ಪಾಕ್ ಪರ ಘೋಷಣೆ ಹಿಂದೆ ಬಿಜೆಪಿ, ಆರ್ಎಸ್ಎಸ್ ಕೈವಾಡ: ಹೀಗೆ ಆರೋಪ ಮಾಡಿದ್ಯಾರು?-ಇಲ್ಲಿದೆ ಮಾಹಿತಿ
ಚಾಮರಾಜನಗರ, ಫೆಬ್ರವರಿ, 28: ನೂತನ ರಾಜ್ಯಸಭಾ ಸದಸ್ಯರ ವಿಜಯೋತ್ಸವದ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿರುವವರು ಬಿಜೆಪಿ ಆರ್.ಎಸ್.ಎಸ್ನಿಂದ ತರಬೇತಿ ಪಡೆದವರೇ ಆಗಿದ್ದಾರೆ ಎಂದು ಬಿಎಸ್ಪಿ ರಾಜ್ಯ ಉಸ್ತುವಾರಿ ಕೃಷ್ಣಮೂರ್ತಿ ಗಂಭೀರ ಆರೋಪ ಮಾಡಿದ್ದಾರೆ.
ಚಾಮರಾಜನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಂಡ್ಯದಲ್ಲಿ ನಡೆದ ಹನುಮಧ್ವಜ ವಿವಾದದ ವೇಳೆ ಕೂಡ ಆರ್.ಎಸ್.ಎಸ್ ಬಿಜೆಪಿಯ ಟ್ರೈನ್ಡ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿ ಕೋಮು ಗಲಭೆ ಸೃಷ್ಟಿಸಲು ಮುಂದಾಗಿದ್ದರು ಎಂದರು.

ಇತ್ತೀಚೆಗೆ ನಡೆದ ವಿಧಾನಸಭೆ, ವಿಧಾನಪರಿಷತ್, ರಾಜ್ಯಸಭಾ ಚುನಾವಣೆಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿದೆ. ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ಒಬ್ಬ ಶಾಸಕ ಕ್ರಾಸ್ ವೋಟಿಂಗ್ ಮಾಡಿದ್ದು, ಮತ್ತೊಬ್ಬ ಶಾಸಕ ಮತದಾನದಿಂದ ದೂರ ಉಳಿದಿದ್ದಾರೆ. ಈ ಮುಖಭಂಗವನ್ನು ಮುಚ್ಚಿಟ್ಟುಕೊಳ್ಳಲು ಪಾಕ್ ಪರ ಘೋಷಣೆ ಹಾಗೂ ಹೋರಾಟದ ಹುನ್ನಾರ ರೂಪಿಸಿರುವ ಗುಮಾನಿ ಇದೆ ಎಂದರು.
ಘೋಷಣೆ ಕೂಗಿಸಿ ಕೋಮುಗಲಭೆ ಸೃಷ್ಟಿಸುವ ಮೂಲಕ ದೇಶದಲ್ಲಿ ಅರಾಜಕತೆ ಉಂಟು ಮಾಡಲು ಮುಂದಾಗಿದ್ದಾರೆ. ಸರ್ಕಾರ ನಿನ್ನೆ ಘೋಷಣೆ ಕೂಗಲಾದ ವೀಡಿಯೋ ಅಸಲಿಯತ್ತು ಪರೀಕ್ಷೆಗೆ ಕಳುಹಿಸಿದ್ದು, ಎಫ್.ಎಸ್.ಎಲ್ ವರದಿ ಬರುವ ಮೊದಲೇ ಬಿಜೆಪಿ ನಾಯಕರು ಸದನದ ಹೊಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸುತ್ತಿರುವುದರ ಹಿಂದೆ ಹುನ್ನಾರ ಅಡಗಿದೆ ಎಂದರು.
ಹೀಗಾಗಿ ರಾಜ್ಯ ಸರ್ಕಾರ ನಿನ್ನೆ ನಡೆದ ಪ್ರಕರಣದ ಜೊತೆಗೆ ಮಂಡ್ಯ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ಪ್ರಕರಣಗಳನ್ನು ವಿಶೇಷ ತನಿಖೆಗೆ ಒಳಪಡಿಸಬೇಕು. ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಬೇಕು ಎಂದು ಆಗ್ರಹಿಸಿದರು. ಇನ್ನು ಪಾಕ್ ಪರ ಘೋಷಣೆ ಕೂಗುವವ ಮೂರ್ಖರು ಕರ್ನಾಟಕದಲ್ಲಿಲ್ಲ ಎಂದರು.
ಒಂದು ವೇಳೆ ಪಾಕ್ ಪರ ಒಲವು ಇಟ್ಟುಕೊಂಡಿದ್ದವರು ಇದ್ದರೇ ಅವರನ್ನು ಪಾಕಿಸ್ತಾನಕ್ಕೇ ಕಳುಹಿಸಲಿ. ಆ ದೇಶಕ್ಕೆ ಕಳುಹಿಸಲು ಕೇಂದ್ರ ಸರ್ಕಾರ ಕಾಯ್ದೆ ರೂಪಿಸಬೇಕು. ಜನರು ಕೋಮು ಗಲಭೆ ಸೃಷ್ಟಿಸುವವರ ಮಾತಿಗೆ ಮನ್ನಣೆ ನೀಡಬಾರದು ಎಂದು ಮನವಿ ಮಾಡಿದರು.
ಜಗದೀಶ್ ಶೆಟ್ಟರ್ ಫೇಸ್ಬುಕ್ ಖಾತೆ ಹ್ಯಾಕ್: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ. ಹಾಗಾದರೆ ಕಿಡಿಗೇಡಿಗಳು ಏನೆಲ್ಲ ಸಂದೇಶ ರವಾನೆ ಮಾಡಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜಗದೀಶ್ ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿರುವ ಕಿಡಿಗೇಡಿಗಳು ಹಣಕಾಸು ವ್ಯವಹಾರದ ಸಂದೇಶ ರವಾನೆ ಮಾಡಿದ್ದಾರೆ. "ಖಾತೆಗೆ 7,50,000 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲಿಯೇ ಲಾಭ ಬಂದಿದೆ. ನೀವು ಸಹ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ," ಎಂದು ಪೋಸ್ಟ್ ಮಾಡಿದ್ದಾರೆ.
ಇನ್ನು ಕ್ರಿಸ್ಟಿನಾ ಪನಾಟೆ ಎಂಬುವವರ ಸಲಹೆಯನ್ನೂ ಪಡೆಯಬಹುದು ಎಂದು ಬರೆಯಲಾಗಿದೆ. ಎಫ್ಬಿ ಖಾತೆ ಹ್ಯಾಕ್ ಆಗಿರುವ ಬಗ್ಗೆ ಪುತ್ರ ಸಂಕಲ್ಪ ಶೆಟ್ಟರ್ ಮಾಹಿತಿ ನೀಡಿದ್ದು, ಇದನ್ನು ನೋಡಿ ಯಾರೂ ಹಣ ಹಾಕಬೇಡಿ ಎಂದು ಮನವಿ ಮಾಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications