ಬಂಡೀಪುರದಲ್ಲಿ ವೀಕ್ಷಕರನ್ನು ಪುಳಕಗೊಳಿಸಿದ ಪಕ್ಷಿಗಳು
ಚಾಮರಾಜನಗರ, ಫೆಬ್ರವರಿ 08; ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆಯುತ್ತಿದ್ದ ಪಕ್ಷಿ ಗಣತಿ ಯಶಸ್ವಿಯಾಗಿ ಕೊನೆಗೊಂಡಿದೆ. ಪಕ್ಷಿಗಣತಿಯಲ್ಲಿ ಪಾಲ್ಗೊಂಡಿದ್ದ 90ಕ್ಕೂ ಹೆಚ್ಚು ಪಕ್ಷಿಪ್ರೇಮಿಗಳು ಹಲವು ಅಪರೂಪದ ಪಕ್ಷಿಗಳನ್ನು ಗುರುತಿಸಿ ಖುಷಿ ಪಟ್ಟರು.
ಹಸಿರ ಕಾನನದ ಮರ, ಕೆರೆ ಹೀಗೆ ಹಲವು ಕಡೆಗಳಲ್ಲಿ ಕಾಣಿಸಿಕೊಂಡ ಪಕ್ಷಿಗಳು ತಮ್ಮ ವಿಭಿನ್ನ ಚೆಲುವು ಮತ್ತು ಕೂಗಾಟದ ಮೂಲಕ ಪಕ್ಷಿ ಗಣತಿಯಲ್ಲಿ ಪಾಲ್ಗೊಂಡ ಸ್ವಯಂ ಸೇವಕರನ್ನು ಪುಳಕಗೊಳಿಸಿದವು.
ಪಕ್ಷಿಗಳ ಗಣತಿ ಸಂದರ್ಭ ಅರಣ್ಯದಲ್ಲಿ ಹೆಜ್ಜೆ ಹಾಕಿದವರಿಗೆ ಕೆಲವು ಅಪರೂಪದ ಪಕ್ಷಿಗಳಾದ ಮಟ ಪಕ್ಷಿ (ರೂಫಸ್ ಟ್ರಿಪೀ), ಅಯೊರಾ, ಕಂಚುಗಾರ ಹಕ್ಕಿ, ಸ್ಟಾರ್ಲಿಂಗ್, ಬುಲ್ ಬುಲ್ ಪ್ಲೈ ಕ್ಯಾಚರ್, ಗ್ರೇ ಟಿಟ್ ಸೇರಿದಂತೆ 20ಕ್ಕೂ ಹೆಚ್ಚು ಪ್ರಬೇಧದ ಹಕ್ಕಿಗಳು ದರ್ಶನ ನೀಡಿದವು.

ತಮಗೆ ವೀಕ್ಷಿಸಲು ಸಿಕ್ಕ ಪಕ್ಷಿಗಳ ಫೋಟೋ ತೆಗೆದು, ಗಾತ್ರ, ಬಣ್ಣ, ಲಕ್ಷಣಗಳನ್ನು ಗುರುತಿಸಿ ಮಾಹಿತಿಗಳನ್ನು ತಜ್ಞರು ದಾಖಲು ಮಾಡಿಕೊಂಡಿದ್ದು, ನಂತರ ಅವುಗಳನ್ನು ವಿಶ್ಲೇಷಿಸಲಿದ್ದಾರೆ. ಹಿಂದೆ ಯಾವೆಲ್ಲ ಪ್ರಭೇದದ ಪಕ್ಷಿಗಳು ಕಂಡು ಬಂದಿವೆ ಎಂಬ ದಾಖಲೆಗಳನ್ನು ಕೂಡ ಪರಿಶೀಲಿಸಿ ದಾಖಲು ಮಾಡಲಿದ್ದಾರೆ.
ಇನ್ನು ಈ ಕುರಿತಂತೆ ಪಕ್ಷಿಗಳ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ವನ್ಯಜೀವಿ ಛಾಯಾಗ್ರಾಹಕ ಆರ್. ಕೆ. ಮಧು ಅವರು ಮಾತನಾಡಿ, "ಪಕ್ಷಿಗಳನ್ನು ಗುರುತಿಸುವುದು ಸುಲಭವಲ್ಲ. ಅವುಗಳ ಬಗ್ಗೆ ಅಧ್ಯಯನ ಮಾಡಿರುವವರಿಗೆ ಮಾತ್ರ ಸಾಧ್ಯ. ಕೆಲವು ಗುಬ್ಬಚ್ಚಿ ಗಾತ್ರದ ಹಕ್ಕಿಗಳಂತೆ ಇರುತ್ತದೆ. ಬಣ್ಣ ಲಕ್ಷಣಗಳು ಒಂದೇ ರೀತಿಯಲ್ಲಿ ಇರುತ್ತವೆ. ಆದರೆ, ಭಿನ್ನ ಪ್ರಭೇದಗಳಿಗೆ ಸೇರಿರುತ್ತವೆ" ಎಂದು ಮಾಹಿತಿ ನೀಡಿದರು

ಇದೇ ವೇಳೆ ಪಕ್ಷಿಗಳ ಗಣತಿಯಲ್ಲಿ ಭಾಗವಹಿಸಿದ ಎಲ್ಲರಿಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯಾಧಿಕಾರಿಗಳು ಅಭಿನಂದನಾ ಪತ್ರಗಳನ್ನು ವಿತರಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications