ಗುಂಡ್ಲುಪೇಟೆಯಲ್ಲಿ ಹಕ್ಕಿ ಜ್ವರ ಆತಂಕ: ನೂರಕ್ಕೂ ಹೆಚ್ಚು ಕೋಳಿ ಸಾವು
ಚಾಮರಾಜನಗರ, ಜನವರಿ 16: ನೆರೆಯ ರಾಜ್ಯ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುಂಡ್ಲುಪೇಟೆ ತಾಲೂಕಿನ ಗಡಿಭಾಗದಲ್ಲಿ ಪಶುಪಾಲನಾ ಇಲಾಖೆ ನಿಗಾವಹಿಸಿದ್ದರು ಸಹ, ತಾಲೂಕಿನ ಕಾಡಂಚಿನ ಗ್ರಾಮ ಮೇಲುಕಾಮನಹಳ್ಳಿ ಸುತ್ತಮುತ್ತಲಿನಲ್ಲಿ ಸಾಕು ಕೋಳಿಗಳು ಸಾಮೂಹಿಕವಾಗಿ ಸಾವನ್ನಪ್ಪುತ್ತಿವೆ. ಇದರಿಂದ ತಾಲೂಕಿನಲ್ಲಿ ಹಕ್ಕಿ ಜ್ವರ ಹರಡಿರಬಹುದು ಎನ್ನುವ ಆತಂಕ ಎದುರಾಗಿದೆ.
ಗ್ರಾಮದಲ್ಲಿ ಅನೇಕರು ಮನೆಗಳಲ್ಲಿ ನಾಟಿ ತಳಿಯ ಕೋಳಿಗಳನ್ನು ಸಾಕಿ ಮಾರಾಟ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ ಹದಿನೈದು ದಿನಗಳಿಂದ ಕೋಳಿಗಳು ಆರೋಗ್ಯವಾಗಿದ್ದಂತೆ ಕಂಡುಬಂದರೂ ಅಲ್ಲಲ್ಲಿ ಸಾಯುತ್ತಿದೆ. ಇದರಿಂದಾಗಿ ಗ್ರಾಮದಲ್ಲಿ ಸುಮಾರು ಈವರೆಗೆ ನೂರಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿದೆ.
ಕೇರಳದಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ 766 ನಲ್ಲಿ ಬರುವಾಗ ಗಡಿಭಾಗ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ವಾಹನಗಳಿಗೆ ಸೋಡಿಯಂ ಹೈಪೋ ಕ್ಲೋರೈಡ್ ಸಿಂಪಡಣೆ ಮಾಡಲಾಗುತ್ತದೆ ಆದರೆ,ರಾಷ್ಟ್ರೀಯ 212 ನಲ್ಲಿ ಕೆಕ್ಕನಹಳ್ಳ ಚೆಕ್ಪೋಸ್ಟಿನ ಕಡೆಯಿಂದ ಬರುವ ಕೇರಳದ ವಾಹನಗಳಿಗೆ ಯಾವುದೇ ತಪಾಸಣೆ ಇರುವುದಿಲ್ಲ.

ಗುಂಡ್ಲುಪೇಟೆ ತಾಲೂಕಿನ ಅನೇಕ ವಾಹನಗಳು ಕೇರಳದ ವಿವಿಧ ಭಾಗಗಳಿಗೆ ರಾಷ್ಟ್ರೀಯ ಹೆದ್ದಾರಿ 766 ನಲ್ಲಿ ಹೋಗಿ ಬರುವಾಗ ರಾಷ್ಟ್ರೀಯ 212 ತಮಿಳುನಾಡಿನ ಗುಡಲೂರು ಮಾರ್ಗವಾಗಿ ಬರುತ್ತದೆ. ಇದರಿಂದಾಗಿ ಸೋಂಕು ಹರಡಿರಬಹುದು ಎನ್ನುವ ಆತಂಕ ಎದುರಾಗಿದೆ.
ಈಗಾಗಲೇ ರೈತರು ಕೋಳಿಯ ಮೃತದೇಹವನ್ನು ಗುಂಡ್ಲುಪೇಟೆ ಪಟ್ಟಣದ ಪಶುಸಂಗೋಪನೆ ಇಲಾಖೆಗೆ ತಲುಪಸಿದ್ದಾರೆ. ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮೋಹನ್ ಕುಮಾರ್ ಅವರು ಮರಣೋತ್ತರ ಪರೀಕ್ಷೆ ನಡೆಸಿ ಅಂಗಾಂಗಗಳನ್ನು ಮೈಸೂರಿನ ಲ್ಯಾಬ್ಗೆ ಕಳುಸಿದ್ದಾರೆ. ಈ ಬಗ್ಗೆ ವರದಿ ಬಂದ ನಂತರ ಮಾಹಿತಿ ಸಿಗುತ್ತದೆ ಎಂದು ಡಾ.ಮೋಹನ್ ಕುಮಾರ್ ತಿಳಿಸಿದ್ದಾರೆ.

ಸದ್ಯ ಗುಂಡ್ಲುಪೇಟೆ ತಾಲೂಕಿನ ಗಡಿಭಾಗದಲ್ಲಿ ಹಕ್ಕಿ ಜ್ವರ ಆತಂಕ ಎದುರಾಗಿದ್ದು, ಕೋಳಿ ಸಾಕಿ ಮಾರಾಟ ಮಾರುವವರಿಗೆ ಆತಂಕ ಎದುರಾಗಿದೆ. ಇನ್ನು ಈ ಬಗ್ಗೆ ಪಶುಪಾಲನಾ ಇಲಾಖೆ ಹೆಚ್ಚಿನ ನಿಗಾವಹಿಸ ಬೇಕಾಗಿದ್ದು, ವರದಿ ಬಂದ ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications