ಬಂಡೀಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ಗಟ್ಟಲೇ ಟ್ರಾಫಿಕ್ ಜಾಮ್-ಬಿರು ಬಿಸಿಲಿಗೆ ಹೈರಣಾದ ಪ್ರವಾಸಿಗರು
ಚಾಮರಾಜನಗರ, ಮೇ, 12: ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ವಾಹನವೊಂದು ಕೆಟ್ಟು ನಿಂತು ಕಿಲೋ ಮೀಟರ್ಗಟ್ಟಲೇ ಟ್ರಾಫಿಕ್ ಜಾಮ್ ಸಂಭವಿಸಿದ ಘಟನೆ ಚಾಮರಾಜನಗರ ಜಿಲ್ಲೆ ಬಂಡೀಪುರದ ಬಳಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಬಳಿಯ ಬಂಡಿಪುರದ ಪ್ರವೇಶ ದ್ವಾರದ ಮುಂದೆ ಭಾರಿ ಗಾತ್ರದ ಕಂಟೈನರ್ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿ ಕಿಲೋ ಮೀಟರ್ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರ ದಟ್ಟಣೆಯಿಂದ ಹಿಂದೆ ಮುಂದೆ ಹೋಗಲಾರದೆ ಪ್ರಯಾಣಿಕ ಪರದಾಡಿದ ಘಟನೆ ನಡೆದಿದೆ.

ಈ ಟ್ರಾಫಿಕ್ನಿಂದ ಭಾನುವಾರದ ವಿಶೇಷ ಊಟಿ, ಬಂಡೀಪುರ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಹೋಗುವ ಪ್ರಯಾಣಿಕರಿಗೆ ಅಡಚಣೆ ಉಂಟಾಗಿದೆ. ಇನ್ನು ಹೀಗೆ ಸುಮಾರು ಒಂದು ಗಂಟೆಗಳ ಕಾಲ ಹಿಂದೆ ಮುಂದೆ ಹೋಗಲಾರದೆ ಮಾರ್ಗದ ಮಧ್ಯೆ ಸಿಲುಕಿ ಪ್ರಯಾಣಿಕರು ಪರದಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರಣಭೀಕರ ಮಳೆ ನಡುವೆಯೇ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘವು ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ಹೊರಹಾಕಿದ ಘಟನೆ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಸೋಮವಾರಪೇಟೆ ಬಳಿ ಇಂದು (ಮೇ 11) ನಡೆಯಿತು.
ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.
ಈ ವೇಳೆ ಭಾಗ್ಯರಾಜ್ ಮಾತನಾಡಿ, ರೈತರಿಗೆ ಬರ ಪರಿಹಾರ ನೀಡುವಲ್ಲಿ ಸರ್ಕಾರ ವೈಜ್ಞಾನಿಕ ವಿಧಾನವನ್ನು ಅನುಸರಿಸಿಲ್ಲ. ಕಳೆದ ಮೂರು ದಿನಗಳ ಹಿಂದೆ ಬೀಸಿದ ಬಿರುಗಾಳಿಗೆ ಲಕ್ಷಾಂತರ ಹೆಕ್ಟರ್ ಪ್ರದೇಶದ ಬಾಳೆ, ಕಬ್ಬು, ತೆಂಗು, ಮೆಕ್ಕೆಜೋಳ ನಷ್ಟ ನಾಶವಾಗಿದ್ದು, ವೈಜ್ಞಾನಿಕವಾಗಿ ಬೆಳೆ ನಷ್ಟ ಪರಿಹಾರವನ್ನು ಘೋಷಿಸಬೇಕು ಎಂದರು.
ಭೀಕರ ಬಿರುಗಾಳಿಯಿಂದ ನೊಂದಿರುವ ರೈತರ ಸಾಲವನ್ನು ರಾಜ್ಯ ಸರ್ಕಾರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಪ್ರತಿ ಹೆಕ್ಟೇರ್ ಬಾಳೆ ಬೆಳೆ ನಷ್ಟಕ್ಕೆ 1,00,000 ರೂಪಾಯಿಗೂ ಹೆಚ್ಚು ದರ ನೀಡಬೇಕು ಹಾಗೂ ಬರ ಪರಿಹಾರವನ್ನು ತಾರತಮ್ಯ ಇಲ್ಲದೆ, ಎಲ್ಲಾ ರೈತರಿಗೂ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ಕಳೆದ ಸಾಲಿನ ಪ್ರತಿ ಟನ್ಗೆ 150 ರೂಪಾಯಿಯ ಸರ್ಕಾರ ಆದೇಶದ ಪ್ರಕಾರ ರಾಜ್ಯದಲ್ಲಿ 950 ಕೋಟಿ ರೂಪಾಯಿ ರೈತರಿಗೆ ಬರಬೇಕು. ಕಳೆದ ಸಾಲಿನ ಕಾರ್ಖಾನೆಗಳಿಂದ ಲಾಭಾಂಶವನ್ನು ಹಂಚಿಕೆ ಮಾಡಿಸಬೇಕು. ಖಾಸಗಿ ಮತ್ತು ಸಾಲ ಪಡೆದ ರೈತರಿಗೆ ಟ್ಯಾಕ್ಟರ್ಗಳನ್ನು ಜಪ್ತಿ ಮಾಡಿ ಬೇರೆ ರಾಜ್ಯಗಳಿಗೆ ಪ್ರಕರಣಗಳನ್ನು ದಾಖಲಿಸಿ ಮಾನಸಿಕವಾಗಿ ಕುಗ್ಗುವಂತೆ ಮಾಡುತ್ತಿವೆ.
ಬ್ಯಾಂಕುಗಳು ಬರದಿಂದ ನೊಂದಿರುವ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ಗೆ 10 ರೂಪಾಯಿಯನ್ನು ಕೊಡಿಸುವ ಕ್ರಮ ವಹಿಸಬೇಕು ಹಾಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಇನ್ನು, ಪ್ರತಿಭಟನೆ ನಡೆಸಿ ರಾಷ್ಟ್ರೀಯ ಹೆದ್ದಾರಿ ತಡೆದಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications