ಬಂಡೀಪುರ: ಹುಲಿಯನ್ನೇ ಗುಮ್ಮಿದ ಕಾಡೆಮ್ಮೆ-ವಿಡಿಯೋ ಭಾರೀ ವೈರಲ್
ಚಾಮರಾಜನಗರ, ಸೆಪ್ಟೆಂಬರ್, 12: ಚಾಮರಾಜನಗರ ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿ ಮಾಡುತ್ತಲೇ ಇರುತ್ತವೆ. ಇತ್ತೀಚೆಗಷ್ಟೇ ಹುಲಿಯೊಂದು ಎರಡು ಹಸುಗಳ ರಕ್ತ ಹೀರಿರುವ ಘಟನೆ ಜಿಲ್ಲೆಯ ವಡೆಯನಪುರ ಗ್ರಾಮದಲ್ಲಿ ನಡೆದಿತ್ತು. ಇನ್ನು ಇದೀಗ ಬೇಟೆಯಾಡಲು ಬಂದ ಹುಲಿಯನ್ನೇ ಕಾಡೆಮ್ಮೆಯೊಂದು ಹಿಮ್ಮೆಟ್ಟಿಸಿರುವುದು ಬಂಡೀಪುರ ಸಫಾರಿಯಲ್ಲಿ ನಡೆದಿದೆ.
ಸುಮ್ಮೆನೆ ಯಾವುದೇ ಪ್ರಾಣಿಗರ ತಂಟೆಗೆ ಹೋಗದೇ ಮೇಯುತ್ತಿದ್ದ ಕಾಡೆಮ್ಮೆ ಮೇಲೆ ದಾಳಿ ಹುಲಿ ದಾಳಿ ನಡೆಸಲು ಮುಂದಾಗಿದೆ. ಈ ವೇಳೆ ಹುಲಿಗೆ ಕಾಲಿನಿಂದ ಒದ್ದು ಕಾಡೆಮ್ಮೆ ಎದುರಿಸಿ ನಿಂತಿದೆ. ಇನ್ನು ಕಾಡೆಮ್ಮೆಯ ರೌದ್ರಾವತಾರ ಕಂಡ ಹುಲಿ ಬಂದ ದಾರಿಗೆ ಸುಂಕ ಇಲ್ಲವೆಂಬಂತೆ ಸ್ಥಳದಿಂದ ಕಾಲ್ಕಿತ್ತಿದೆ.

ಇನ್ನು, ಈ ರೋಮಾಂಚಕ ಬೇಟೆ ದೃಶ್ಯವನ್ನು ಸಫಾರಿಗೆ ತೆರಳಿದ್ದ ಪ್ರವಾಸಿಗರು ಸೆರೆ ಹಿಡಿದಿದ್ದಾರೆ. ಮಂಗಳವಾರ (ಸೆಪ್ಟೆಂಬರ್ 11) ಸಂಜೆ ಸಫಾರಿಯಲ್ಲಿ ಈ ಬೇಟೆ ಕಾಳಗ ನಡೆದಿದೆ ಎಂದು ತಿಳಿದುಬಂದಿದೆ. ಕಾಡೆಮ್ಮೆ ಬಲಿಷ್ಠ ಪ್ರಾಣಿಯಾದರೂ ಸಹ ಹುಲಿಯ ಪ್ರಮುಖ ಬೇಟೆಗಳಲ್ಲಿ ಒಂದಾಗಿದೆ. ಆದರೆ, ಹುಲಿಯನ್ನು ಎದುರಿಸಿ ಹಿಮ್ಮೆಟ್ಟಿಸಿದ್ದು ಮಾತ್ರ ರೋಮಾಂಚಕಾರಿ ಆಗಿದೆ.
2 ಹಸುಗಳ ರಕ್ತ ಹೀರಿದ ವ್ಯಾಘ್ರ: ಹಾಡಹಗಲೇ ಹುಲಿ ದಾಳಿ ಮಾಡಿ ಎರಡು ಹಸುಗಳನ್ನು ಬಲಿ ಪಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ವಡೆಯನಪುರ ಗ್ರಾಮದಲ್ಲಿ ನಡೆದಿದೆ. ಹಾಗಾದರೆ ಈ ಘಟನೆ ನಡೆದಿದ್ದು ಯಾವಾಗ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
3 ಹಸುಗಳ ಮೇಲೆ ದಾಳಿ: ವಡೆಯನಪುರ ಗ್ರಾಮದ ರವೀಶ್ ಎಂಬವರಿಗೆ ಸೇರಿದ ಹಸುಗಳು ಇವಾಗಿವೆ. ಮೇಯಲು ಬಿಟ್ಟಿದ್ದ ವೇಳೆ ರೈತನ ಎದುರೇ ಹಾಡಹಗಲು ಹುಲಿ 3 ಹಸುಗಳ ಮೇಲೆ ದಾಳಿ ಮಾಡಿದ್ದು ಎರಡು ಅಸುನೀಗಿದ್ದು, ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ.
ಕೆಲ ದಿನಗಳ ಹಿಂದೆಯಷ್ಟೇ ವಡೆಯನಪುರದಲ್ಲಿ ಚಿರತೆಯೊಂದು ಬೋನಿಗೆ ಸೆರೆಯಾಗಿತ್ತು. ಚಿರತೆ ಸೆರೆಯಿಂದ ನಿಟ್ಟುಸಿರು ಬಿಟ್ಟಿದ್ದ ರೈತರು ಈಗ ಹುಲಿ ದಾಳಿ ಕಂಡು ಬೆಚ್ಚಿಬಿದ್ದಿದ್ದಾರೆ. ಗ್ರಾಮದ ಸಮೀಪವೇ ಹುಲಿ ದಾಳಿ ನಡೆದಿರುವುದು ಗ್ರಾಮಸ್ಥರನ್ನು ಚಿಂತೆಗೀಡು ಮಾಡಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಕೊಟ್ಟಿದ್ದಾರೆ. ಇನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗುಂಡ್ಲುಪೇಟೆ ಬಫರ್ ವಲಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications