Get Updates
Get notified of breaking news, exclusive insights, and must-see stories!

ಬಿಳಿಗಿರಿರಂಗನ ಬೆಟ್ಟಕ್ಕೆ 2 ದಿನ ದ್ವಿಚಕ್ರ ವಾಹನ ನಿರ್ಬಂಧ, ಯಾಕೆ ಹಾಗೂ ಯಾವಾಗ?-ಮಾಹಿತಿ ತಿಳಿಯಿರಿ

ಚಾಮರಾಜನಗರ, ಜನವರಿ, 12: ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆಯಲಿರುವ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ ಹಾಗೂ ಚಿಕ್ಕ ಜಾತ್ರಾ ಸಂಬಂಧ ಬಿಳಿಗಿರಿರಂಗನಬೆಟ್ಟಕ್ಕೆ ಯಳಂದೂರು ತಾಲೂಕಿನ ಗುಂಬಳ್ಳಿ ಮತ್ತು ಚಾಮರಾಜನಗರ ತಾಲೂಕಿನ ಹೊಂಡರಬಾಳು ಅರಣ್ಯ ಇಲಾಖೆಯ ಚೆಕ್‌ ಪೋಸ್ಟ್ ಮೂಲಕ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ಜನವರಿ 15ರಿಂದ 16ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬಿಳಿಗಿರಿರಂಗನ ಬೆಟ್ಟದಲ್ಲಿ ಜರುಗಲಿರುವ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ ಹಾಗೂ ಚಿಕ್ಕ ಜಾತ್ರಾ ಹಿನ್ನೆಲೆ ಜಿಲ್ಲೆ, ಹೊರ ಜಿಲ್ಲೆಗಳಿಂದ ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಸೇರುವ ಸಂಭವವಿದ್ದು, ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುವುದರಿಂದ ಮತ್ತು ಸದರಿ ರಸ್ತೆಯು ಅರಣ್ಯ ಪ್ರದೇಶದಿಂದ ಕೂಡಿದ್ದು, ತುಂಬಾ ಕಡಿದಾದ ಹಾಗೂ ಕಿರಿದಾಗಿರುವುದರಿಂದ ರಸ್ತೆಯ ಸಂಚಾರದಲ್ಲಿ ದಟ್ಟಣೆಯಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುತ್ತದೆ.

 Biligiriranga hill: Two-wheeler vehicles ban for 2 days to BR hills, Why and when?, know details

ಆದ್ದರಿಂದ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ, ನಿಯಮಾವಳಿ ಹಾಗೂ ಸಂಚಾರಿ ನಿಯಂತ್ರಣ ಕಾಯ್ದೆ ಅನ್ವಯ ಬಿಳಿಗಿರಿರಂಗನಬೆಟ್ಟಕ್ಕೆ ಜನವರಿ 15ರಿಂದ 16ರವರೆಗೆ ಯಳಂದೂರು ತಾಲೂಕಿನ ಗುಂಬಳ್ಳಿ ಮತ್ತು ಚಾಮರಾಜನಗರ ತಾಲೂಕಿನ ಹೊಂಡರಬಾಳು ಅರಣ್ಯ ಇಲಾಖೆಯ ಚೆಕ್‌ ಪೋಸ್ಟ್ ಮೂಲಕ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶದಲ್ಲಿ ತಿಳಿಸಿದ್ದಾರೆ.

ಮಲೆ ಮಾದಪ್ಪನ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಎಳ್ಳು ಅಮಾವಾಸ್ಯೆ ಹಿನ್ನೆಲೆ ನಿನ್ನೆ (ಜನವರಿ 11) ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಸಾಗಾರವೇ ಹರಿದು ಬಂದಿತ್ತು.

ಅಮಾವಾಸ್ಯೆ ಪೂಜೆ ಹಿನ್ನೆಲೆ ಬೆಂಗಳೂರು, ರಾಮನಗರ, ಕನಕಪುರ, ಮೈಸೂರು, ಮಂಡ್ಯ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು ನಂಜನಗೂಡು ಸೇರಿದಂತೆ ರಾಜ್ಯದ ವಿವಿಧಡೆಯಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸಿ ವಿವಿಧ ಸೇವೆಗಳನ್ನು ಸಮರ್ಪಿಸಿ ದರ್ಶನ ಪಡೆದರು.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವ್ಯವಸ್ಥಿತ ಸರತಿ ಸಾಲು, ಶಿಫಾರಸ್ಸು ಪತ್ರ ತಂದವರಿಗೆ ನೇರದರ್ಶನ, 60 ವರ್ಷ ಮೇಲ್ಪಟ್ಟವರಿಗೂ ವಿಶೇಷ ದರ್ಶನ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು.

ಮಾದಪ್ಪನಿಗೆ ತ್ರಿಕಾಲ ಪೂಜೆಯ ಜೊತೆಗೆ ಎಳ್ಳಿನ ಎಣ್ಣೆಯಿಂದ ಅಭಿಷೇಕ, ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು. ದೇವಾಲಯದ ರಾಜಗೋಪುರ ಗರ್ಭಗುಡಿಯ ಗೋಪುರ, ಕಟ್ಟೆ ಬಸವೇಶ್ವರ ದೇವಾಲಯದ ಒಳಾಂಗಣ, ಹೊರಾಂಗಣ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಆಕರ್ಷಕ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+