸಿದ್ದು ಕಂಡು ಬಂದಿದೆ. ಚಿಕ್ಕಮಗಳೂರು, ಮಡಿಕೇರಿಯಲ್ಲೂ ಮದುವೆಗೆ ಸಿಂಗಾರಗೊಂಡ ವಧುಗಳಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡುವ ಮುನ್ನ ಮತಗಟ್ಟೆಗೆ ಭೇಟಿ ನೀಡಿ ಮತಚಲಾಯಿಸಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications